ನಾನು ತಪ್ಪು ಮಾಡಿಲ್ಲ ಕ್ಷಮೆ ಕೇಳಲ್ಲ: ಶ್ರುತಿ ಹರಿಹರನ್
ಬೆಂಗಳೂರು, ಅಕ್ಟೋಬರ್ 25: 'ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ಕ್ಷಮೆ ಕೇಳಲ್ಲ' ಎಂದು ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿರುವ ನಟಿ ಶ್ರುತಿ ಹರಿಹರನ್ ಹೇಳಿದರು.
ಶ್ರುತಿ ಹರಿಹರನ್ ಅವರು ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದು ವಿವಾದ ಆಗಿತ್ತು. ಅದಕ್ಕಾಗಿ ಇಂದು ಕನ್ನಡ ಫಿಲ್ಮ್ ಚೇಂಬರ್ನಲ್ಲಿ ಆಯೋಜಿಸಿದ್ದ ಸಂಧಾನ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ಹೇಳಿದರು.
ಸಮಾಜ ಹೇಗಾಗಿದೆ ಎಂದರೆ ಯಾರದ್ದೇ ತಪ್ಪಿದ್ದರು ಸಹ ಹೆಣ್ಣೆ ಕ್ಷಮೆ ಕೇಳಬೇಕು, ಹೆಣ್ಣಿನದ್ದೇ ತಪ್ಪು ಎಂದು ಬಿಂಬಿಸಲಾಗುತ್ತದೆ ಎಂದು ಶ್ರುತಿ ಹರಿಹರನ್ ಹೇಳಿದರು.

ಮುನಿರತ್ನ ಅವರು ಕವಿತಾ ಅವರಿಗೆ ಕರೆ ಮಾಡಿ ಹೀಗೊಂದು ಸಂಧಾನ ಸಭೆಗೆ ಬರಲು ಹೇಳಿದರು. ಐದು ವರ್ಷದಿಂದ ಕನ್ನಡ ಸಿನಿಮಾ ರಂಗದಲ್ಲಿ ಇರುವ ಕಾರಣ ಚೇಂಬರ್ ಮೇಲಿದ್ದ ಗೌರವದಿಂದ ಇಲ್ಲಿಯವರೆಗೆ ಬಂದಿದ್ದೇನೆ ಎಂದು ಶ್ರುತಿ ಹರಿಹರನ್ ಹೇಳಿದರು.
ಅಂಬರೀಶ್ ಅವರು ಬೆಳಿಗ್ಗೆ ಅಭಿಪ್ರಾಯಗಳನ್ನು ತಿಳಿಸಲು ಹೇಳಿದ್ದಾರೆ ಹಾಗಾಗಿ ನಾನು ಬೆಳಿಗ್ಗೆವರೆಗು ಕಾಯುತ್ತೇನೆ. ಅರ್ಜುನ್ ಸರ್ಜಾ ಅವರು ನನ್ನ ಮೇಲೆ ಎರಡು ಪ್ರಕರಣ ದಾಖಲಿಸಿದ್ದಾರೆ. ನಾನೇ ಮೊದಲಾಗಿ ಪ್ರಕರಣ ದಾಖಲಿಸಬಾರದು ಎಂಬ ಕಾರಣಕ್ಕೆ ವಕೀಲರನ್ನು ತಡೆದು ನಿಲ್ಲಿಸಿದ್ದೆ ಆದರೆ ನಾಳೆ ನಾನು ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications