Karnataka BJP State President: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಫೈಟ್; ಬಿ ವೈ ವಿಜಯೇಂದ್ರ ಬೆಂಬಲ ಯಾರಿಗೆ?
ಬೆಂಗಳೂರು, ಜುಲೈ 17: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಮತ್ತೆ ಚೇತರಿಸಿಕೊಳ್ಳುತ್ತಿದೆ. ಬಿಜೆಪಿ ಪಾಳಯದಲ್ಲಿ ನೂತನ ಸಾರಥಿ ಆಯ್ಕೆ ವಿಚಾರ ಚರ್ಚೆಯಾಗುತ್ತಿದ್ದು, ಎರಡು ಕ್ಷೇತ್ರದಲ್ಲಿ ಸೋಲು ಕಂಡ ಮಾಜಿ ಸಚಿವ ವಿ ಸೋಮಣ್ಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.
ಇನ್ನೂ ಬಿಜೆಪಿ ಪಾಳಯದಲ್ಲಿ ನೂತನ ಸಾರಥಿ ಆಯ್ಕೆ ವಿಚಾರವಾಗಿ ಹಲವು ನಾಯಕರು ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದು, ರಾಜ್ಯಾಧ್ಯಕ್ಷ ಸ್ಥಾನವನ್ನ ಪಡೆಯುವಲ್ಲಿ ವಿ ಸೋಮಣ್ಣ ಬಿಜೆಪಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿದ್ದಾರೆ ಎನ್ನಲಾಗಿದ್ದು, ಸೋಮಣ್ಣ ಪರ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಬ್ಯಾಟೀಂಗ್ ಬೀಸಿದ್ದಾರೆ.

ಹೌದು, ಈ ಕುರಿತು ಸೋಮವಾರ ವಿಧಾನಸೌಧದಲ್ಲಿ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಕೊಡಲಿ ನನ್ನ ಬೆಂಬಲವೂ ಇದೆ ಎಂದು ಹೇಳಿದ್ದಾರೆ.
ಬೆಂಗಳೂರು ಮಹಾನಗರದಲ್ಲಿ ದೇಶದ ಎಲ್ಲಾ ವಿಪಕ್ಷಗಳು ಒಗ್ಗೂಡಿ ಸಭೆ ಮಾಡುತ್ತಿವೆ. ದೇಶದ ವಿಪಕ್ಷಗಳ ಕಥೆ ಹೇಗಾಗಿದೆ ಅಂದ್ರೆ. ಎತ್ತು ಏರಿಗೆ ಎಳೆದ್ರೆ, ಕೋಣ ನೀರಿಗೆ ಎಳೀತು ಅಂತ, ಅಂತಹ ಪರಿಸ್ಥಿತಿ ವಿಪಕ್ಷಗಳಿಗೆ ಆಗಿದೆ. ಮೋದಿಜಿ ನಾಯಕತ್ವ ಜಗತ್ತು ಕೊಂಡಾಡುತ್ತಿವೆ. 20ಕ್ಕೂ ಹೆಚ್ಚು ರಾಷ್ಟ್ರಗಳು ಅತ್ಯುನ್ನತ ನಾಗರೀಕ ಪ್ರಶಸ್ತಿ ನೀಡಿದೆ. ದೇಶದ ವಿಪಕ್ಷಗಳಿಗೆ ದೇಶ ಕಟ್ಟುವ ಚಿಂತನೆ ಇಲ್ಲ. ಹೇಗಾದ್ರೂ ಮಾಡಿ ಮತ್ತೆ ಅಧಿಕಾರಕ್ಕೆ ಬರಬೇಕು ಅನ್ನುವ ಚಿಂತನೆಯನ್ನ ಇಟ್ಟುಕೊಂಡಿದ್ದಾರೆ.
ಮತ್ತೆ ಮೋದಿ ಪ್ರಧಾನಿ ಆಗಬಾರದು ಅನ್ನೋ ಒನ್ ಲೈನ್ ಅಜೆಂಡಾ ಇವರದ್ದು. ಅವರಿಗೆ ಶುಭವಾಗಲಿ, ನೀವೇನೇ ಮಾಡಿದ್ರು ಜನ ಇದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮೂರನೇ ಬಾರಿ ಮೋದಿ ಪ್ರಧಾನಿ ಆಗುವುದನ್ನ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಜೆಡಿಎಸ್ ಜೊತೆ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ನನಗೂ ಆ ವಿಚಾರ ಗೊತ್ತಿಲ್ಲ.ಮಾಧ್ಯಮದಲ್ಲಿ ನೋಡಿ ತಿಳಿದುಕೊಂಡೆ, ನಾನು ಮೊದಲ ಬಾರಿ ಶಾಸಕನಾಗಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಳ್ಳಲಿ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.
ಮಳೆ ಕೊರತೆ, ರೈತರ ಆತ್ಮಹತ್ಯೆಯ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಹಿರಿಯ ನಾಯಕರ ಜೊತೆ ಚರ್ಚೆ ಮಾಡುತ್ತೇವೆ. ಸದನದಲ್ಲಿ ಇದು ಚರ್ಚೆಯಾಗಬೇಕು, ಮಳೆ ಮುಂದುವರೆದು ಹೋಗುತ್ತದೆ. ರೈತರ ಬಗ್ಗೆ ಗಂಭೀರವಾಗಿ ಪರಿಗಣಿಸಿ ಚರ್ಚೆ ಮಾಡಬೇಕು, ಆಡಳಿತ ಪಕ್ಷ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications