Get Updates
Get notified of breaking news, exclusive insights, and must-see stories!

ಬೆಂಗಳೂರು ಉತ್ತರದಿಂದ ಸ್ಪರ್ಧೆ : ಎಚ್.ಎಂ.ರೇವಣ್ಣ ಹೇಳುವುದೇನು?

Recommended Video

      ಬೆಂಗಳೂರು ಉತ್ತರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಎಚ್ ಎಂ ರೇವಣ್ಣ ಹೇಳಿದ್ದೇನು? | Oneindia Kannada

      ಬೆಂಗಳೂರು, ಜನವರಿ 03 : '2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ' ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಹೇಳಿದ್ದಾರೆ.

      ಬೆಂಗಳೂರು ಉತ್ತರ ಕ್ಷೇತ್ರ ಈ ಬಾರಿಯ ಚುನಾವಣೆಯಲ್ಲಿ ಬಹಳ ಗಮನ ಸೆಳೆದಿದೆ. ಮೂರು ಪಕ್ಷಗಳು ಕ್ಷೇತ್ರದ ಮೇಲೆ ಕಣ್ಣಿಟ್ಟಿವೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ.

      ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕ್ಷೇತ್ರದ ಹಾಲಿ ಸಂಸದರು. ಈ ಬಾರಿಯ ಚುನಾವಣೆಯಲ್ಲಿಯೂ ಅವರು ಪಕ್ಷದ ಅಭ್ಯರ್ಥಿ. ಆದರೆ, ಕ್ಷೇತ್ರವನ್ನು ವಶಕ್ಕೆ ಪಡೆದುಕೊಳ್ಳಬೇಕು ಎಂದು ಕಾಂಗ್ರೆಸ್, ಜೆಡಿಎಸ್ ತಂತ್ರ ರೂಪಿಸುತ್ತಿವೆ.

      ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ. ಎರಡೂ ಪಕ್ಷಗಳ ಮೈತ್ರಿಯಾದ ಬಳಿಕ ಕ್ಷೇತ್ರದಿಂದ ಯಾರು ಕಣಕ್ಕಿಳಿಯಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಎಚ್.ಡಿ.ದೇವೇಗೌಡರು ಕಣಕ್ಕಿಳಿದರೆ ಕ್ಷೇತ್ರ ದೇಶದ ಗಮನ ಸೆಳೆಯಲಿದೆ.....

      ಎಚ್.ಎಂ.ರೇವಣ್ಣ ಹೇಳುವುದೇನು?

      ಎಚ್.ಎಂ.ರೇವಣ್ಣ ಹೇಳುವುದೇನು?

      'ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ವಿಧಾನ ಪರಿಷತ್ ಅವಧಿಯೂ ಮುಗಿಯುತ್ತಾ ಬಂದಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಟಿಕೆಟ್ ನೀಡುವಂತೆ ಪಕ್ಷದ ನಾಯಕರಲ್ಲಿ ಮನವಿ ಮಾಡಿದ್ದೇನೆ. ಸಂಬಂಧಪಟ್ಟ ನಾಯಕರ ಜೊತೆ ಸಮಾಲೋಚನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ' ಎಂದು ಎಚ್.ಎಂ.ರೇವಣ್ಣ ಹೇಳಿದ್ದಾರೆ.

      ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ

      ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ

      'ಮಾಗಡಿ ಮತ್ತು ಹೆಬ್ಬಾಳ ವಿಧಾನಸಭಾ ಕ್ಷೇತ್ರಗಳನ್ನು ಪಕ್ಷದ ವರಿಷ್ಠರ ಸೂಚನೆಯಂತೆ ಬೇರೆಯವರಿಗೆ ಬಿಟ್ಟುಕೊಟ್ಟು ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಕಣಕ್ಕಿಳಿದಿದ್ದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ಕ್ಷೇತ್ರಗಳ ಪೈಕಿ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಾಗಿದ್ದು, ಆದ್ದರಿಂದ, ಟಿಕೆಟ್ ನೀಡುವಂತೆ ಮನವಿ ಮಾಡಲಾಗಿದೆ' ಎಂದು ಎಚ್.ಎಂ.ರೇವಣ್ಣ ಹೇಳಿದರು.

      ಎಚ್.ಡಿ.ದೇವೇಗೌಡರ ಕಣ್ಣು

      ಎಚ್.ಡಿ.ದೇವೇಗೌಡರ ಕಣ್ಣು

      ಮತ್ತೊಂದು ಕಡೆ ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಜೆಡಿಎಸ್ ಪಕ್ಷವೂ ಕಣ್ಣಿಟ್ಟಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟು, ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ಆದರೆ, ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ.

      ಸದಾನಂದ ಗೌಡರಿಗೆ ಸವಾಲು

      ಸದಾನಂದ ಗೌಡರಿಗೆ ಸವಾಲು

      2014ರ ಚುನಾವಣೆಯಲ್ಲಿ ಬಿಜೆಪಿಯ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ 718326 ಮತಗಳನ್ನು ಪಡೆದು ಜಯಗಳಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರು ಸಹ ಆದರು. ಈ ಬಾರಿ ಅವರಿಗೆ ಪ್ರಬಲ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+