Siddaramaiah: ನಾನು ಮುಖ್ಯಮಂತ್ರಿ ಆಗಿದ್ದೇ ಈ ಬಲದಿಂದ : ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 26: ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ಆಗಿದ್ದೇ ಈ ಸಂವಿಧಾನ ಬಲದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 75 ನೇ ವರ್ಷದ ಸಂವಿಧಾನ ಅಂಗೀಕರಣ ದಿನೋತ್ಸವವನ್ನು ಉದ್ಘಾಟಿಸಿ, ಪ್ರಜಾಪ್ರಭುತ್ವ ದಿನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಧಿಕಾರಿಗಳು ಮತ್ತು ನಾಗರಿಕ ಸಂಘಟನೆಗಳ ಮುಖಂಡರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಿ ಮಾತನಾಡಿ, ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ. ಸಂವಿಧಾನ ಜಾರಿ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನು ನಾವ್ಯಾರೂ ಮರೆಯಬಾರದು.

ಎಷ್ಟೇ ಒಳ್ಳೆ ಸಂವಿಧಾನ ನಮ್ಮದಾಗಿದ್ದರೂ ಅದು ಕೆಟ್ಟವರ ಕೈಗೆ ಹೋದರೆ ಪರಿಣಾಮವೂ ಕೆಟ್ಟದಾಗಿರುತ್ತದೆ ಎನ್ನುವ ಎಚ್ಚರಿಕೆ ನೀಡಿದ್ದಾರೆ. ಸಂವಿಧಾನದ ಮೌಲ್ಯಗಳನ್ನು ಪಾಲಿಸುವವರ ಕೈಯಲ್ಲಿ ಈ ಸಂವಿಧಾನ ಇದ್ದಾಗ ಮಾತ್ರ ಸಾರ್ಥಕತೆ ಬರುತ್ತದೆ ಎಂದು ಬಾಬಾ ಸಾಹೇಬರು ಹೇಳಿದ್ದರು. ಆದ್ದರಿಂದ ಈ ಸಂವಿಧಾನದ ಮೌಲ್ಯಗಳನ್ನು ವಿರೋಧಿಸುವವರ ಕೈಗೆ ಅಧಿಕಾರ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದರು.
ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದೇವೆ. ಆದ್ದರಿಂದ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಳ್ಳಬೇಕಿದೆ. ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವುದು, ಪಾಲಿಸುವುದು ಎಂದರೆ ಸಾಮಾಜಿಕ ನ್ಯಾಯ, ಸಮಾನತೆ, ಬ್ರಾತೃತ್ವವನ್ನು ಪಾಲಿಸಬೇಕು ಎಂದರು. ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಎಚ್ಚರಿಕೆ ನಮಗೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ RSS ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು.
ಬಾಬಾ ಸಾಹೇಬರ ಸಂವಿಧಾನ ಜಾರಿಗೂ ಮೊದಲು ಮನುಷ್ಯ-ಮನುಷ್ಯರನ್ನು ತಾರತಮ್ಯದಿಂದ ಶೋಷಿಸುವ, ಅಸಮಾನತೆಯನ್ನು ಆಚರಿಸುವ ಅನಾಗರಿಕ ವ್ಯವಸ್ಥೆ ಮತ್ತು ಶೂದ್ರರು-ದಲಿತರು-ಮಹಿಳೆಯರಿಗೆ ಶಿಕ್ಷಣವನ್ನು ವಿರೋಧಿಸುವ ಅಲಿಖಿತವಾದ ಮನುಸ್ಮೃತಿಯ ಪದ್ಧತಿಗಳು ಭಾರತದಲ್ಲಿ ಜಾರಿಯಲ್ಲಿತ್ತು. ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿದ್ದಾರೆ ಎಂದು ಎಚ್ಚರಿಸಿದರು.
ಈ ಚರಿತ್ರೆಯನ್ನು, ಇತಿಹಾಸವನ್ನು ನಾವು ಮರೆಯಬಾರದು. ನಮಗೆ ಬಂದಿರುವ ಸ್ವಾತಂತ್ರ್ಯ ಸಫಲ ಆಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಾಧ್ಯ ಎಂದು ಅಂಬೇಡ್ಕರ್ ಅವರು ಹೇಳಿದ್ದರು.ವಿಶ್ವದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿದ ಬಳಿಕ ಅಂಬೇಡ್ಕರ್ ಅವರು ನಮ್ಮ ಅತ್ಯುನ್ನತವಾದ ಸಂವಿಧಾನವನ್ನು ರಚಿಸಿದ್ದಾರೆ.
ಮೋದಿ ಮಂತ್ರಿ ಮಂಡಲದಲ್ಲಿ ಮಂತ್ರಿ ಆಗಿದ್ದ ಅನಂತ ಕುಮಾರ ಹೆಗ್ಡೆ ಅವರು, "ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಸಾರ್ವಜನಿಕವಾಗಿ ಒಪ್ಪಿಕೊಂಡರು. ಆದರೆ ಮೋದಿಯವರಾಗಲಿ, ಬಿಜೆಪಿಯವರಾಗಲಿ ಇದನ್ನು ವಿರೋಧಿಸಲಿಲ್ಲ. ಅವರನ್ನು ಮಂತ್ರಿ ಸ್ಥಾನದಿಂದ ಇಳಿಸಲಿಲ್ಕ. ಆದ್ದರಿಂದ ಅನಂತ ಕುಮಾರ ಹೆಗ್ಡೆ ಅವರ ಮಾತಿಗೆ ಅವರೆಲ್ಲರ ಸಮ್ಮತಿ ಇತ್ತು ಅಂತಲೇ ಅರ್ಥ. ಇದನ್ನು ದೇಶದ ಜನತೆ ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಸಂವಿಧಾನದ ಧ್ಯೇಯೋದ್ದೇಶಗಳನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸರ್ಕಾರ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗ ಸಂವಿಧಾನದ ಪ್ರಕಾರವೇ ನಡೆದುಕೊಳ್ಳಬೇಕು. ನಮ್ಮ ಸರ್ಕಾರ ಕೂಡ ಸಂವಿಧಾನದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ಹತ್ತು ಹಲವು ಭಾಗ್ಯಗಳನ್ನು ಜಾರಿ ಮಾಡಿದೆವು. ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವ ಕಾರ್ಯಕ್ರಮಗಳನ್ನು ನಾವು ರೂಪಿಸಿ, ಜಾರಿ ಮಾಡಿದ್ದೇವೆ ಎಂದರು.
ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ವಿರುದ್ಧ ಕರೆ ನೀಡಿದ್ದರು. ಆದರೆ ಇವತ್ತಿಗೂ ಜಾತಿ ಹೋಗಿಲ್ಲ. ಆರ್ಥಿಕ, ಸಾಮಾಜಿಕ ಸಮಾನತೆ ಬರದೆ ಜಾತಿ ವ್ಯವಸ್ಥೆ ಹೋಗಲು ಸಾಧ್ಯವಿಲ್ಲ ಎಂದರು. ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಆದ್ದರಿಂದ ಜಾತ್ಯಾತೀತರಾಗಿ ಮಕ್ಕಳನ್ನು ಬೆಳೆಸುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಅತ್ಯುನ್ನತ ಗೌರವ ಎಂದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications