ನಾನು ತಪ್ಪು ಮಾಡಿಲ್ಲ ಕ್ಷಮೆ ಕೇಳಲ್ಲ: ಶ್ರುತಿ ಹರಿಹರನ್
ಬೆಂಗಳೂರು, ಅಕ್ಟೋಬರ್ 25: 'ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ಕ್ಷಮೆ ಕೇಳಲ್ಲ' ಎಂದು ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿರುವ ನಟಿ ಶ್ರುತಿ ಹರಿಹರನ್ ಹೇಳಿದರು.
ಶ್ರುತಿ ಹರಿಹರನ್ ಅವರು ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದು ವಿವಾದ ಆಗಿತ್ತು. ಅದಕ್ಕಾಗಿ ಇಂದು ಕನ್ನಡ ಫಿಲ್ಮ್ ಚೇಂಬರ್ನಲ್ಲಿ ಆಯೋಜಿಸಿದ್ದ ಸಂಧಾನ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ಹೇಳಿದರು.
ಸಮಾಜ ಹೇಗಾಗಿದೆ ಎಂದರೆ ಯಾರದ್ದೇ ತಪ್ಪಿದ್ದರು ಸಹ ಹೆಣ್ಣೆ ಕ್ಷಮೆ ಕೇಳಬೇಕು, ಹೆಣ್ಣಿನದ್ದೇ ತಪ್ಪು ಎಂದು ಬಿಂಬಿಸಲಾಗುತ್ತದೆ ಎಂದು ಶ್ರುತಿ ಹರಿಹರನ್ ಹೇಳಿದರು.

ಮುನಿರತ್ನ ಅವರು ಕವಿತಾ ಅವರಿಗೆ ಕರೆ ಮಾಡಿ ಹೀಗೊಂದು ಸಂಧಾನ ಸಭೆಗೆ ಬರಲು ಹೇಳಿದರು. ಐದು ವರ್ಷದಿಂದ ಕನ್ನಡ ಸಿನಿಮಾ ರಂಗದಲ್ಲಿ ಇರುವ ಕಾರಣ ಚೇಂಬರ್ ಮೇಲಿದ್ದ ಗೌರವದಿಂದ ಇಲ್ಲಿಯವರೆಗೆ ಬಂದಿದ್ದೇನೆ ಎಂದು ಶ್ರುತಿ ಹರಿಹರನ್ ಹೇಳಿದರು.
ಅಂಬರೀಶ್ ಅವರು ಬೆಳಿಗ್ಗೆ ಅಭಿಪ್ರಾಯಗಳನ್ನು ತಿಳಿಸಲು ಹೇಳಿದ್ದಾರೆ ಹಾಗಾಗಿ ನಾನು ಬೆಳಿಗ್ಗೆವರೆಗು ಕಾಯುತ್ತೇನೆ. ಅರ್ಜುನ್ ಸರ್ಜಾ ಅವರು ನನ್ನ ಮೇಲೆ ಎರಡು ಪ್ರಕರಣ ದಾಖಲಿಸಿದ್ದಾರೆ. ನಾನೇ ಮೊದಲಾಗಿ ಪ್ರಕರಣ ದಾಖಲಿಸಬಾರದು ಎಂಬ ಕಾರಣಕ್ಕೆ ವಕೀಲರನ್ನು ತಡೆದು ನಿಲ್ಲಿಸಿದ್ದೆ ಆದರೆ ನಾಳೆ ನಾನು ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications