ನಾನು ತಪ್ಪು ಮಾಡಿಲ್ಲ; ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್
ಬೆಂಗಳೂರು, ಮೇ 26: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಇದೊಂದು ರಾಜಕೀಯ ಷಡ್ಯಂತ್ರ. ಜಾರಿ ನಿರ್ದೇಶನಾಲಯ ನನ್ನ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ ಎಂಬ ಮಾಹಿತಿ ಮಾಧ್ಯಮಗಳ ಮೂಲಕ ತಿಳಿದಿದೆ. ಇದು ನನಗೆ ಹಾಗೂ ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ನನಗೆ ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರದಲ್ಲಿ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, 'ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನನ್ನನ್ನು ಬಂಧಿಸಿದ 60 ದಿನಗಳ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಬೇಕಿತ್ತು. ಅವರು ಸರಿಯಾದ ಸಮಯಕ್ಕೆ ಆರೋಪಪಟ್ಟಿ ಸಲ್ಲಿಸದ ಕಾರಣ ನನಗೆ ಜಾಮೀನು ದೊರೆತಿತ್ತು. ಆದರೆ ಮೂರು ವರ್ಷಗಳ ನಂತರ ಸಲ್ಲಿಸುತ್ತಿದ್ದಾರೆ. ನನಗೆ ಇನ್ನು ಅದರ ಪ್ರತಿ ಸಿಕ್ಕಿಲ್ಲ ಎಂದು ಹೇಳಿದರು.
ಅವರು ಹೊಸದಾಗಿ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ. ತೆರಿಗೆ ಇಲಾಖೆಯವರು ಕಾನೂನು ವಿರುದ್ಧವಾಗಿ ಸಾಕಷ್ಟು ಸೃಷ್ಟಿಸಿದ್ದಾರೆ. ಈಗ ಈ ವಿಚಾರ ನನ್ನ ಹಾಗೂ ನ್ಯಾಯಾಲಯದ ಮಧ್ಯೆ ಇದೆ. ನಾನು ಈ ನೆಲದ ಕಾನೂನನ್ನು ಗೌರವಿಸುತ್ತಿದ್ದು, ನ್ಯಾಯಾಂಗ ವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದ್ದೇನೆ. ಇದೊಂದು ರಾಜಕೀಯ ಷಡ್ಯಂತ್ರದ ಪ್ರಕರಣ. ಅಹ್ಮದ್ ಪಟೇಲ್ ಅವರ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ಸಹಾಯ ಮಾಡಿದೆ ಎಂಬ ಕಾರಣಕ್ಕೆ ನನ್ನ ಹಾಗೂ ನನ್ನ ಸ್ನೇಹಿತರ ಮೇಲೆ ದಾಳಿ ಮಾಡಿ, ಅವರ ಹಣವನ್ನೂ ನನ್ನ ಹಣ ಎಂದು ಬರೆದಿದ್ದಾರೆ ಎಂದರು.

ವೃತ್ತಿಯಲ್ಲಿ ಉದ್ಯಮಿ
ನಾನು ಹುಟ್ಟಿನಿಂದ ರೈತ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣಸ್ಥ, ಆಸಕ್ತಿಯಲ್ಲಿ ರಾಜಕಾರಣಿ ಎಂದು ಈಗಾಗಲೇ ಹೇಳಿದ್ದೇನೆ. ಆದರೆ ಬಿಜೆಪಿವರು ಅವರ ಪಕ್ಷದವರನ್ನೇ ಬಿಡುತ್ತಿಲ್ಲ, ಇನ್ನು ನನ್ನನ್ನು ಬಿಡುತ್ತಾರೆಯೇ? ಅವರ ರಾಜಕೀಯ ಹಾದಿಗೆ ಅಡ್ಡಿಯಾಗಿರುವವರನ್ನು ನಿರ್ಮೂಲನೆ ಮಾಡಲು ಹೊರಟಿದ್ದಾರೆ. ಅವರಿಗೆ ಶರಣಾಗಬೇಕು, ಇಲ್ಲದಿದ್ದರೆ ಅಂತಹವರನ್ನು ಮುಗಿಸಲು ಪ್ರಯತ್ನಿಸುತ್ತಾರೆ' ಎಂದು ತಿಳಿಸಿದರು.

ಸಂವಿಧಾನಿಕ ಸಂಸ್ಥೆಗಳ ದುರುಪಯೋಗ
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಪಿತೂರಿ ಮಾಡಲಾಗಿದೆಯೇ ಎಂಬ ಪ್ರಶ್ನೆಗೆ, 'ಈ ವಿಚಾರ ನಿಮ್ಮೆಲ್ಲರಿಗೂ ತಿಳಿದಿದೆ. ಇದು ಬಿಜೆಪಿ ಸರ್ಕಾರದ ಕಾರ್ಯವೈಖರಿ. ಅವರು ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾ ಡಿಕೊಳ್ಳುತ್ತಿದ್ದಾರೆ. ಇನ್ನು ಬಿಜೆಪಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿದೆ. ನಾನು ಪ್ರತಿ ವರ್ಷ ನನ್ನ ಆದಾಯ ತೆರಿಗೆ ವಿವರ ಸಲ್ಲಿಸುತ್ತಿದ್ದು, ಈ ಪ್ರಕರಣ ಸಿಬಿಐಗೆ ನೀಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಅವರೇ ಹೇಳಿದ್ದರೂ ಬಿಜೆಪಿ ಸರ್ಕಾರ ನನ್ನ ಪ್ರಕರಣವನ್ನು ಸಿಬಿಐಗೆ ನೀಡಿದೆ. ಅವರು ತಮ್ಮ ಬಳಿ ಇರುವ ಎಲ್ಲ ಅಸ್ತ್ರಗಳನ್ನು ಪ್ರಯೋಗ ಮಾಡುತ್ತಿದ್ದಾರೆ' ಎಂದರು.

ನನ್ನ ರಾಜಕೀಯದ ದೊಡ್ಡ ಸ್ನೇಹಿತರು
ಶಿವಕುಮಾರ್ ಅವರು ಮತ್ತೆ ಜೈಲಿಗೆ ಹೋಗಲಿದ್ದಾರೆ ಎಂದು ಅಶ್ವತ್ಥ್ ನಾರಾಯಣ ಹಾಗೂ ಸುನೀಲ್ ಕುಮಾರ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ಅವರೆಲ್ಲರೂ ನನ್ನ ರಾಜಕೀಯದ ದೊಡ್ಡ ಸ್ನೇಹಿತರು. ಅವರೇ ಕೋರ್ಟ್, ನ್ಯಾಯಾಧೀಶರು, ತನಿಖಾಧಿಕಾರಿಗಳಾಗಿದ್ದಾರೆ. ಅವರು ಏನು ಮಾಡುತ್ತಾರೋ ಮಾಡಿಕೊಳ್ಳಲಿ. ಅವರಿಗೆ ಯಶಸ್ಸಾಗಲಿ' ಎಂದರು.

ಬಂಡವಾಳ ಹೂಡಿಕೆಗೆ ಪೆಟ್ಟು
ಇನ್ನು ಮುಸಲ್ಮಾನ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಿದ್ದಾರೆ ಎಂದು ಹಿಂದೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, 'ಮುಖ್ಯಮಂತ್ರಿಗಳು ದಾವೋಸ್ ನಲ್ಲಿ ಬಂಡವಾಳ ಹೂಡಿಕೆದಾರರನ್ನು ಸೆಳೆಯುತ್ತಿದ್ದಾರೆ. ಆದರೆ ಈ ಬೆಳವಣಿಗೆಗಳು ರಾಜ್ಯದ ಬಂಡವಾಳ ಹೂಡಿಕೆಗೆ ದೊಡ್ಡ ಪೆಟ್ಟು ನೀಡಲಿದೆ' ಎಂದು ಉತ್ತರಿಸಿದರು.
ಇನ್ನು ಕೆಸಿಆರ್ ಅವರು ದೇವೇಗೌಡರನ್ನು ಭೇಟಿಯಾಗುತ್ತಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಅವರು ರಾಜಕೀಯ ಪಕ್ಷದ ನಾಯಕರು. ಅವರ ರಾಜಕೀಯ ಉದ್ದೇಶಕ್ಕಾಗಿ ಪರಸ್ಪರ ಭೇಟಿಯಾಗುತ್ತಾರೆ. ಆ ವಿಚಾರವಾಗಿ ನಾನ್ಯಾಕೆ ಹೇಳಿಕೆ ನೀಡಬೇಕು? ಅದು ಅವರ ಹಕ್ಕು' ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications