ಕೊಟ್ಟ ಮಾತಿನಂತೆ ಗಡ್ಡ ಬೋಳಿಸಿಕೊಂಡ ಯತ್ನಾಳ್ ಈಗ ಬಸವಣ್ಣ ಅಂತೆ!
ಬೆಂಗಳೂರು, ಜು. 28: ''ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುತ್ತೇನೆ. ಅಲ್ಲಿಯವರೆಗೂ ಗಡ್ಡ ತೆಗೆಯಲ್ಲ'' ಎಂದು ಶಪಥ ಮಾಡಿದ್ದ ರೆಬಲ್ ಲೀಡರ್ ಬಸವನಗೌಡ ಪಾಟೀಲ್ ಯತ್ನಾಳ್ ಇಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಗಡ್ಡ ತೆಗೆದಿದ್ದಾರೆ.
ಯಡಿಯೂರಪ್ಪ ಅವರ ಕುಟುಂಬ ಹಸ್ತಕ್ಷೇಪದಿಂದ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಹಿರಂಗವಾಗಿ ಸಮರ ಸಾರಿದ್ದ ಬಸವನಗೌಡ ಪಾಟೀಲ್ ಯತ್ನಾಳ್. ಯಡಿಯೂರಪ್ಪ ಅವರನ್ನು ಬದಲಿಸುತ್ತೇನೆ ಎಂದೇ ಸವಾಲು ಹಾಕಿದ್ದರು. ಆರಂಭದಲ್ಲಿ ದೊಡ್ಡ ಯತ್ನಾಳ್ ದೊಡ್ಡ ಸುದ್ದಿಯಾದರೂ, ನಂತರದ ದಿನಗಳಲ್ಲಿ ಸಾಮಾನ್ಯವಾಗಿ ಬಿಟ್ಟಿತು. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುವವರೆಗೂ ನಾನು ಗಡ್ಡ ತೆಗೆಯುವುದಿಲ್ಲ ಎಂದಿದ್ದರು. ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇದೀಗ ಗಡ್ಡ ತೆಗೆದಿದ್ದಾರೆ. ಇದನ್ನು ಸ್ವತಃ ಬಸವನಗೌಡ ಯತ್ನಾಳ್ ಸ್ಪಷ್ಟ ಪಡಿಸಿದ್ದಾರೆ. ''ಗಡ್ಡ ಬಿಟ್ಟಾಗ ಶಿವಾಜಿಯಾಗಿದ್ದೆ. ಇವಾಗ ಗಡ್ಡ ತೆಗೆದು ಬಸವಣ್ಣ ಆಗಿದ್ದೇನೆ'' ಎಂದಿದ್ದಾರೆ.

Recommended Video
ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿದಿದ್ದಾರೆ. ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ಶುಭ ಹಾರೈಸುತ್ತೇನೆ. ಸರ್ಕಾರಕ್ಕೆ ಯಾವ ಸಲಹೆ ನೀಡಲ್ಲ. ಹಿಂದುತ್ವ ಪರ ಹಾಗೂ ಭ್ರಷ್ಟಚಾರ ಮುಕ್ತ ಆಡಳಿತ ನಿರೀಕ್ಷೆ ಮಾಡುತ್ತೇವೆ. ಬಸವರಾಜ ಬೊಮ್ಮಾಯಿ ಬುದ್ಧಿವಂತರಿದ್ದಾರೆ. ಅವರು ಯಡಿಯೂರಪ್ಪ ಕುಟುಂಬದ ಹಸ್ತಕ್ಷೇಪದಿಂದ ಹೊರ ಬಂದು ಎಲ್ಲರನ್ನು ಒಗ್ಗಟ್ಟಾಗಿ ಕರೆದುಕೊಂಡು ಹೋಗಬೇಕಿದೆ. ಯಡಿಯೂರಪ್ಪ ಕುಟುಂಬದಿಂದ ದೂರ ಉಳಿದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎನ್ನುವ ನಂಬಿಕೆ ಇದೆ. ನಾನು ಯಾವ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಅರ್ಹತೆ ಇದ್ದರೆ ಕೊಡಲಿ, ಇಲ್ಲವೇ ಬಸವನಗೌಡ ಪಾಟೀಲ್ ಯತ್ನಾಳ್ ಆಗಿಯೇ ಇರುತ್ತೇನೆ ಎಂದು ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications