ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ : ಸಿ. ಪಿ. ಯೋಗೇಶ್ವರ
ಬೆಂಗಳೂರು, ಜುಲೈ 26 : "ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಾರೆ. ಜನರ ಆಶೋತ್ತರಗಳಿಗೆ ತಕ್ಕಂತೆ ಬಿಜೆಪಿ ಕೆಲಸ ಮಾಡುತ್ತದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ" ಎಂದು ಮಾಜಿ ಸಚಿವ ಸಿ. ಪಿ. ಯೋಗೇಶ್ವರ ಹೇಳಿದರು.
ಶುಕ್ರವಾರ ಬಿ. ಎಸ್. ಯಡಿಯೂರಪ್ಪರ ಡಾಲರ್ಸ್ ಕಾಲೋನಿ ನಿವಾಸ 'ಧವಳಗಿರಿ' ಬಳಿ ಮಾತನಾಡಿದ ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ ಸಿ. ಪಿ. ಯೋಗೇಶ್ವರ, "ಮೈತ್ರಿ ಸರ್ಕಾರ ಮುಂದುವರಿಕೆ ವಿಫಲ ಆಗಿದೆ. ನಮ್ಮ ನಾಯಕ ಯಡಿಯೂರಪ್ಪಗೆ ಸರ್ಕಾರ ರಚನೆಯ ಅವಕಾಶ ಸಿಕ್ಕಿದೆ" ಎಂದರು.
"4ನೇ ಬಾರಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ.
ಜನರ ಆಶೋತ್ತರಗಳಿಗೆ ತಕ್ಕಂತೆ ಬಿಜೆಪಿ ಕೆಲಸ ಮಾಡುತ್ತೆ. ಕಾಂಗ್ರೆಸ್-ಜೆಡಿಎಸ್ ಆಂತರಿಕ ಜಂಜಾಟದಿಂದ ಸರ್ಕಾರ ಬಿತ್ತು. ಅವರ ಸರ್ಕಾರವನ್ನು ನಾವು ಅಸ್ಥಿರಗೊಳಿಸಿಲ್ಲ" ಎಂದು ಸ್ಪಷ್ಟಪಡಿಸಿದರು.

"ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋಲು ಕಂಡಿತ್ತು.
ನಾಲ್ಕು ದಿನಗಳ ನಂತರ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಬಿ. ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಇದು ನಾಡಿನ ಜನತೆಗೆ ಸಿಹಿ ಸುದ್ದಿಯಾಗಿದೆ" ಎಂದು ಹೇಳಿದರು.
"ಬಹುಮತ ಸಾಬೀತು ಮಾಡಲು ರಾಜ್ಯಪಾಲರು ಸಮಯ ನಿಗದಿ ಮಾಡಲಿದ್ದಾರೆ.
ನಮ್ಮ ಸಂಖ್ಯಾಬಲ ಹೆಚ್ಚಿದೆ. ಕಾನೂನಿನಡಿಯಲ್ಲಿ ಅತೃಪ್ತರ ರಾಜೀನಾಮೆ ಬಗೆಹರಿಯಲಿದೆ" ಎಂದು ಯೋಗೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.
ಆಪರೇಷನ್ ಕಮಲದ ವಿಚಾರದಲ್ಲಿ ಸಿ. ಪಿ. ಯೋಗೇಶ್ವರ ಪಾತ್ರ ದೊಡ್ಡದು. ಹಲವು ಶಾಸಕರ ಜೊತೆ ಅವರು ನಿರಂತರ ಸಂಪರ್ಕದಲ್ಲಿದ್ದರು. 2018ರ ಚುನಾವಣೆಯಲ್ಲಿ ಸೋಲು ಕಂಡಿರುವ ಯೋಗೇಶ್ವರ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳಿದ್ದಾರೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications