ಸನ್ನಿವೇಶದ ಲಾಭ ಪಡೆದು ಸಿಎಂ ಆಗಲು ಬಯಸುವುದಿಲ್ಲ: ಸಿದ್ದರಾಮಯ್ಯ
Recommended Video
ಬೆಂಗಳೂರು, ಜುಲೈ 12: ಅತೃಪ್ತ ಶಾಸಕರ ರಾಜೀನಾಮೆ ಪರ್ವ ಶುರುವಾದಾಗಿನಿಂದಲೂ ಈ ರಾಜಕೀಯ ನಾಟಕಕ್ಕೆ ಸಿದ್ದರಾಮಯ್ಯ ಅವರದ್ದೇ ನಿರ್ದೇಶಕ ಎಂಬ ದಟ್ಟ ಊಹಾಪೋಹಗಳು ಹರಿದಾಡಿದ್ದವು, ಆ ನಂತರ ಅವರು ಅದನ್ನು ಸ್ಪಷ್ಟವಾಗಿ ನಿರಾಕರಿಸಿದ್ದರು.
ಇಂದು ಮತ್ತೊಮ್ಮೆ ಈ ಬಗ್ಗೆ ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ, ಇಂತಹಾ ಕೆಟ್ಟ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಸಿಎಂ ಸ್ಥಾನವನ್ನು ನಾನು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಎಂಟಿಬಿ ಎದೆ ಬಗೆದು ನೋಡೋಕೆ ಆಗುತ್ತದೆಯೇ? : ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಬಹುಮತವಿಲ್ಲ, ಹಾಗಿದ್ದಾಗ ನಾನು ಸಿಎಂ ಆಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರೇ ಹೆಚ್ಚು ಮಂದಿ ರಾಜೀನಾಮೆ ನೀಡಿರುವ ಕಾರಣ ಸಿದ್ದರಾಮಯ್ಯ ಅವರೇ ಈ ರಾಜೀನಾಮೆಗಳನ್ನು ಕೊಡಿಸಿದ್ದಾರೆ ಎಂಬ ಅನುಮಾನ ದಟ್ಟವಾಗಿ ಹರಿದಾಡಿತ್ತು, ಅದಕ್ಕೆ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
ಶಿಷ್ಯರ ವಿರುದ್ಧ ಸಿದ್ದರಾಮಯ್ಯ ಸಮರ, ಶಾಸಕರ ಅನರ್ಹತೆಗೆ ಮನವಿ!
ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಬರೆದಿರುವ ಸಿದ್ದರಾಮಯ್ಯ, ನನ್ನ ಎದೆ ಬಗೆದ್ರೆ ಸಿದ್ದರಾಮಯ್ಯ ಕಾಣ್ತಾರೆ ಅಂತ ಎಂಟಿಬಿ ನಾಗರಾಜ್ ಹೇಳ್ತಿದ್ರು. ಅವ್ರೇ ರಾಜೀನಾಮೆ ಕೊಟ್ಟಿದ್ದಾರೆ, ಈಗ ನಾನು ಅವರ ಎದೆ ಬಗೆದು ನೋಡೋಕೆ ಆಗುತ್ತದೆಯೇ? ಎಂದು ಹತಾಶೆಯಿಂದ ನುಡಿದಿದ್ದಾರೆ.