MP Renukacharya: ಗ್ಯಾರಂಟಿ ಯೋಜನೆ ನಂಗೂ ಬೇಡ, ನನ್ನ ಕುಟುಂಬಕ್ಕೂ ಬೇಡ: ಎಂ ಪಿ ರೇಣುಕಾಚಾರ್ಯ
ದಾವಣಗೆರೆ, ಜೂನ್ 07: ನನಗೂ, ನಮ್ಮ ಕುಟುಂಬದ ಸದಸ್ಯರಿಗೂ ಕಾಂಗ್ರೆಸ್ ಸರ್ಕಾರ ನೀಡುವ ಭರವಸೆಗಳನ್ನು ಬಳಸುವುದಿಲ್ಲ ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಗ್ಯಾರಂಟಿ ಭರವಸೆಗಳನ್ನ ನೀಡಿತ್ತು. ಐದು ಭರವಸೆಗಳನ್ನು ನಿಬಂಧನೆಗಳಿಲ್ಲದೇ ಐದು ಗ್ಯಾರಂಟಿಗಳನ್ನು ಜಾರಿ ಮಾಡಬೇಕು, ಸರಕಾರ ಭರವಸೆಗಳ ಮೇಲೆ ಷರತ್ತುಗಳನ್ನು ಹಾಕಬಾರದೆಂದು ಮಾಜಿ ಶಾಸಕ ರೇಣುಕಾಚಾರ್ಯ ಒತ್ತಾಯಿಸಿದರು.

ಈಗಾಗಲೇ ಸಿದ್ದರಾಮಯ್ಯ,ಡಿ.ಕೆ.ಶಿವಕುಮಾರ್ ಅವರು ಚುನಾವಣಾ ಪೂರ್ವದಲ್ಲಿ ಭರವಸೆ ನೀಡುವಾಗ ಯಾವುದೇ ಷರತ್ತುಗಳನ್ನು ವಿಧಿಸಿರಲಿಲ್ಲ. ಈಗ ಸರಕಾರ ಷರತ್ತುಗಳನ್ನು ವಿಧಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದು, ಭರವಸೆಗಳ ಮೇಲೆ ಯಾವುದೇ ಷರತ್ತುಗಳನ್ನು ಹಾಕ ಬಾರದೆಂದು ಸರಕಾರವನ್ನ ಆಗ್ರಹಿಸಿದ್ದಾರೆ.
ಈ ಹಿಂದೆ ಗೃಹಜ್ಯೋತಿ ಭರವಸೆಯಲ್ಲಿ ಎಲ್ಲರಿಗೂ 200 ಯುನಿಟ್ ವಿದ್ಯುತ್ ಫ್ರೀ ಎಂದು ಹೇಳಿ ಈಗ 12 ತಿಂಗಳ ಸರಾಸರಿ ಮಾಡಲಾವುದು ಎಂದು ಹೇಳುತ್ತಿದ್ದೀರಿ, ಅಷ್ಟೇ ಅಲ್ಲದೇ ಬಾಡಿಗೆ ಇರುವರು 200 ಯುನಿಟ್ ಉಚಿತ ಎಂದು ಹೇಳಿ ಈಗ ಷರತ್ತು ಹಾಕುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಯಾವುದೇ ಷರತ್ತು ಹಾಕದೇ ಕೊಟ್ಟ ಮಾತನ್ನು ಉಳಿಸಿಕೊಳ್ಳ ಬೇಕು, ವಚನ ಭ್ರಷ್ಟರಾಗಬಾರದೆಂದರು.
ಇನ್ನೂ ಅನ್ನ ಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ಎಂದು ಭರವಸೆಯಲ್ಲಿ ನೀಡಿದ್ದಿರಾ. ಆದರೇ ಕೇಂದ್ರ ಸರಕಾರ ಐದು ಕೆಜಿ ಅಕ್ಕಿ ಕೊಡುತ್ತಿದ್ದು, ನೀವು ಐದು ಕೆಜಿ ಅಕ್ಕಿ ಕೊಟ್ಟಂತಾಗುತ್ತದೆ, ಅದನ್ನು ಬಿಟ್ಟು ನೀವು ಹತ್ತು ಕೆಜಿ ಕೊಡಬೇಕೆಂದು ಒತ್ತಾಯಿಸಿದರು.
ಗೃಹ ಲಕ್ಷಿ ಯೋಜನೆಯ ಭರವಸೆಯನ್ನ ನೀಡಿ ಕುಟುಂಬದ ಅತ್ತೆ,ಸೊಸೆ ಮಧ್ಯ ಗೊಂದಲ ತಂದಿದ್ದಾರೆ. ಬಡತನ ರೇಖೆಗಿಂತ ಕಡಿಮೆ ಇರುವ ಪ್ರತಿಯೊಬ್ಬ ಮಹಿಳೆಗೂ 2 ಸಾವಿರ ಕೊಡ ಬೇಕೆಂದು ಒತ್ತಾಯ ಮಾಡುತ್ತೇನೆಂದ ಅವರು ಚುನಾವಣೆಯ ಪೂರ್ವದಲ್ಲಿ ಮಹಿಳೆಯರಿಗೆ ಎಲ್ಲಾ ಬಸ್ ಫ್ರೀ ಎಂದು ಹೇಳಿ ಈಗ ಷರತ್ತು ಹಾಕಿ, 50 ರಷ್ಟು ಮೀಸಲಾತಿ ಎಂದು ಹೇಳುತ್ತಿದ್ದಾರೆ. ಹೆಚ್ಚಿಗೆ ಮಹಿಳೆಯರು ಬಂದರೆ ಏನು ಮಾಡುತ್ತೀರಿ ಅವರು ಎಲ್ಲಿಗೆ ಹೋಗ ಬೇಕೆಂದರಲ್ಲದೇ ಮೀಸಲಾತಿ ಷರತ್ತನ್ನು ತೆಗೆದು ಹೆಚ್ಚುವರಿ ಬಸ್ ಬಿಡಬೇಕೆಂದು ಹೇಳಿದರು.
ಇನ್ನೂ ಯುವ ಸಮುದಾಯವನ್ನ ಸೆಳೆಯುವ ನಿಟ್ಟಿನಲ್ಲಿ ಯುವನಿಧಿ ಮೂಲಕ ನಿರುದ್ಯೋಗ ಯುವಕರಿಗೆ ಮೂರು ಸಾವಿರ, ಡಿಪ್ಲೋಮೋದವರಿಗೆ 1,500 ಕೊಡುತ್ತೇವೆಂದು ಹೇಳಿದ್ದೀರಿ ಅದನ್ನು ನಂಬಿ ಯುವಕರು ಓಟು ಹಾಕಿದ್ದಾರೆ. ಆದರೇ ಇದೀಗ ಅದಕ್ಕೆ ಷರತ್ತು ಹಾಕಿದ್ದು ಸರಿಯಲ್ಲ ಎಂದರು.
ಇನ್ನು ಜಿಎಸ್ಟಿ 500, ಗ್ಯಾಸ್500, ಮನೆನಿರ್ವಹಣೆ 1000 ಹಾಗೂ ಅಂಗನವಾಡಿ, ಆಶಾಕಾರ್ಯಕರ್ತೆಯರು, ಬಿಸಿಯೂಟದವರಿಗೆ ಸಂಬಳ ಹೆಚ್ಚಳ, ಓಪಿಎಸ್ ಜಾರಿಗೆ ಸಂಬಂಧಿಸಿದಂತೆ ವಿಚಾರ ಪ್ರಸ್ತಾಪ ಆಗಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ನಾನು ರಾಜ್ಯ ಸರಕಾರವನ್ನು ಟೀಕೆ ಮಾಡುವುದಿಲ್ಲ. ಜನರು ವಿಶ್ವಾಸವಿಟ್ಟು ಓಟ್ ಹಾಕಿದ್ದಾರೆ, ಕೊಟ್ಟ ಮಾತನ್ನು ಉಳಿಸಿಕೊಳ್ಳಿ ಜನರ ಕಿವಿ ಮೇಲೆ ಹೂ ಇಡುವ ಕೆಲಸ ಆಗಬೇಡಿ ಎಂದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ











Click it and Unblock the Notifications