ಲೋಕಸಭೆ ಚುನಾವಣೆ ಸೋಲಿಗೆ ಅರ್ಥ ಹುಡುಕಿಕೊಂಡ ದೇವೇಗೌಡರು
ಬೆಂಗಳೂರು, ಜುಲೈ 04: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿರುವ ಜೆಡಿಎಸ್ ವರಿಷ್ಠ ದೇವೇಗೌಡ ಅವರು, ತಮ್ಮ ಸೋಲಿಗೆ ಹೊಸ ಅರ್ಥವನ್ನು ಹುಡುಕಿಕೊಂಡಿದ್ದಾರೆ.
ಆಗುವುದೆಲ್ಲಾ ಒಳ್ಳೆಯದಕ್ಕೇ ಎಂಬ ಸೂತ್ರವನ್ನು ಅಳವಡಿಸಿಕೊಂಡಿರುವ ದೇವೇಗೌಡ ಅವರು, ನಾನು ಚುನಾವಣೆಯಲ್ಲಿ ಸೋತಿದ್ದು ಪಕ್ಷ ಸಂಘಟನೆ ಮಾಡೋಕೆ ಎಂದು ಹೇಳಿದ್ದಾರೆ.
ಇಂದು ಗುರುವಾರ ಜೆ.ಪಿ.ಭವನದಲ್ಲಿ ನಡೆದ ಸಮಾರಂಭದಲ್ಲಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವೇಗೌಡ ಸೋತಿದ್ದೇ ಪಕ್ಷವನ್ನು ಸಂಘಟನೆ ಮಾಡುವುದಕ್ಕೆ, ಸೋಲಿನಿಂದ ನಾನು ಧೃತಿಗೆಟ್ಟಿಲ್ಲ ಎಂದರು.
ದೇವೇಗೌಡ ಅವರು ಇನ್ನೊಂದು ಚುನಾವಣೆಗೆ ಆಸೆ ಪಡುತ್ತಿದ್ದಾರೆ ಎಂಬುದು ಸುಳ್ಳು ಮಾತು ಅದನ್ನೆಲ್ಲಾ ಬಿಟ್ಟುಬಿಡಿ, ಮೈತ್ರಿ ಸರ್ಕಾರಕ್ಕೆ ಧಕ್ಕೆ ಆಗದಂತೆ, ಅಪಾಯ ಬರದಂತೆ ಪಕ್ಷವನ್ನು ಸಂಘಟನೆ ಮಾಡುತ್ತೇನೆ ಎಂದು ದೇವೇಗೌಡರು ಕಾರ್ಯಕರ್ತರು, ಮುಖಂಡರಿಗೆ ಹೇಳಿದರು.

ಎಚ್.ವಿಶ್ವನಾಥ್ ಅವರಿಗೆ ಆಭಾರಿಯಾಗಿದ್ದೇನೆ: ದೇವೇಗೌಡ
ಇಷ್ಟು ದಿನ ಪಕ್ಷದ ಅಧ್ಯಕ್ಷರಾಗಿದ್ದ ಎಚ್.ವಿಶ್ವನಾಥ್ ಅವರಿಗೆ ಆಭಾರಿಯಾಗಿದ್ದೇನೆ ಎಂದ ದೇವೇಗೌಡ, ಪಕ್ಷದ ಅಧ್ಯಕ್ಷರ ಆಯ್ಕೆ ಸವಾಲನ್ನು ಭೇದಿಸಿದ್ದೇನೆ, ನನ್ನ ಮಾತಿಗೆ ಒಪ್ಪಿ ಇಂದು ಅಧಿಕಾರ ಸ್ವೀಕರಿಸಿದ ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದು ದೇವೇಗೌಡ ಅವರು ಹೇಳಿದರು.

ಹಠ ಮಾಡಿ ನಿಖಿಲ್ರನ್ನು ಅಧ್ಯಕ್ಷರನ್ನಾಗಿಸಿದರು: ದೇವೇಗೌಡ
ಶರಣು ಗೌಡ ಕುಂದನೂರು ಹಠ ಮಾಡಿ ಜೆಡಿಎಸ್ನ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ ಅವರನ್ನ ಆಯ್ಕೆ ಮಾಡಿಸಿದ್ರು. ನಿಖಿಲ್ ನಾಯಕತ್ವದಲ್ಲಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಘಟಕಗಳ ಪದಾಧಿಕಾರಿಗಳ ನೇಮಕ ಆಗಲಿ ಎಂದು ಸೂಚನೆ ನೀಡಿದರು.

ಪದಾಧಿಕಾರಿಗಳ ಆಯ್ಕೆ ಶೀಘ್ರ ಮುಗಿಸುತ್ತೇವೆ: ದೇವೇಗೌಡ
ಪರಿಶಿಷ್ಟ, ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನ ಶೀಘ್ರವೇ ನೇಮಕ ಮಾಡುತ್ತೇವೆ. ಪದಾಧಿಕಾರಿಗಳ ಆಯ್ಕೆ ಶೀಘ್ರವೇ ಮುಗಿಸುತ್ತೇವೆ ಎಂದು ದೇವೇಗೌಡ ಅವರು ಭರವಸೆ ನೀಡಿದರು.

ತುಮಕೂರಿನಲ್ಲಿ ಸೋತ ದೇವೇಗೌಡರು
ದೇವೇಗೌಡ ಅವರು ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು, ಅವರು ಬಿಜೆಪಿಯ ಬಸವರಾಜು ಅವರ ವಿರುದ್ಧ 12 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲನುಭವಿಸಿದರು. ಹಾಲಿ ಸಂಸದ ಮುದ್ದಹನುಮೇಗೌಡ ಅವರ ಸ್ಥಾನವನ್ನು ದೇವೇಗೌಡ ಅವರಿಗೆ ನೀಡಲಾಗಿತ್ತು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications