'ಸವದಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು ನನಗೆ ಸಂತೋಷವಾಗಿದೆ' - ಬಸವರಾಜ ರಾಯರೆಡ್ಡಿ
'ಲಕ್ಷ್ಮಣ ಸವದಿ ನನಗೆ ಸುಮಾರು ವರ್ಷಗಳಿಂದ ಸ್ನೇಹಿತರು. ಜೊತೆಗೆ ಸವದಿ ನನ್ನ ಸಂಬಂಧಿಕರು ಆಗಿದ್ದಾರೆ. ಸವದಿ ಅವರು ರಾಜೀನಾಮೆ ನೀಡುತ್ತೇನೆ ಎಂದಾಗ ನಾನು ಕಾಂಗ್ರೆಸ್ ಪಕ್ಷ ಸೇರಲು ಸಲಹೆಯನ್ನು ನೀಡಿದೆ. ಇದರಿಂದ ಸವದಿ ಅವರೂ ಸಂತೋಷದಿಂದ ಒಪ್ಪಿಕೊಂಡರು. ಇದರಿಂದ ನನಗೆ ಸಂತೋಷವಾಗಿದೆ' ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಂಡಾಯದ ಪರ್ವ ಹೆಚ್ಚಾಗುತ್ತಿದೆ. ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪುತ್ತಿದ್ದಂತೆ ಹಲವು ಹಿರಿಯ ನಾಯಕರು ಪಕ್ಷ ತೊರೆಯಲು ನಿರ್ಧರಿಸಿದ್ದು, ಈ ಪಟ್ಟಿಗೆ ಇದೀಗ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಲಕ್ಷ್ಮಣ ಸವದಿ ಕೂಡ ಸೇರ್ಪಡೆಗೊಂಡಿದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಇಂದೇ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ರಾಯರೆಡ್ಡಿ, 'ಲಕ್ಷ್ಮಣ ಸವದಿಯವರು ಅಥಣಿಯಲ್ಲಿ ಸ್ಪರ್ಧೆ ಮಾಡುತ್ತಾರೆ. ಅವರು ಕಾಂಗ್ರೆಸ್ ಪಕ್ಷ ಸೇರಿದ್ದರಿಂದ ಬೆಳಗಾವಿಯಲ್ಲಿ ಮತ್ತಷ್ಟು ಕ್ಷೇತ್ರಗಳು ಗೆಲ್ಲುವ ವಿಶ್ವಾಸ ಹೆಚ್ಚಾಗಿದೆ. ಬೆಳಗಾವಿಯಲ್ಲಿ 13-14 ಸೀಟ್ ಗೆಲ್ಲಿತ್ತೇವೆ' ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಹೇಳಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು ಬೆಂಗಳೂರಿನಲ್ಲಿ ಇಂದು ಸಮಾಲೋಚನೆ ನಡೆಸಿದರು. ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, 'ಲಕ್ಷ್ಮಣ್ ಸವದಿ ಅವರನ್ನು ಭೇಟಿ ಮಾಡಿದ್ದೇವೆ. ಸೌಹಾರ್ದಯುತವಾಗಿ ನಮ್ಮ ಮಾತುಕತೆ ನಡೆದಿದೆ. ಅವರು ಮಾಡಿದ ಹೋರಾಟ ನಾವೆಲ್ಲಾ ಗಮನದಲ್ಲಿ ಇಟ್ಟುಕೊಂಡಿದ್ದೇವೆ. ಲಕ್ಷ್ಮಣ ಸವದಿ ನಮ್ಮ ಕುಟುಂಬದ ಸದಸ್ಯರಾಗಲು ಒಪ್ಪಿದ್ದಾರೆ' ಎಂದು ಹೇಳಿದರು. ಇಂದು ಸಂಜೆ ನಾಲ್ಕು ಗಂಟೆಯ ಬಳಿಕ ಲಕ್ಷ್ಮಣ ಸವದಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.
ಇದರಿಂದಾಗಿ ಚುನಾವಣೆ ಹೊತ್ತಲ್ಲೇ ಕೇಸರಿ ಪಾಳಯಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ತೊರೆಯುತ್ತಿರುವವರ ಪಟ್ಟಿ ಬೆಳೆಯುತ್ತಾ ಸಾಗಿದೆ. ಇದರಿಂದ ಬಿಜೆಪಿಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ.

ಲಕ್ಷ್ಮಣ ಸವದಿ ಪ್ರತಿಕ್ರಿಯೆ
''ನನ್ನ ಕನಸು ನನಸಿಗೆ ಸಾಥ್ ಕೊಡುವ, ನನಗೆ ಗೌರವ ಸಿಗುವ ಪಕ್ಷದಿಂದ ಅಥವಾ ಪಕ್ಷೇತರನಾಗಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದು ಶತಸ್ಸಿದ್ಧ,'' ಎಂದು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದ್ದಾರೆ. ಪಟ್ಟಣದಲ್ಲಿ ಗುರುವಾರ ಸಂಜೆ ನಡೆದ ಸ್ವಾಭಿಮಾನಿ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿ, ''ಈ ಬಾರಿ ಗೆದ್ದರೆ ಮಾತ್ರ ಸನ್ಮಾನ, ಹಾರಗಳನ್ನು ಸ್ವೀಕರಿಸುತ್ತೇನೆ. ಸೋತರೆ ಜೀವಮಾನವಿಡೀ ಹಾರ, ಸನ್ಮಾನ, ಶಾಲು ಸ್ವೀಕರಿಸುವುದಿಲ್ಲ. ನನ್ನ ಜೀವ ಹೋದ ಮೇಲೆ ಹಾರ ಹಾಕಿ,'' ಎಂದು ಶಪಥಗೈದರು.
'ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ, ಆದರೆ ಪಕ್ಷದ ಕೆಲ ಮುಖಂಡರು ದ್ರೋಹವೆಸಗಿದ್ದಾರೆ. ಹಲವು ರಾಷ್ಟ್ರೀಯ ನಾಯಕರು ಬಂದಾಗ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿಕ್ಕೂ ಅವಕಾಶ ನೀಡದೆ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ,'' ಎಂದು ನೋವು ತೋಡಿಕೊಂಡರು.
ರಾಜ್ಯ ಚುನಾವಣೆ ದಿನಾಂಕ
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications