Get Updates
Get notified of breaking news, exclusive insights, and must-see stories!

HD Kumaraswamy: ಈ ಹಾಡು ಕೇಳಿ ಅನೇಕ ಸಲ ಮೈಮರೆತಿದ್ದೇನೆ: ಹೆಚ್‌ ಡಿ ಕುಮಾರಸ್ವಾಮಿ

ಮಂಡ್ಯ,ಡಿಸೆಂಬರ್‌ 23: ಕನ್ನಡ ಚಿತ್ರರಂಗದಿಂದ ಬಂದವನು ನಾನು, ಅಂದಿನ ಚಿತ್ರ ಕಥೆಗಳು ಇಂದಿನ ಚಿತ್ರ ಕಥೆಗಳ ನಡುವೆ ಬಹಳ ವ್ಯತ್ಯಾಸವಿದೆ. ಸಮಾಜವನ್ನು ಯಾವ ದಿಕ್ಕಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ ಎಂದು ಬೇಸರವಾಗುತ್ತದೆ. ಡಾ.ರಾಜ್ ಕುಮಾರ್ ಅವರು ಹಾಡಿರುವ 'ಹಾಲಿನ ಹೊಳೆಯೋ.. ಜೇನಿನ ಮಳೆಯೋ..' ಹಾಡನ್ನು ಕೇಳುತ್ತಾ ಅನೇಕ ಸಲ ಮೈಮರೆತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇಂದಿನ ಚಿತ್ರರಂಗದಲ್ಲಿ ಉತ್ತಮ, ಸದಭಿರುಚಿಯ ಚಿತ್ರಗಳು ಬರಬೇಕು, ಉತ್ತಮ ಕಥೆಗಳ, ಸಮಾಜಕ್ಕೆ ಒಳ್ಳೆಯದು ಮಾಡುವ ಸಿನಿಮಾಗಳು ಹೆಚ್ಚೆಚ್ಚು ಬರಬೇಕು. ಸಮಾಜದಲ್ಲಿ ನೆಮ್ಮದಿಯ ವಾತಾವರಣ ನೆಲೆಸಬೇಕಿದೆ. ಮನುಷ್ಯ ಸಂಬಂಧಗಳು ಹಾಳಾಗಬಾರದು. ಅವುಗಳನ್ನು ಕಾಪಾಡಿಕೊಳ್ಳಬೇಕು. ಹಳ್ಳಿಗಳಲ್ಲಿ ಎಲ್ಲರೂ ಕೂತು ಪಂಕ್ತಿಭೋಜನ ಮಾಡುವ ದಿನಗಳು ಮತ್ತೆ ಬರಬೇಕು. ಈಗ ಎಲ್ಲವೂ ಇದೆ, ಆದರೆ ಏನೂ ಇಲ್ಲದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಹಿಂದಿನ ನಮ್ಮ ಸಂಸ್ಕೃತಿ, ಬಾಂಧವ್ಯ, ಸಂಬಂಧಗಳು ಮರುಕಳಿಸಬೇಕು ಎಂಬ ಆಶಯವನ್ನು ಕುಮಾರಸ್ವಾಮಿ ಅವರು ವ್ಯಕ್ತಪಡಿಸಿದರು.

I Listen To Dr Rajkumar Songs Many Times Says HD Kumaraswamy

ಅನ್ಯಭಾಷೆಗಳ ಹೇರಿಕೆಯ ಬಗ್ಗೆ ಇರುವ ಆತಂಕಗಳ ಬಗ್ಗೆ ಅಧ್ಯಕ್ಷರು ಚರ್ಚೆ ಮಾಡಿದ್ದಾರೆ. ಅವರ ಅಷ್ಟೂ ಭಾಷಣವನ್ನು ಓದಿದ್ದೇನೆ. ನಾನು ಯಾವುದೇ ಕಾರಣಕ್ಕೂ ರಾಜಕೀಯ ಭಾಷಣಕ್ಕೆ ಈ ವೇದಿಕೆಯನ್ನು ಬಳಕೆ ಮಾಡಿಕೊಳ್ಳಲಾರೆ, ಮಾಡಿಕೊಳ್ಳಬಾರದು ಕೂಡ. ಕನ್ನಡ ಶಾಲೆಗಳಿಗೆ ಪ್ರೋತ್ಸಾಹ ಕೊಡುವ ವಿಷಯದಲ್ಲಿ ಲೋಪಗಳಾಗಿವೆ. ಅದನ್ನು ನಾವು ಸರಿ ಮಾಡಿಕೊಳ್ಳಬೇಕು. ಇಲ್ಲವಾದರೆ ಮಕ್ಕಳು, ಪೋಷಕರು ಮಾತೃಭಾಷೆಯಿಂದ ವಿಮುಖರಾಗುತ್ತಾರೆ ಎಂದು ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

2006ರಲ್ಲಿ ನಾನು ಬಿಜೆಪಿ ಪಕ್ಷದ ಜತೆ ಮೈತ್ರಿ ಸರಕಾರ ರಚನೆ ಮಾಡಿದ್ದಾಗ ಈ ವೇದಿಕೆಯಲ್ಲಿರುವ ಹಾಲಿ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಪ್ರಾಥಮಿಕ ಶಿಕ್ಷಣ ಖಾತೆ ಸಚಿವರಾಗಿದ್ದರು. ಆಗ ರಾಜ್ಯದಲ್ಲಿ 169 ಪ್ರಥಮ ದರ್ಜೆ ಕಾಲೇಜುಗಳು ಇದ್ದವು, ಆಗ ಕಾಲೇಜುಗಳ ಕೊರತೆ ಹೆಚ್ಚಾಗಿತ್ತು. ಅದಕ್ಕೆ ಅಂದಿನ ನಮ್ಮ ಸರಕಾರ ಸ್ಪಂದಿಸಿತು. ಹೊಸದಾಗಿ 189 ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪನೆ ಮಾಡಲಾಯಿತು. ಅದರಲ್ಲಿ ವಿಜ್ಞಾನ ಕಾಲೇಜುಗಳನ್ನು ಹೆಚ್ಚು ತೆರೆಯಲಾಯಿತು. 500 ಜ್ಯೂನಿಯರ್ ಕಾಲೇಜುಗಳು, ಆರು ಎಂಜಿನಿಯರಿಂಗ್ ಕಾಲೇಜ್ ಹಾಗೂ ಸಾವಿರಾರು ಶಾಲೆಗಳನ್ನು ಆರಂಭ ಮಾಡಿದ್ದೆವು. ಇದರಿಂದ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಯೇ ಆಯಿತು ಎನ್ನುವುದು ನನ್ನ ಭಾವನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪೋಷಕರ ಮನಸ್ಥಿತಿ ಹಾಗೂ ಪೈಪೋಟಿ ಮನೋಭಾವನೆಯಿಂದ ಗ್ರಾಮೀಣ ಭಾಗದ ಮಕ್ಕಳ ಮಾತೃಭಾಷಾ ಕಲಿಕೆ ಪ್ರಮಾಣ ಕುಸಿಯುತ್ತಿದೆ. ನಗರ ಪ್ರದೇಶಗಳ ಮಕ್ಕಳ ಜತೆ ಅವರು ಪೈಪೋಟಿ ನಡೆಸಬೇಕಿದೆ. ಹೀಗಾಗಿ ಪೋಷಕರ ಆಲೋಚನೆಯೇ ಬೇರೆಯಾಗಿದೆ. ಅವರಿಗೆ ಮಕ್ಕಳ ಭವಿಷ್ಯವನ್ನು ರೂಪಿಸುವುದೇ ಸವಾಲಿನ ಕೆಲಸವಾಗಿದೆ. ಇಂತಹ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ನಾನು ಎರಡನೇ ಬಾರಿಗೆ ಮುಖ್ಯಮಂತ್ರಿ ಆದಾಗ, ಸಾವಿರ ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲು ಹೊರಟಿದ್ದು ನಿಜ. ಕನ್ನಡಕ್ಕೆ ಅಪಾಯ ಉಂಟು ಮಾಡಬೇಕು ಎಂದು ಆ ನಿರ್ಧಾರ ಮಾಡಲಿಲ್ಲ. ನಗರ ಪ್ರದೇಶಗಳ ಮಕ್ಕಳ ಜತೆ ಪೈಪೋಟಿಗೆ ಹಳ್ಳಿ ಮಕ್ಕಳನ್ನು ಸಜ್ಜು ಮಾಡುವ ಸದುದ್ದೇಶದಿಂದ ನಾನು ಆ ನಿರ್ಧಾರ ಮಾಡಿದ್ದೆ. ಜತೆಗೆ, ಕಲಿಕೆಯಲ್ಲಿ ಕನ್ನಡಕ್ಕೆ ಒತ್ತು ಕೊಡುವ ಕೆಲಸವನ್ನು ನಾನು ಮಾಡಿದ್ದೆ ಎಂದರು.

ಸಾಹಿತ್ಯ ಕುರಿತಾದ ತಮ್ಮ ಆಸಕ್ತಿಯನ್ನು ಸಭಿಕರ ಮುಂದೆ ಹಂಚಿಕೊಂಡ ಕೇಂದ್ರ ಸಚಿವರು; 'ದುರ್ಗಾಸ್ತಮಾನ' ನಾನು ಬಹುವಾಗಿ ಇಷ್ಟಪಟ್ಟು ಓದಿದ ಬೃಹತ್ ಕಾದಂಬರಿ. ಸಾವಿರ ಪುಟಗಳ ಆ ಮಹಾನ್ ಕಾದಂಬರಿಯನ್ನು ಓದಿ ರೋಮಾಂಚನಗೊಂಡಿದ್ದೇನೆ. ಆ ಕಾದಂಬರಿಯಲ್ಲಿ ವೀರ ಮದಕರಿನಾಯಕರ ಅಂತ್ಯದ ಕಥನ ಓದಿದರೆ ಎಂತಹವರ ಹೃದಯವೂ ಕರಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ವ್ಯಾಸರಾಯ ಬಲ್ಲಾಳರ ಕಾದಂಬರಿಗಳಿಗೆ ನಾನು ಹೆಚ್ಚು ಆಕರ್ಷಿತನಾಗಿದ್ದೇನೆ. ಗಜಾನನ ಶರ್ಮ ಅವರ 'ಚನ್ನಾಭೈರಾದೇವಿ' ಕಾದಂಬರಿ, ಗೋಪಾಲಕೃಷ್ಣ ಪೈ ಅವರ 'ಸ್ವಪ್ನ ಸಾರಸ್ವತ', ಬೊಳುವಾರು ಮುಹಮ್ಮದ್ ಕುಂಞಿ ಅವರ 'ಸ್ವಾತಂತ್ರ್ಯದ ಓಟ' ಇತ್ಯಾದಿ ಕಾದಂಬರಿಗಳನ್ನು ಓದಿದ್ದೇನೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+