ಕೈ ಪಾಳಯದಲ್ಲಿ ಅಸಮಾಧಾನ ಸ್ಟೋಟ; ಬಿಜೆಪಿಗೆ ಹೋಗಲು ನನಗೆ ತೊಂದರೆಯೂ ಇಲ್ಲ: ಬಸವರಾಜ ರಾಯರೆಡ್ಡಿ
ಧಾರವಾಡ ಸೆಪ್ಟೆಂಬರ್ 04: ರಾಜ್ಯ ಕಾಂಗ್ರೆಸ್ 135 ಸ್ಥಾನಗಳನ್ನ ಪಡೆಯುವ ಮೂಲಕ ಸರ್ಕಾರ ರಚಿಸಿದ್ದು, ಇದೀಗ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆಯುತ್ತಿದ್ದಂತೆ ಕೈ ಪಾಳಯದಲ್ಲಿ ಅಸಮಾಧಾನ ಸ್ಟೋಟಗೊಂಡಿದ್ದು, ಸಿಎಂ ಗೆ ಪತ್ರ ಬರೆಯುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಯಾಗಿತ್ತು. ಸರ್ಕಾರದ ಆಡಳಿತದ ಬಗ್ಗೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೌದು, ಬಸವರಾಜ ರಾಯರೆಡ್ಡಿ ಅಸಮಾಧಾನವನ್ನು ಶಮನಗೊಳಿಸಲು ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಡಾ.ಎಂ.ಸಿ.ಸುಧಾಕರ್ ಸೋಮವಾರ ಧಾರವಾಡದ ಗೋವಾ ರಸ್ತೆಯಲ್ಲಿರುವ ರಾಯರೆಡ್ಡಿ ಫಾರ್ಮ್ಹೌಸ್ನಲ್ಲಿ ಬಸವರಾಜ ರಾಯರೆಡ್ಡಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಇನ್ನೂ ಸಚಿವ ಜೊತೆಗಿನ ಸಭೆಯ ಬಳಿಕ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಮಾಧ್ಯಮಗಳ ಜೊತೆಗೆ ಮಾತನಾಡಿ, ನನಗೆ ಕಾಂಗ್ರೆಸ್ ಬಗ್ಗೆ ಕೋಪವಿಲ್ಲ, ಸಿಟ್ಟಾಗುವಂತಹದ್ದು ಏನೂ ಆಗಿಲ್ಲ. ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಬಿಜೆಪಿಗೆ ಹೋಗಲು ನನಗೆ ತೊಂದರೆಯೂ ಇಲ್ಲ. ಆದರೆ ಬಿಜೆಪಿಯ ಸಿದ್ಧಾಂತಗಳು ನನಗೆ ಸರಿ ಹೊಂದುವುದಿಲ್ಲ. ಬಿಜೆಪಿಯವರು ನನ್ನನ್ನು ಕರೆದಿದ್ದಾರೆ ಅಂತಲ್ಲ. ಅವರು ಎಲ್ಲರನ್ನೂ ಕರೆಯುತ್ತಲೇ ಇರುತ್ತಾರೆ. ಆದರೆ ನಾನು ಸಿದ್ಧಾಂತ ಇಟ್ಟುಕೊಂಡು ರಾಜಕೀಯ ಮಾಡುವವನು. ಇನ್ನೂ ವೈಯಕ್ತಿಕವಾಗಿ ಸಿಎಂ ನನಗೆ ಬೇಕಾದವರು. ಸಿದ್ದರಾಮಯ್ಯ ಒಳ್ಳೆಯ ಮುಖ್ಯಮಂತ್ರಿ. ಒಳ್ಳೆಯ ಜನನಾಯಕ. ಸಿದ್ದರಾಮಯ್ಯರಂಥ ರಾಜಕಾರಣಿಗಳು ಸಿಗುವುದಿಲ್ಲ. ನಾವೆಲ್ಲ ಒಟ್ಟಿಗೆ ರಾಜಕೀಯಕ್ಕೆ ಬಂದವರು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಟಾರ್ನ್ಫಾರ್ಮರ್ಗಳು ಸುಟ್ಟುಹೋಗಿ ವಿದ್ಯುತ್ ಸಮಸ್ಯೆ ಆಗಿದೆ. ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕಲಬುರಗಿ ಜೆಸ್ಕಾಂ ವ್ಯಾಪ್ತಿಯಲ್ಲೇ ನಮ್ಮ ಜಿಲ್ಲೆ ಕೂಡ ಬರುತ್ತೆ. ಆದರೆ ಯಾವುದೇ ಅಧಿಕಾರಿಗಳು ನಮ್ಮ ಜಿಲ್ಲೆಯ ಸಮಸ್ಯೆಗೆ ಸ್ಪಂದಿಸಲಿಲ್ಲ. ಹೀಗಾಗಿ ಸಿಎಂಗೆ ಸಭೆ ಕರೆಯುವಂತೆ ಪತ್ರ ಬರೆದಿದ್ದೇನೆ. ಜನರಿಗೆ ಗೊತ್ತಾಗಲಿ ಅಂತ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ. ಸೆ.5ರಂದು ಇಂಧನ ಸಚಿವರು ಸಭೆ ಕರೆದಿದ್ದಾರೆ. ನನ್ನ ಪತ್ರದಿಂದ ಈಗ ಇಡೀ ಜೆಸ್ಕಾಂ ಸಮಸ್ಯೆ ಪರಿಹಾರ ಆಗುತ್ತದೆ. ಆದರೆ ಇದನ್ನು ನಕರಾತ್ಮಕವಾಗಿ ತೆಗೆದುಕೊಂಡರೆ ಹೇಗೆ ? ಎಂದು ಪ್ರಶ್ನಿಸಿದ್ದಾರೆ.
ಇಬ್ಬರೂ ಸಚಿವರನ್ನೂ ನಾನೇ ಕರೆದಿದ್ದೆ. ಕೊಪ್ಪಳದ ಕೆಲ ವಿಷಯವಾಗಿ ಬಗ್ಗೆ ಚರ್ಚೆ ಮಾಡಲು ಕರೆದಿದ್ದೆ. ನನ್ನ ಕ್ಷೇತ್ರಕ್ಕೆ ಇವತ್ತು ಅವರನ್ನು ಕರೆದುಕೊಂಡು ಹೋಗುತ್ತಿದ್ದೇನೆ. ಹೀಗಾಗಿ ಇಲ್ಲಿಗೆ ಬಂದಿದ್ದಾರೆ. ಇಲ್ಲಿಂದ ಮೂವರೂ ಕೊಪ್ಪಳಕ್ಕೆ ಹೋಗುತ್ತೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ರಾಜಕೀಯ ಮಾಡುವಾಗ ನಾವು ರಾಜಕೀಯ ಮಾಡುತ್ತೇವೆ. ಅಭಿವೃದ್ಧಿ ದೃಷ್ಟಿಕೋನದಿಂದ ಕೆಲಸ ಮಾಡುವ ವಿಚಾರವಾಗಿ ಸೇರಿದ್ದೇವೆ. ಕಾಂಗ್ರೆಸ್ನಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನೂ ಸಚಿವ ಸ್ಥಾನ ಸಿಗದಿರುವುದಕ್ಕೆ ನನಗೆ ಅಸಮಾಧಾನ ಇಲ್ಲ. ಆದರೆ, ನಮ್ಮನ್ನು ಉಪಯೋಗಿಸಿಕೊಳ್ಳುತ್ತಿಲ್ಲ ಅನ್ನುವ ಬೇಸರ ಇದೆ ಅಷ್ಟೆ. ನಾನು ಸದಾ ಕಾಲ ಕೆಲಸ ಮಾಡುವವನು. ಸುಮ್ಮನೆ ಕುಳಿತುಕೊಳ್ಳುವವನಲ್ಲ ಎಂದು ಹೇಳಿದ್ದಾರೆ.
ಇನ್ನೂ ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ಜನರ ಸಮಸ್ಯೆಗಳಿಗೆ ಅಧಿಕಾರಿಗಳಿಂದ ಸರಿಯಾದ ಪ್ರತಿಕ್ರಿಯೆ ಬರುತ್ತಿಲ್ಲ. ಇವೆಲ್ಲ ವಿಚಾರ ಇಟ್ಟುಕೊಂಡು ಸಿಎಂಗೆ ಶಾಸಕರಾದ ಬಸವರಾಜ ರಾಯರೆಡ್ಡಿ ಪತ್ರ ಬರೆದಿದ್ದಾರೆ. ಹೀಗಾಗಿ ಇದಕ್ಕೆ ಅನಾವಶ್ಯಕವಾಗಿ ಬೇರೆ ಅರ್ಥವನ್ನು ಕಲ್ಪಿಸುತ್ತಿದ್ದಾರೆ. ಯಲಬುರ್ಗಾ ಕ್ಷೇತ್ರದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮ್ಗಳ ಸಮಸ್ಯೆ ಇದೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಅಂತ ಅವರೇ ಹೇಳಿದ್ದಾರೆ ಎಂದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications