ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭ: ಸುನೀಲ್‍ಕುಮಾರ್ ಹೇಳಿದ್ದೇನು?

ಬೆಂಗಳೂರು, ಜನವರಿ 04: ಕಾಂಗ್ರೆಸ್ ಸರಕಾರದ ರಾಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ 'ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ' ಎಂಬ ಅಭಿಯಾನ ಇವತ್ತಿನಿಂದ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್‍ಕುಮಾರ್ ಅವರು ತಿಳಿಸಿದರು.

ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 1990 ಮತ್ತು 92ರ ಕರಸೇವೆಯಲ್ಲಿ ಕರ್ನಾಟಕದಿಂದಲೂ ಸಾವಿರಾರು ಜನರು ಅವತ್ತಿನ ಸರಕಾರದ ಬೆದರಿಕೆಗೂ ಬಗ್ಗದೆ ಭಾಗವಹಿಸಿದ್ದರು. ಅವತ್ತಿನ ಕಾಂಗ್ರೆಸ್ಸಿಗರು ಕರಸೇವೆಗೆ ಬೆದರಿಕೆ ಒಡ್ಡಿದ್ದರು. ಇವತ್ತು ಶ್ರೀರಾಮಮಂದಿರ ಉದ್ಘಾಟನೆ ಸಂದರ್ಭದಲ್ಲೂ ಕೂಡ ಕರಸೇವಕರು, ರಾಮಭಕ್ತರನ್ನು ಮತ್ತು ರಾಮಭಕ್ತರನ್ನು ಬೆದರಿಸುವ, ಭಯ ಪಡಿಸುವ ತಂತ್ರಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಆಕ್ಷೇಪಿಸಿದರು.

I Am A Karsevak Arrest Me Too Campaign Started Said Sunil kumar

ನಾವೆಲ್ಲರೂ ಈ ಹೋರಾಟದಲ್ಲಿ ಭಾಗವಹಿಸಿದವರು. ರಾಮಮಂದಿರದ ನಿರ್ಮಾಣವು ಬಿಜೆಪಿಯ ಬದ್ಧತೆ. ನಮ್ಮ ಪ್ರಣಾಳಿಕೆಯಲ್ಲಿ ಹತ್ತಾರು ವರ್ಷಗಳಿಂದ ಹೇಳುತ್ತಲೇ ಬಂದಿದ್ದೇವೆ. ರಾಮಮಂದಿರವು ಒಂದು ರಾಜಕೀಯ ವಸ್ತುವಲ್ಲ. ಅದೊಂದು ಭಾವನೆಯ, ನಡವಳಿಕೆಯ ಹಾಗೂ ಬದ್ಧತೆಯ ಪ್ರಶ್ನೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವಾಗ ರಾಮಭಕ್ತರನ್ನು ಕ್ರಿಮಿನಲ್‍ಗಳಿಗೆ ಹೋಲಿಸುವ ಕೆಲಸವನ್ನು ಸಿದ್ದರಾಮಯ್ಯನವರು ಇವತ್ತು ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಕಾರ್ಯಕರ್ತನನ್ನು ಕ್ರಿಮಿನಲ್ ಎಂದು ಹೇಳಿ ತನ್ನನ್ನು ಸಮರ್ಥಿಸಿಕೊಳ್ಳಲು ಸರಕಾರ ಹೊರಟಿದೆ. ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಕಾಂಗ್ರೆಸ್ಸಿಗರಿಗೆ ಅಮಾಯಕನಂತೆ ಕಾಣುತ್ತಾನೆ. ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಕೆ.ಜೆ.ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಾಕಿದವರು ಕಾಂಗ್ರೆಸ್ ಪಕ್ಷಕ್ಕೆ ಬ್ರದರ್ಸ್ ಆಗಿ ಕಾಣುತ್ತಾರೆ. ಆದರೆ, ಕರಸೇವೆಯಲ್ಲಿ ಭಾಗವಹಿಸಿದ ರಾಮಭಕ್ತರು ಮಾತ್ರ ಕಾಂಗ್ರೆಸ್ಸಿಗರಿಗೆ ಕ್ರಿಮಿನಲ್ ರೂಪದಲ್ಲಿ ಕಾಣುತ್ತಾರೆ ಎಂದು ಹೇಳಿದರು.

ಈ ಎಲ್ಲ ನಡವಳಿಕೆಯ ಮೂಲಕ ರಾಜ್ಯದ ಹಿಂದುಗಳಿಗೆ ಈ ಸರಕಾರ ಸತ್ತು ಹೋದಂತೆ ಕಾಣುತ್ತದೆ. ಈ ಸರಕಾರ ರೈತರ ಪರವಾಗಿಯೂ ಇಲ್ಲ. ಹಿಂದೂಗಳ ಪರವಾಗಿಯೂ ಇಲ್ಲ. ಈ ಸರಕಾರ ಕನ್ನಡ ಪರವಾಗಿಯೂ ಇಲ್ಲ. ಕೇವಲ ಅಲ್ಪಸಂಖ್ಯಾತರನ್ನು ವೈಭವೀಕರಿಸುವುದರಲ್ಲಿ, ತುಷ್ಟೀಕರಿಸುವುದರಲ್ಲಿ ಈ ಸರಕಾರ ಇವತ್ತು ಮುಂದುವರೆಯುತ್ತಿದೆ ಎಂದು ಸುನೀಲ್‍ಕುಮಾರ್ ಅವರು ಟೀಕಿಸಿದರು.

I Am A Karsevak Arrest Me Too Campaign Started Said Sunil kumar

ಈ ಅಭಿಯಾನ ಮುಂದುವರೆಯಲಿದೆ. ರಾಮಭಕ್ತರನ್ನು ಬೆದರಿಸುವ ಕಾರ್ಯವನ್ನು ಸರಕಾರ ಕೈಬಿಡಬೇಕು. ಮಂದಿರ ನಿರ್ಮಾಣ ಕಾರ್ಯದಲ್ಲಿ ಸರಕಾರವೂ ಸಹಕರಿಸಬೇಕು ಎಂದು ಆಗ್ರಹಿಸಿದರು. ನಾನು ಕೂಡ ಹತ್ತಾರು ಹೋರಾಟಗಳಲ್ಲಿ ಭಾಗವಹಿಸಿದ್ದೇನೆ. ಹೋರಾಟದಲ್ಲಿ ಭಾಗವಹಿಸಿದಾಗ ಪೊಲೀಸರು ಕೇಸುಗಳನ್ನು ಹಾಕಿಯೇ ಹಾಕುತ್ತಾರೆ. ಹಾಗಿದ್ದರೆ ನಾನೂ ಕೂಡ ಕ್ರಿಮಿನಲ್ಲಾ ಎಂದು ಪತ್ರಕರ್ತರ ಪ್ರಶ್ನೆಗೆ ಅವರು ಮರುಪ್ರಶ್ನೆ ಹಾಕಿದರು.

ರಾಜಕಾರಣಿಗಳೆಲ್ಲರೂ ಒಂದಲ್ಲ ಒಂದು ಹೋರಾಟದಲ್ಲಿ ಪಾಲ್ಗೊಂಡವರು. ಕೇಸು ಹಾಕಿದ ತಕ್ಷಣ ಕ್ರಿಮಿನಲ್ ಎನ್ನುವುದಾದರೆ ಎಲ್ಲ ರಾಜಕಾರಣಿಗಳೂ ಕೂಡ ಕ್ರಿಮಿನಲ್ ಆಗುತ್ತಾರೆ. ನನ್ನ ಮೇಲೆ 27 ಕೇಸಿತ್ತು. ಹಾಗಿದ್ದರೆ ನಾನು ಕೂಡ ಕ್ರಿಮಿನಲ್ಲಾ ಎಂದು ಕೇಳಿದರು. ಇದನ್ನು ಇವತ್ತು ಸರಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+