ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ಮುಖ ನೋಡಲಾಗುತ್ತಿಲ್ಲ, ಬಿಜೆಪಿಯವರು ಯಾಕೆ ಹೀಗೆ: ದೇವೇಗೌಡ

|
Google Oneindia Kannada News

ಬೆಂಗಳೂರು, ಜೂನ್ 26: ಪ್ರತೀ ಒಂದು ವಿಚಾರದಲ್ಲಿ ಈ ರೀತಿ ತೊಂದರೆ ಬಂದರೆ, ಕುಮಾರಸ್ವಾಮಿ ಸರಕಾರ ನಡೆಸುವುದಾದರೂ ಹೇಗೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ರಾಯಚೂರು ಹೋಗುವ ಮೊದಲೇ ಪ್ರತಿಭಟನೆ ನಡೆಸಿದರೆ ಸಮಸ್ಯೆಗೆ ಪರಿಹಾರ ಸಿಗಲು ಹೇಗೆ ಸಾಧ್ಯ? ಇದೆಲ್ಲಾ ಬಿಜೆಪಿಯವರ ಕುತಂತ್ರ ರಾಜಕಾರಣ, ಯಾವುದಾದರೂ ಒಂದು ವಿಚಾರವನ್ನು ಇಟ್ಟುಕೊಂಡು ಅವರು ಪ್ರತಿಭಟನೆ ನಡೆಸುತ್ತಿದ್ದಾರೆಂದು ದೇವೇಗೌಡ್ರು ಹೇಳಿದ್ದಾರೆ.

ವೋಟು ಮೋದಿಗೆ ಹಾಕ್ತೀರಿ, ಸಮಸ್ಯೆ ನಾನು ಬಗೆಹರಿಸಬೇಕಾ?: ಪ್ರತಿಭಟನಾಕಾರರ ವಿರುದ್ಧ ಸಿಎಂ ಕಿಡಿವೋಟು ಮೋದಿಗೆ ಹಾಕ್ತೀರಿ, ಸಮಸ್ಯೆ ನಾನು ಬಗೆಹರಿಸಬೇಕಾ?: ಪ್ರತಿಭಟನಾಕಾರರ ವಿರುದ್ಧ ಸಿಎಂ ಕಿಡಿ

ಮುಖ್ಯಮಂತ್ರಿಗಳ ಮುಖ ನೋಡಲು ಸಾಧ್ಯವಾಗುತ್ತಿಲ್ಲ, ಜನರ ಸಮಸ್ಯೆಯನ್ನು ಹತ್ತಿರದಿಂದ ಆಲಿಸಲು ಅವರು ಗ್ರಾಮ ವಾಸ್ತವ್ಯಕ್ಕೆ ಹೋಗುತ್ತಿರುವುದು, ಪ್ರಚಾರಕ್ಕಾಗಿ ಅಲ್ಲ ಎಂದು ದೇವೇಗೌಡ್ರು ಹೇಳಿದ್ದಾರೆ.

I cannot see Chief Minister face, why BJP leaders are like this: Deve Gowda

ದೇಶದಲ್ಲೇ ಗ್ರಾಮ ವಾಸ್ತವ್ಯ ಎನ್ನುವುದು ವಿನೂತನ ಕಾರ್ಯಕ್ರಮ, ಇದನ್ನು ತಡೆಯಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ಅಸಾಹಯಕತೆಯಿಂದ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈಗ ನಡೆಯುತ್ತಿರುವ ಪ್ರತಿಭಟನೆ ಉದ್ದೇಶಪೂರ್ವಕವಾಗಿ ನಡೆಯುತ್ತಿರುವುದು ಎಂದು ದೇವೇಗೌಡ್ರು, ಬಿಜೆಪಿಯವರ ಮೇಲೆ ಕಿಡಿಕಾರಿದ್ದಾರೆ.

ಬಿಜೆಪಿ ಮುಖಂಡ ಸಿ ಟಿ ರವಿ, ಹೈಟೆಕ್ ಆಸ್ಪತ್ರೆಯ ವೈದ್ಯರಾ, ಮೊದಲು ಅವರ ನಾಯಕರಿಗೆ ಬುದ್ದಿ ಹೇಳುವ ಕೆಲಸವನ್ನು ಅವರು ಮಾಡಲಿ ಎಂದು ರವಿ ವಿರುದ್ದ ಗೌಡ್ರು ಗರಂ ಆಗಿದ್ದಾರೆ.

ಶಿವನಗೌಡರಿಂದ ನಮ್ಮ ಕುಟುಂಬ ಕಲಿಯಬೇಕಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿಶಿವನಗೌಡರಿಂದ ನಮ್ಮ ಕುಟುಂಬ ಕಲಿಯಬೇಕಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

ಮುಖ್ಯಮಂತ್ರಿಯಾದವರು ತಾಳ್ಮೆ ಕಳೆದುಕೊಂಡರೆ ಹೇಗೆ, ಅವರ ಆರೋಗ್ಯದ ಕಥೆ ಏನಾಗಬೇಕು ಎಂದು ಸಿ ಟಿ ರವಿ, ರಾಯಚೂರು ಘಟನೆಯನ್ನು ಉಲ್ಲೇಖಿಸಿ ಲೇವಡಿ ಮಾಡಿದ್ದರು.

English summary
I cannot see Chief Minister Kumaraswamy face, why BJP leaders are like this: JDS Supremo Deve Gowda
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X