'ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿಯನ್ನು ನಾನಿನ್ನು ಬಿಚ್ಚಿಟ್ಟಿಲ್ಲ'

ಬೆಂಗಳೂರು, ಏಪ್ರಿಲ್‌ 17: ಕುಮಾರಸ್ವಾಮಿ ನನ್ನ ವಿರುದ್ಧ ಟನ್ ಗಟ್ಟಲೆ ಸಾಕ್ಷಾಧಾರಗಳನ್ನು ಇಟ್ಟುಕೊಂಡಿದ್ದಾರೆ. ಇದನ್ನು ಏಕೆ ಇಟ್ಟುಕೊಂಡಿದ್ದಾರೆ, ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲ ಏಕೆ? ಮಿಸ್ಟರ್ ಕುಮಾರಸ್ವಾಮಿ, ಈ ಡಿ.ಕೆ. ಶಿವಕುಮಾರ್ ನಿನ್ನ ಹಾಗೂ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವ ಮಗ ಅಲ್ಲ. ನಮ್ಮ ಕಷ್ಟ, ನಮ್ಮ ಶ್ರಮ, ನಮ್ಮ ಬದುಕು. ನಾವು ಆಸ್ತಿ ಮಾಡಿಕೊಳ್ಳುತ್ತೇವೆ. ಅದರ ಸತ್ಯಾಸತ್ಯತೆ ಸರ್ಕಾರ ಪರಿಶೀಲನೆ ಮಾಡಲಿ. ನಾನು ನಿನ್ನ ಚರಿತ್ರೆಯನ್ನು ಇನ್ನು ಬಿಚ್ಚಿಲ್ಲ. ನಿಮ್ಮ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂಬುದನ್ನು ನಾನಿನ್ನು ಬಿಚ್ಚಿಟ್ಟಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದರು.

ಬಿಜೆಪಿಯ ಚಂಗಲು ನನ್ನ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾನೆ. ಆತನ ವಿರುದ್ಧ ವಿಧಾನಸೌಧದಲ್ಲಿ ಅತ್ಯಾಚಾರ ಮಾಡಿರುವ ಪ್ರಕರಣಗಳಿವೆ. ಎಲ್ಲವೂ ಸಾಬೀತಾಗುತ್ತಿವೆ. ಆತ ಆಡಿರುವ ಮಾತುಗಳು ಸಾಬೀತಾಗಿವೆ. ಈಗ ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಭ್ರಷ್ಟ ಬಿಜೆಪಿ, ದಳದ ವಿರುದ್ಧ ಹೋರಾಟ ಮಾಡಿ 2028ರಲ್ಲಿ ಮತ್ತೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಡಿ ಕೆ ಶಿವಕುಮಾರ್‌ ಅವರು ವಿಶ್ವಾಸವನ್ನ ವ್ಯಕ್ತಡಿಸಿದರು.

I Have Not Disclosed The Assets Of The HD Kumaraswamy Brothers DK Shivakumar

ರಾಜ್ಯ ಹಾಗೂ ದೇಶದ ಜನ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದೆವು. 2023ರ ವಿಧಾನಸಭೆ ಚುನಾವಣೆಯಲ್ಲಿ ನಾನು ಭವಿಷ್ಯ ನುಡಿದಂತೆ 136 ಸೀಟು ಗೆದ್ದೆವು. ನಂತರ ಬಂದ ಉಪಚುನಾವಣೆಗಳಲ್ಲಿ ಚನ್ನಪಟ್ಟಣ, ಶಿಗ್ಗಾಂವ್ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತು. ಈ ಮೂರರಲ್ಲಿ ಜನ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನು ಸೋಲಿಸಿದರು. ಇದಕ್ಕೆ ಕಾರಣವೇನು ಎಂದು ಬಿಜೆಪಿ ನಾಯಕರು ಹೇಳಬೇಕು ಎಂದು ಪ್ರಶ್ನಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲ ಬೆಲೆ ಕುಸಿದಿದ್ದರೂ ಬಿಜೆಪಿಯವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಆದರೂ ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಈ ಬಗ್ಗೆ ಬಿಜೆಪಿಯವರು ಮಾತನಾಡಬೇಕು. ಇದು ರಾಜ್ಯಮಟ್ಟದ ಹೋರಾಟ. ಇದೇ ಮಾದರಿಯಲ್ಲಿ ಜಿಲ್ಲಾ ಸಚಿವರ ನೇತೃತ್ವದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕು ಎಂದು ಶಾಸಕರು ಹಾಗೂ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡುತ್ತೇನೆ. ಬೆಲೆ ಏರಿಕೆ ವಿಚಾರವಾಗಿ ರಾಜ್ಯದ ಜನರಿಗೆ ತಿಳಿಸಬೇಕು ಎಂದು ಸೂಚಿಸಿದರು.

ರಸ್ತೆ ಸರಿ ಇಲ್ಲವಾದರೆ ಕುದುರೆ ಮೇಲೆ ಹೋಗಿ, ಕರೆಂಟ್ ಇಲ್ಲವಾದರೆ ತಂತಿ ಹಿಡಿದು ನೋಡಿ ಎಂದು ಮಾಜಿ ಸಿಎಂ ಜೆ.ಹೆಚ್ ಪಟೇಲರು ಹೇಳಿದ್ದರು. ಆದರೆ ನಾನು ಆ ರೀತಿ ಹೇಳುವುದಿಲ್ಲ. ನಮ್ಮ ಸರ್ಕಾರ ಕಳೆದ 2 ವರ್ಷಗಳಿಂದ ಯಶಸ್ವಿಯಾಗಿ ಉತ್ತಮ ಆಡಳಿತ ನೀಡುತ್ತಾ ಬಂದಿದ್ದೇವೆ. ನಿನ್ನೆ ನಾನು ಹಾಗೂ ಮುಖ್ಯಮಂತ್ರಿಗಳು ಕಲಬುರ್ಗಿ ಹಾಗೂ ಬೀದರ್ ಗೆ ತೆರಳಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದೆವು. ಬೀದರ್ ಒಂದೇ ಜಿಲ್ಲೆಯಲ್ಲಿ ರೂ. 2025 ಕೋಟಿ ಮೊತ್ತದ ಕಾಮಗಾರಿಗೆ ಚಾಲನೆ ನೀಡಿ ಬಂದಿದ್ದೇವೆ. ಕಲಬುರ್ಗಿಯಲ್ಲಿ ಉದ್ಯೋಗ ಮೇಳ ನಡೆಸಲಾಗಿತ್ತು, ಕಲ್ಯಾಣ ಪಥ ಯೋಜನೆ ಮೂಲಕ ರಸ್ತೆ ಅಭಿವೃದ್ಧಿಗೆ ರೂ.1500 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರೂ.5 ಸಾವಿರ ಕೋಟಿ ಮೀಸಲಿಡಲಾಗಿದೆ. ನನ್ನ ಇಲಾಖೆಯಲ್ಲಿ ರೂ.22 ಸಾವಿರ ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಮೆಟ್ರೋ ವಿಸ್ತರಣೆ, ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್, ವಿದ್ಯುತ್, ಕಸ ನಿರ್ವಹಣೆಗಾಗಿ 1 ಲಕ್ಷ ಕೋಟಿ ಮೊತ್ತದ ಕಾರ್ಯಕ್ರಮ ರೂಪಿಸಲಾಗಿದೆ. ಇದೆಲ್ಲವೂ ಅಭಿವೃದ್ಧಿಯಲ್ಲವೇ? ವಿರೋಧ ಪಕ್ಷಗಳು ನಮ್ಮ ಸರ್ಕಾರದ ಕೆಲಸಗಳನ್ನು ಕಾಮಾಲೆ ಕಣ್ಣಿನಲ್ಲಿ ನೋಡುತ್ತಿವೆ. ನೀವು ನಿಮ್ಮ ಆತ್ಮಸಾಕ್ಷಿ ದೃಷ್ಟಿಯಲ್ಲಿ ನೋಡಿ, ಆಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಕಾಣುತ್ತವೆ ಎಂದು ಡಿ ಕೆ ಶಿವಕುಮಾರ್ ಸವಾಲೆಸೆದರು.

ನಮ್ಮ ಸರ್ಕಾರ 4 ಲಕ್ಷ ಕೋಟಿಗೂ ಹೆಚ್ಚಿನ ಬಜೆಟ್ ಮಂಡಿಸಿ ದಾಖಲೆ ಬರೆದಿದೆ. ನಮ್ಮ ಸರ್ಕಾರ, ನಮ್ಮ ಹೋರಾಟ ಜನರ ಪರ ಹಾಗೂ ಹಿತಕ್ಕಾಗಿ ಇದೆ. ನಾನು ನೀರಾವರಿ ಸಚಿವನಾದ ಬಳಿಕ ಬೆಂಗಳೂರು ನಗರದ ಕುಡಿಯುವ ನೀರಿನ ಪ್ರಮಾಣವನ್ನು 6 ಟಿಎಂಸಿಯಷ್ಟು ಹೆಚ್ಚಳ ಮಾಡಿದ್ದೇನೆ. ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಲಾಗಿದೆ. ಬರಗಾಲ ಬಂದರೂ ನೀರಿನ ಸಮಸ್ಯೆ ನಿವಾರಣೆಗೆ ಬದ್ಧವಾಗಿದ್ದೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+