ಕೊಟ್ಟ ಮಾತಿನಂತೆ ಗಡ್ಡ ಬೋಳಿಸಿಕೊಂಡ ಯತ್ನಾಳ್ ಈಗ ಬಸವಣ್ಣ ಅಂತೆ!
ಬೆಂಗಳೂರು, ಜು. 28: ''ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುತ್ತೇನೆ. ಅಲ್ಲಿಯವರೆಗೂ ಗಡ್ಡ ತೆಗೆಯಲ್ಲ'' ಎಂದು ಶಪಥ ಮಾಡಿದ್ದ ರೆಬಲ್ ಲೀಡರ್ ಬಸವನಗೌಡ ಪಾಟೀಲ್ ಯತ್ನಾಳ್ ಇಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಗಡ್ಡ ತೆಗೆದಿದ್ದಾರೆ.
ಯಡಿಯೂರಪ್ಪ ಅವರ ಕುಟುಂಬ ಹಸ್ತಕ್ಷೇಪದಿಂದ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಹಿರಂಗವಾಗಿ ಸಮರ ಸಾರಿದ್ದ ಬಸವನಗೌಡ ಪಾಟೀಲ್ ಯತ್ನಾಳ್. ಯಡಿಯೂರಪ್ಪ ಅವರನ್ನು ಬದಲಿಸುತ್ತೇನೆ ಎಂದೇ ಸವಾಲು ಹಾಕಿದ್ದರು. ಆರಂಭದಲ್ಲಿ ದೊಡ್ಡ ಯತ್ನಾಳ್ ದೊಡ್ಡ ಸುದ್ದಿಯಾದರೂ, ನಂತರದ ದಿನಗಳಲ್ಲಿ ಸಾಮಾನ್ಯವಾಗಿ ಬಿಟ್ಟಿತು. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುವವರೆಗೂ ನಾನು ಗಡ್ಡ ತೆಗೆಯುವುದಿಲ್ಲ ಎಂದಿದ್ದರು. ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇದೀಗ ಗಡ್ಡ ತೆಗೆದಿದ್ದಾರೆ. ಇದನ್ನು ಸ್ವತಃ ಬಸವನಗೌಡ ಯತ್ನಾಳ್ ಸ್ಪಷ್ಟ ಪಡಿಸಿದ್ದಾರೆ. ''ಗಡ್ಡ ಬಿಟ್ಟಾಗ ಶಿವಾಜಿಯಾಗಿದ್ದೆ. ಇವಾಗ ಗಡ್ಡ ತೆಗೆದು ಬಸವಣ್ಣ ಆಗಿದ್ದೇನೆ'' ಎಂದಿದ್ದಾರೆ.

Recommended Video
ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿದಿದ್ದಾರೆ. ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ಶುಭ ಹಾರೈಸುತ್ತೇನೆ. ಸರ್ಕಾರಕ್ಕೆ ಯಾವ ಸಲಹೆ ನೀಡಲ್ಲ. ಹಿಂದುತ್ವ ಪರ ಹಾಗೂ ಭ್ರಷ್ಟಚಾರ ಮುಕ್ತ ಆಡಳಿತ ನಿರೀಕ್ಷೆ ಮಾಡುತ್ತೇವೆ. ಬಸವರಾಜ ಬೊಮ್ಮಾಯಿ ಬುದ್ಧಿವಂತರಿದ್ದಾರೆ. ಅವರು ಯಡಿಯೂರಪ್ಪ ಕುಟುಂಬದ ಹಸ್ತಕ್ಷೇಪದಿಂದ ಹೊರ ಬಂದು ಎಲ್ಲರನ್ನು ಒಗ್ಗಟ್ಟಾಗಿ ಕರೆದುಕೊಂಡು ಹೋಗಬೇಕಿದೆ. ಯಡಿಯೂರಪ್ಪ ಕುಟುಂಬದಿಂದ ದೂರ ಉಳಿದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎನ್ನುವ ನಂಬಿಕೆ ಇದೆ. ನಾನು ಯಾವ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಅರ್ಹತೆ ಇದ್ದರೆ ಕೊಡಲಿ, ಇಲ್ಲವೇ ಬಸವನಗೌಡ ಪಾಟೀಲ್ ಯತ್ನಾಳ್ ಆಗಿಯೇ ಇರುತ್ತೇನೆ ಎಂದು ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications