'ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ, ಬಿಜೆಪಿಯ ಮುಂದಿನ ಸಿಎಂ ಅಭ್ಯರ್ಥಿ'

ಬೆಂಗಳೂರು, ಫೆಬ್ರವರಿ 10: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದ್ದು, ಸದ್ಯ ರಾಜ್ಯ ಬಿಜೆಪಿಯಲ್ಲಿನ ಚರ್ಚೆ ಹೈಕಮಾಂಡ್‌ ಅಂಗಳದಲ್ಲಿದೆ. ಹಾಲಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ವಿರುದ್ಧ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರ ಬಣ ತಿರುಗಿಬಿದಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಪಟ್ಟುಹಿಡಿದಿದೆ.

ಹಾಲಿ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಡುವೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಜೋರಾಗಿದೆ. ಇದೇ ವಿಚಾರವಾಗಿ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ನನಗಿದೆ ಎಂದು ಬಹಿರಂಗವಾಗಿ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಹೇಳಿದ್ದಾರೆ.

I Am An Aspirant For The Position Of State President Basangouda Patil Yatnal

ನನಗೆ ರಾಜ್ಯ ಬಿಜೆಪಿ ಅಧ್ಯಕ್ಷನಾಗುವ ಸಾಮರ್ಥ್ಯವಿದೆ. ಅಷ್ಟೇ ಅಲ್ಲ, ಕರ್ನಾಟಕದ ಮುಖ್ಯಮಂತ್ರಿಯಾಗುವ ಸಾಮರ್ಥ್ಯವೂ ಇದೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಕರ್ನಾಟಕವನ್ನ ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲದೆ, ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಇದೇ ವಿಚಾರವಾಗಿ ನಮ್ಮ ಪ್ರಯತ್ನ ನಡೆಯುತ್ತಿದೆ. ಅಲ್ಲದೆ ಮತ್ತೆ ದೆಹಲಿಗೆ ಹೋಗುತ್ತಿರುವುದಾಗಿಯೂ ತಿಳಿಸಿದ್ದಾರೆ. ನಾನು ಬೇರೆಯವರಂತೆ ಲೂಟಿ ಹೊಡೆದಿಲ್ಲ. ನಾನು ಸಹ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಯತ್ನಾಳ್‌ ಹೇಳಿದರು.

ಇನ್ನೂ ಇತ್ತೀಚಿನ ದೆಹಲಿ ಭೇಟಿ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮಗೆ ಏನೂ ಅವಮಾನ ಆಗಿಲ್ಲ. ನಾವು ಇನ್ನೂ ಗಟ್ಟಿಯಾಗಿದ್ದೇವೆ. ನಾವು ವಿಜಯದ ಸಂಕೇತ ಇಟ್ಟುಕೊಂಡು ಬಂದಿದ್ದು, ವರಿಷ್ಠರು ಏನು ಹೇಳಬೇಕೋ ಹೇಳಿದ್ದಾರೆ. ಕೇಂದ್ರ ಬಿಜೆಪಿ ನಾಯಕರು ನಮ್ಮ ಸಮಸ್ಯೆಗೆ ಸ್ಪಂದಿಸಿದ್ದಾರೆ. ನಾವು ಅಲ್ಲಿ ಯಾರನ್ನು ಭೇಟಿಯಾದೆವು ಎಂಬುದನ್ನು ಗುಟ್ಟಾಗಿ ಇಡುವಂತೆ ಹೇಳಿದ್ದಾರೆಂದು ಬಸವನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದರು.

ಇನ್ನೂ ಸಚಿವ ವಿ ಸೋಮಣ್ಣ ಅವರ ಗೃಹ ಪ್ರವೇಶವಿದೆ. ಅದಕ್ಕೆ ದೆಹಲಿಗೆ ಹೋಗುತ್ತಿದ್ದೇವೆ. ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದೇವೆ. ನಮಗೆ ಗೆಲುವು ಸಿಗುವವರೆಗೂ ಪ್ರಯತ್ನಿಸುತ್ತಲೇ ಇರುತ್ತೇವೆ. ನಮ್ಮ ಹೋರಾಟ ಪಕ್ಷದ ವಿರುದ್ಧವಲ್ಲ, ಕುಟುಂಬ ರಾಜಕೀಯ ಮತ್ತು ಭ್ರಷ್ಟಾಚಾರದ ವಿರುದ್ಧ. ಬಿಜೆಪಿಯ ಕ್ಲೀನ್ ಇಮೇಜ್‌ನಿಂದಾಗಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದೇವೆ. ದೆಹಲಿ ಮುಖ್ಯಮಂತ್ರಿಯಾಗಿದ್ದಾಗ ಕೇಜ್ರಿವಾಲ್‌ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದರು. ಅದುವೇ ಅವರ ಸೋಲಿಗೆ ಕಾರಣವಾಯ್ತು ಎಂದು ಹೇಳಿದ ಅವರು, ಪಕ್ಷದಲ್ಲಿ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸಲು ಶ್ರೀರಾಮುಲು ಅವರು ರಾಜ್ಯ ಪ್ರವಾಸ ಮಾಡುತ್ತಿರುವ ಬಗ್ಗೆ ಮಾತನಾಡಿರುವುದು ಒಳ್ಳೆಯ ನಿರ್ಧಾರ. ಅದನ್ನು ಬೆಂಬಲಿಸುತ್ತೇನೆಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+