ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ: ಉದ್ಧವ್ ಠಾಕ್ರೆಗೆ ಲಕ್ಷ್ಮಣ ಸವದಿ ತಿರುಗೇಟು
ಬೆಂಗಳೂರು, ಜನವರಿ 28: ಕರ್ನಾಕಕದಲ್ಲಿನ ಮರಾಠಿ ಮಾತನಾಡುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು. ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆ ಸುಪ್ರೀಂಕೋರ್ಟ್ನಲ್ಲಿ ಇತ್ಯರ್ಥವಾಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಬೇಕೆಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.
ಮುಂಬೈ ಅನ್ನು ಅಧಿಕೃತವಾಗಿ ಕರ್ನಾಟಕಕ್ಕೆ ಸೇರಿಸುವವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಈ ಭಾಗವನ್ನು ಮುಂಬೈ-ಕರ್ನಾಟಕ ಎಂದು ಕರೆಯಲಾಗುತ್ತದೆ. ಅಂದರೆ ಮಹಾರಾಷ್ಟ್ರ ರಾಜಧಾನಿ ಮುಂಬೈ ಮೇಲೆ ನಮಗೆ ಕೂಡ ಹಕ್ಕು ಇದೆ ಎಂದಾಯ್ತು. ನಾವು ಮುಂಬೈ ಕರ್ನಾಟಕ ಭಾಗದವರು. ಮುಂಬೈ ನಮ್ಮದು. ಬೆಳಗಾವಿಯನ್ನು ಕರ್ನಾಟಕಕ್ಕೆ ಸೇರಿಸುವ ಕುರಿತು ಮಹಾಜನ್ ಆಯೋಗದ ತೀರ್ಪು ಬಂದಿದೆ. ಇನ್ನು ಮುಂಬೈ ಕೂಡ ನಮ್ಮದು ಎಂಬ ಬೇಡಿಕೆ ಇಡಲು ಶುರುಮಾಡುತ್ತೇವೆ. ನಮ್ಮ ಬೇಡಿಕೆ ಈಡೇರುವವರೆಗೂ ಮುಂಬೈ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಕರೆಯುವಂತೆ ಆಗ್ರಹಿಸುತ್ತೇವೆ ಎಂದು ತಿಳಿಸಿದ್ದಾರೆ. ಮುಂದೆ ಓದಿ.

ಮಹಾಜನ್ ವರದಿ ಅಂತಿಮ
ಗಡಿ ವಿಷಯದಲ್ಲಿ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂದು ಕರ್ನಾಟಕ ಸಾವಿರ ಸಲ ಹೇಳಿದೆ. ಆದರೆ ಗಡಿ ಸಮಸ್ಯೆಯನ್ನು ಜೀವಂತವಾಗಿ ಇರಿಸಲು ಬಯಸುವ ಮಹಾರಾಷ್ಟ್ರ ಮಾತ್ರ ಆಗಾಗ ತಕರಾರು ತೆಗೆಯುತ್ತಲೇ ಇದೆ ಎಂದು ಲಕ್ಷ್ಮಣ ಸವದಿ ಕಿಡಿಕಾರಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಘೋಷಿಸಿ
'ಮಹಾರಾಷ್ಟ್ರ-ಕರ್ನಾಟಕ ಗಡಿ ತಗಾದೆ-ಹೋರಾಟ ಮತ್ತು ನಿಶ್ಚಯ' ಎಂಬ ಪುಸ್ತಕ ಬಿಡುಗಡೆ ಮಾಡಿ ಬುಧವಾರ ಮಾತನಾಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಸುಪ್ರೀಂಕೋರ್ಟ್ನಲ್ಲಿ ಬಗೆಹರಿಯುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಆಗ್ರಹಿಸಿದ್ದರು.

ಕರ್ನಾಟಕದಿಂದ ದೌರ್ಜನ್ಯ
'ಗಡಿಭಾಗದಲ್ಲಿನ ಮರಾಠಿ ಭಾಷಿಕರ ಮೇಲೆ ಕರ್ನಾಟಕ ದೌರ್ಜನ್ಯ ನಡೆಸುತ್ತಿದೆ. ಇದನ್ನು ತಡೆಯಬೇಕೆಂದರೆ ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು. ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಕರ್ನಾಟಕ ಸರ್ಕಾರ ಉದ್ದೇಶಪೂರ್ವಕವಾಗಿ ಬೆಳಗಾವಿಯ ಹೆಸರನ್ನು ಬದಲಿಸಿತ್ತು. ಬೆಳಗಾವಿಯನ್ನು ಎರಡನೆಯ ರಾಜಧಾನಿಯನ್ನಾಗಿ ಮಾಡಿ ವಿಧಾನಸಭೆ ಅಧಿವೇಶನ ಕೂಡ ನಡೆಸಿದೆ. ನಾವು ಕಾನೂನು ಬಗ್ಗೆ ಯೋಚಿಸುತ್ತೇವೆ, ಆದರೆ ಕರ್ನಾಟಕ ಅದಕ್ಕೆ ಬೆಲೆ ನೀಡುತ್ತಿಲ್ಲ. ನಾವೆಲ್ಲರೂ ಜತೆಗೂಡಿದರೆ ಅದನ್ನು ಮಹಾರಾಷ್ಟ್ರದ ಭಾಗವನ್ನಾಗಿ ಮಾಡುತ್ತೇವೆ' ಎಂದು ಉದ್ಧವ್ ಠಾಕ್ರೆ ಹೇಳಿದ್ದರು.

ಠಾಕ್ರೆ ವಿರುದ್ಧ ಸಿದ್ದರಾಮಯ್ಯ ಕಿಡಿ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬೆಳಗಾವಿ ಗಡಿ ವಿವಾದದ ಬಗೆಗಿನ ಪುಸ್ತಕ ಬಿಡುಗಡೆ ಮಾಡಿ ಅನಗತ್ಯವಾಗಿ ಕರ್ನಾಟಕವನ್ನು ಕೆಣಕುವ ಉದ್ದಟತನ ತೋರಿಸಿದ್ದಾರೆ. ಒಬ್ಬ ಮುಖ್ಯಮಂತ್ರಿ ಮತ್ತೆ ಮತ್ತೆ ಈ ರೀತಿ ಪುಂಡು-ಪೋಕರಿ ರೀತಿ ವರ್ತಿಸುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
-
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ; ಮಹಾರಾಷ್ಟ್ರ ನಿಜವಾದ ಕಿಂಗ್ ಎಂದ ಮಹಾ ಸಿಎಂ ದೇವೇಂದ್ರ ಫಡ್ನವೀಸ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral











Click it and Unblock the Notifications