ಜಾತಿ ಗಣತಿ ಆರಂಭಿಸಿದ್ದೇ ನಾನು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 30: ಪ್ರತಿಯೊಂದು ಜಾತಿ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯುವುದಕ್ಕೆ ಮತ್ತು ಸಂವಿಧಾನದ ಆಶಯಗಳನ್ನು ಕಾರ್ಯಕ್ರಮಗಳ ಮೂಲಕ ಎಲ್ಲಾ ಸಮುದಾಯಗಳಿಗೂ ತಲುಪಿಸುವುದಕ್ಕಾಗಿ ನಾನೇ ಜಾತಿಗಣತಿ ಆರಂಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಹೇಳಿದ್ದ ಎಚ್ಚರಿಕೆ ಮಾತುಗಳನ್ನು ನಾವು ಮರೆಯಬಾರದು. ಜಾತಿ ಗಣತಿಗೆ ಕಾಂಗ್ರೆಸ್ ಬದ್ದವಾಗಿದೆ. ಇಡೀ ದೇಶದಲ್ಲಿ ಜಾರಿ ಮಾಡಲು ಕಾಂಗ್ರೆಸ್ ಬದ್ದವಾಗಿದೆ ಎಂದರು.

ಸಮಾಜ ಸೇವಕ ದಿವಂಗತ ಲಿಂಗಪ್ಪಗೆ ಮರಣೋತ್ತರ ಕನಕಶ್ರೀ ಪ್ರಶಸ್ತಿ ಲಭಿಸಿದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಕನಕದಾಸರ ಕುರಿತ ಸಾಹಿತ್ಯ ಕೃಷಿ ಮಾಡದಿದ್ದರೂ ಕನಕದಾಸರ ತತ್ವಾದರ್ಶಗಳನ್ನು ಪಾಲಿಸುತ್ತಾ, ಜನ ಸೇವಕರಾಗಿದ್ದ ಲಿಂಗಪ್ಪ ಅವರನ್ನು ಕನಕಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಅತ್ಯಂತ ಸೂಕ್ತ ಎಂದು ಮೆಚ್ಚುಗೆ ಸೂಚಿಸಿದರು.
ಕುರುಬರಾಗಿ ನಾವು ಜನಿಸಿರಬಹುದು, ವಿಶ್ವ ಮಾನವರಾಗಿ ಬಾಳೋಣ-ಸಿದ್ದರಾಮಯ್ಯ
ಕನಕದಾಸರು ಆಕಸ್ಮಿಕವಾಗಿ ಕುರುಬರಾಗಿ ಹುಟ್ಟಿದ ವಿಶ್ವಶ್ರೇಷ್ಠ ಮಾನವೀಯ ಚೈತನ್ಯರಾಗಿದ್ದರು. ದಾಸಪಂಥಕ್ಕೆ ಪ್ರವೇಶಿಸುವ ಮೊದಲು ಕನಕರು ಪಾಳೇಗಾರರಾಗಿದ್ದರು. ಆದಿಕೇಶವನ ಭಕ್ತರಾಗಿ ದಾಸರಾಗಿ, ದಾಸಶ್ರೇಷ್ಠರೂ ಆದರು. ಆದರೆ ಕನಕದಾಸರ ಕೀರ್ತನೆಗಳಲ್ಲಿ ಅತ್ಯುನ್ನತ ಮಾನವೀಯ ಮೌಲ್ಯಗಳಿವೆ ಎಂದು ವಿವರಿಸಿದರು.
ನಾನು ಕುರುಬನಾಗಿ ಜನಿಸಿದ್ದೇನೆ. ನೀವುಗಳೂ ಕುರುಬ ಸಮುದಾಯದಲ್ಲಿ ಜನಿಸಿರಬಹುದು. ಹಾಗಂದ ಮಾತ್ರಕ್ಕೆ ಕುರುಬರಾಗೇ ಸಾಯಬೇಕಾ? ಅಪ್ಪಟ ಮನುಷ್ಯರಾಗಿ ಸಾಯಬೇಕು ಅಲ್ವಾ ಎಂದರು.
ಕನಕದಾಸರನ್ನು ಶೂದ್ರ ಜಾತಿಯವ ಎನ್ನುವ ಕಾರಣಕ್ಕೆ ಕೃಷ್ಣನ ದರ್ಶನಕ್ಕೆ ಬಿಡಲಿಲ್ಲ. ಕುವೆಂಪು ಅವರು ಹೇಳಿದಂತೆ ನಾವೆಲ್ಲಾ ವಿಶ್ವ ಮಾನವರಾಗಲು ಸಾಧ್ಯವಾಗದಿದ್ದರೂ ವಿಶ್ವ ಮಾನವರಾಗುವ ಮಾರ್ಗದಲ್ಲಿ ಸಾಗಬೇಕು. ಆ ಮೂಲಕ ನಾವೆಲ್ಲಾ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಕನಕದಾಸರ 500 ನೇ ಜಯಂತಿಯನ್ನು ಮಾಡಿದ್ದು ನಾನೇ. ಅಲ್ಲಿಯವರೆಗೂ 400 ನೇ ಜಯಂತಿಯನ್ನು ಯಾರೂ ಆಚರಿಸಿರಲಿಲ್ಲ. ಸುಖಾ ಸುಮ್ಮನೆ ಎಲ್ಲರಿಗೂ ಚಪ್ಪಾಳೆ ತಟ್ಟಬೇಡಿ. ನಿಮ್ಮಲ್ಲೊಂದು ತತ್ವ ಇರಲಿ. ಮೂರು ವರ್ಷಗಳಿಂದ ಕನಕಶ್ರೀ ಪ್ರಶಸ್ತಿಯನ್ನೇ ಕೊಟ್ಟಿಲ್ಲ. ಆದರೂ ಅವರಿಗೂ ಚಪ್ಪಾಳೆ ತಟ್ಟೋದು, ಇಲ್ಲಿ ಬಂದು ನನಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ನಿಮಗೆ ಸ್ಪಷ್ಟತೆ ಇರಲಿ. ಕನಕದಾಸರು ಒಂದು ಜಾತಿಗೆ ಸೇರಿದವರಲ್ಲ. ಕುರುಬ ಜಾತಿಯವರನ್ನು ಮೆಚ್ಚಿಸಲು ಕನಕ ಜಯಂತಿ ಮಾಡುತ್ತಿಲ್ಲ. ಕನಕದಾಸರು ವಿಶ್ವ ಮಾನವರಾಗಿದ್ದರು. ಅವರ ತತ್ವಾದರ್ಶಗಳನ್ನು ಪಾಲಿಸಿ ವಿಶ್ವ ಮಾನವರಾಗೋಣ ಎಂದು ಸಭಿಕರಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ತಿಂಥಣಿಯ ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮೀಜಿ, ಡಿಸಿಎಂ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಮಾಜಿ ಸಚಿವ ಎಚ್. ಎಂ. ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications