Karnataka By Polls: ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಭರತ್ ಬೊಮ್ಮಾಯಿ?
ನವದೆಹಲಿ, ಅಕ್ಟೋಬರ್ 19: ಶಿಗ್ಗಾಂವಿ ಸೇರಿದಂತೆ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಕುರಿತು ಇಂದು ಮಹತ್ವದ ಸಭೆ ನಡೆಯಲಿದೆ. 2+1 ಅನುಪಾತದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆ ಟಿಕೆಟ್ ಹಂಚಿಕೆಯಾಗಲಿದೆ ಎಂದು ತಿಳಿದು ಬಂದಿದ್ದು, ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಈ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಶಿಗ್ಗಾವಿಯಲ್ಲಿ ಸ್ಥಳೀಯ ಮುಖಂಡರು ಭರತ್ ಬೊಮ್ಮಾಯಿಯವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಅಲ್ಲಿನ ಜನರು ಮತ್ತು ನಾಯಕರ ನಡುವೆ ಏನು ಮಾತುಕತೆಯಾಗಿದೆಯೊ ಗೊತ್ತಿಲ್ಲ. ಆದರೆ, ನಾನು ಇಷ್ಟು ವರ್ಷ ಅಲ್ಲಿ ಉತ್ತಮ ಕೆಲಸ ಮಾಡಿರುವುದರಿಂದ ಅಲ್ಲಿನ ಜನರು ನನ್ನ ಮಗನ ಹೆಸರು ಹೇಳಿರಬಹುದು. ಆದರೆ, ನಾನು ವೈಯಕ್ತಿಕ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ಬೇಡ ಅಂತ ಅಂತ ಹೇಳಿದ್ದೇನೆ. ಅದೆಲ್ಲ ವಿಷಯವೂ ರಾಷ್ಟ್ರೀಯ ಅಧ್ಯಕ್ಷರಾ ದ ಜೆ.ಪಿ. ನಡ್ಡಾ ಅವರ ಜೊತೆಗೆ ಚರ್ಚೆಯಾಗಲಿದೆ ಎಂದು ಹೇಳಿದರು.

ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬುಲಾವ್ ಮೇರೆಗೆ ದೆಹಲಿಗೆ ಬಂದಿದ್ದೇನೆ. ಅವರು, ಮಹಾರಾಷ್ಟ್ರ ಜಾರ್ಖಂಡ್ ಸಂಸದೀಯ ಮಂಡಳಿ ಸಭೆ ನಡೆಸಿ ಬಳಿಕ ನಮ್ಮಗೆ ಸಮಯ ನೀಡಲಿದ್ದಾರೆ. ಅವರನ್ನು ಭೇಟಿಯಾಗಿ ಶಿಗ್ಗಾಂವಿ ಉಪ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿ ಯಾರು ಅಭ್ಯರ್ಥಿ ಎನ್ನುವುದು ಯಾರು ಗೆಲ್ಲುತ್ತಾರೆ ಎನ್ನುವ ಆಧಾರದ ಮೇಲೆ ನಿರ್ಧಾರ ಆಗುತ್ತದೆ. ನಾಳೆಯ ಸಭೆಯಲ್ಲಿ ಎಲ್ಲವೂ ಚರ್ಚೆಯಾಗಲಿದೆ. ಶಿಗ್ಗಾಂವಿ, ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ಮಾಡಲಿದ್ದೇವೆ. ಇದೇ ಕಾರಣಕ್ಕೆ ಚರ್ಚಿಸಲು ಜೆ. ಪಿ ನಡ್ಡಾ ಅವರು ಕರೆದಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಕಳೆದ ವರ್ಷ ಬರಗಾಲ ಬಿದ್ದಾಗ ರಾಜ್ಯ ಸರ್ಕಾರ ಯಾವುದೇ ರೀತಿಯ ಸಹಾಯ ಮಾಡಲಿಲ್ಲ. ಈ ವರ್ಷ ಪ್ರವಾಹ ಬಂದಿದೆ. ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಸರ್ಕಾದದ ವಿರುದ್ದ ಹೇಳಿಕೆಗಳನ್ನು ಕೊಟ್ಟಿರುವುದನ್ನು ನಾವು ಗಮನಿಸುತ್ತಿದ್ದೇವೆ.
ಹಣಕಾಸಿನ ಪರಿಸ್ಥಿತಿ ಬಹಳ ಸೋಚನೀಯವಾಗಿದೆ. ಹಲವಾರು ಅಧಿಕಾರಿಗಳು ತಮ್ಮ ಅಸಹಾಯಕತೆಯನ್ನು ತೋರಿಸುತ್ತಿದ್ದಾರೆ. ಈ ಎಲ್ಲ ಹಿನ್ನೆಲೆಯ ಸಂದರ್ಭದಲ್ಲಿ ಉಪ ಚುನಾವಣೆಗಳು ನಡೆಯುತ್ತಿವೆ. ನಾವು ಒಂದು ರಾಷ್ಟ್ರೀಯ ಪಕ್ಷವಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಶಿಗ್ಗಾವಿ, ಸಂಡೂರು ಕ್ಷೇತ್ರಗಳನ್ನು ಬಿಜೆಪಿ ಅಭ್ಯರ್ಥಿಗಳು ಹಾಗೂ ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ನಾವು ಕಾರ್ಯತಂತ್ರ ರೂಪಿಸುತ್ತೇವೆ. ಈ ಎಲ್ಲ ವಿಷಯಗಳ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications