Karnataka By Polls: ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಭರತ್ ಬೊಮ್ಮಾಯಿ?
ನವದೆಹಲಿ, ಅಕ್ಟೋಬರ್ 19: ಶಿಗ್ಗಾಂವಿ ಸೇರಿದಂತೆ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಕುರಿತು ಇಂದು ಮಹತ್ವದ ಸಭೆ ನಡೆಯಲಿದೆ. 2+1 ಅನುಪಾತದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆ ಟಿಕೆಟ್ ಹಂಚಿಕೆಯಾಗಲಿದೆ ಎಂದು ತಿಳಿದು ಬಂದಿದ್ದು, ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಈ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಶಿಗ್ಗಾವಿಯಲ್ಲಿ ಸ್ಥಳೀಯ ಮುಖಂಡರು ಭರತ್ ಬೊಮ್ಮಾಯಿಯವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಅಲ್ಲಿನ ಜನರು ಮತ್ತು ನಾಯಕರ ನಡುವೆ ಏನು ಮಾತುಕತೆಯಾಗಿದೆಯೊ ಗೊತ್ತಿಲ್ಲ. ಆದರೆ, ನಾನು ಇಷ್ಟು ವರ್ಷ ಅಲ್ಲಿ ಉತ್ತಮ ಕೆಲಸ ಮಾಡಿರುವುದರಿಂದ ಅಲ್ಲಿನ ಜನರು ನನ್ನ ಮಗನ ಹೆಸರು ಹೇಳಿರಬಹುದು. ಆದರೆ, ನಾನು ವೈಯಕ್ತಿಕ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ಬೇಡ ಅಂತ ಅಂತ ಹೇಳಿದ್ದೇನೆ. ಅದೆಲ್ಲ ವಿಷಯವೂ ರಾಷ್ಟ್ರೀಯ ಅಧ್ಯಕ್ಷರಾ ದ ಜೆ.ಪಿ. ನಡ್ಡಾ ಅವರ ಜೊತೆಗೆ ಚರ್ಚೆಯಾಗಲಿದೆ ಎಂದು ಹೇಳಿದರು.

ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬುಲಾವ್ ಮೇರೆಗೆ ದೆಹಲಿಗೆ ಬಂದಿದ್ದೇನೆ. ಅವರು, ಮಹಾರಾಷ್ಟ್ರ ಜಾರ್ಖಂಡ್ ಸಂಸದೀಯ ಮಂಡಳಿ ಸಭೆ ನಡೆಸಿ ಬಳಿಕ ನಮ್ಮಗೆ ಸಮಯ ನೀಡಲಿದ್ದಾರೆ. ಅವರನ್ನು ಭೇಟಿಯಾಗಿ ಶಿಗ್ಗಾಂವಿ ಉಪ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿ ಯಾರು ಅಭ್ಯರ್ಥಿ ಎನ್ನುವುದು ಯಾರು ಗೆಲ್ಲುತ್ತಾರೆ ಎನ್ನುವ ಆಧಾರದ ಮೇಲೆ ನಿರ್ಧಾರ ಆಗುತ್ತದೆ. ನಾಳೆಯ ಸಭೆಯಲ್ಲಿ ಎಲ್ಲವೂ ಚರ್ಚೆಯಾಗಲಿದೆ. ಶಿಗ್ಗಾಂವಿ, ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ಮಾಡಲಿದ್ದೇವೆ. ಇದೇ ಕಾರಣಕ್ಕೆ ಚರ್ಚಿಸಲು ಜೆ. ಪಿ ನಡ್ಡಾ ಅವರು ಕರೆದಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಕಳೆದ ವರ್ಷ ಬರಗಾಲ ಬಿದ್ದಾಗ ರಾಜ್ಯ ಸರ್ಕಾರ ಯಾವುದೇ ರೀತಿಯ ಸಹಾಯ ಮಾಡಲಿಲ್ಲ. ಈ ವರ್ಷ ಪ್ರವಾಹ ಬಂದಿದೆ. ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಸರ್ಕಾದದ ವಿರುದ್ದ ಹೇಳಿಕೆಗಳನ್ನು ಕೊಟ್ಟಿರುವುದನ್ನು ನಾವು ಗಮನಿಸುತ್ತಿದ್ದೇವೆ.
ಹಣಕಾಸಿನ ಪರಿಸ್ಥಿತಿ ಬಹಳ ಸೋಚನೀಯವಾಗಿದೆ. ಹಲವಾರು ಅಧಿಕಾರಿಗಳು ತಮ್ಮ ಅಸಹಾಯಕತೆಯನ್ನು ತೋರಿಸುತ್ತಿದ್ದಾರೆ. ಈ ಎಲ್ಲ ಹಿನ್ನೆಲೆಯ ಸಂದರ್ಭದಲ್ಲಿ ಉಪ ಚುನಾವಣೆಗಳು ನಡೆಯುತ್ತಿವೆ. ನಾವು ಒಂದು ರಾಷ್ಟ್ರೀಯ ಪಕ್ಷವಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಶಿಗ್ಗಾವಿ, ಸಂಡೂರು ಕ್ಷೇತ್ರಗಳನ್ನು ಬಿಜೆಪಿ ಅಭ್ಯರ್ಥಿಗಳು ಹಾಗೂ ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ನಾವು ಕಾರ್ಯತಂತ್ರ ರೂಪಿಸುತ್ತೇವೆ. ಈ ಎಲ್ಲ ವಿಷಯಗಳ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications