ನಾನು ಹೊನ್ನಾಳಿಯಿಂದ ಎಂಎಲ್ ಎ ಸ್ಥಾನಕ್ಕೆ ಸರ್ಧಿಸುತ್ತೇನೆ: ರೇಣುಕಾಚಾರ್ಯಗೆ ಟಾಂಗ್ ಕೊಟ್ಟ ಜಿ ಎಂ ಸಿದ್ದೇಶ್ವರ್
ದಾವಣಗೆರೆ, ಜುಲೈ 15: ವಿಧಾನಸಭಾ ಚುನಾವಣೆಯಲ್ಲಿ ಎಂ ಪಿ ರೇಣುಕಾಚಾರ್ಯ ಸೋಲಿನ ಬಳಿಕ ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಆಸೆಯನ್ನ ವ್ಯಕ್ತಪಡಿಸಿದ್ದು, ದಾವಣಗೆರೆಯ ಹಾಲಿ ಸಂಸದ ಜಿ ಎಂ ಸಿದ್ದೇಶ್ವರ್ ನಾನು ಅವರಂತೆ ಒಬ್ಬ ಆಕಾಂಕ್ಷಿ ಎಂದು ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಅವರು, ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ತಮಗೇ ನೀಡುವಂತೆ ಮಾಜಿ ಶಾಸಕ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ಎಂಪಿ ಟಿಕೆಟ್ ಅವರಿಗೆ ಕೊಡಲಿ. ಆಗ ಹೊನ್ನಾಳಿ ಕ್ಷೇತ್ರ ಖಾಲಿ ಆಗುತ್ತದೆ, ಅಲ್ಲಿ ನಮ್ಮವರು ಬಹಳ ಮಂದಿ ಇದ್ದು, ಕ್ಷೇತ್ರದಿಂದ ಸ್ಪರ್ಧಿಸಿ ಎಂದು ತುಂಬಾ ದಿನಗಳಿಂದ ಕೇಳುತ್ತಿದ್ದಾರೆ. ರೇಣುಕಾಚಾರ್ಯ ಸ್ವಾಮಿ ಇಲ್ಲಿಗೆ ಬಂದರೆ, ನಾನು ಹೊನ್ನಾಳಿಯಿಂದ ಎಂಎಲ್ ಎ ಸ್ಥಾನಕ್ಕೆ ಸರ್ಧಿಸುತ್ತೇನೆ ಎಂದು ಹೇಳಿದ್ದಾರೆ.

ಭೀಮಸಮುದ್ರ ಗಣಿಗಾರಿಕೆ ಬಂದ್ ಆಗಿರುವ ಬಗ್ಗೆ ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಸಚಿವ ಎಸ್..ಎಸ್.ಮಲ್ಲಿಕಾರ್ಜುನ ನಡುವೆ ಮಾತಿನ ಚಕಮಕಿ ಮುಂದುವರೆದಿದ್ದು, 'ಆನೆ ನಡೆಯುವಾಗ ನಾಯಿ ಬೊಗಳುವುದು ಸಹಜ ಅದಕ್ಕೆಲ್ಲ ತಲೆಕೆಡಿಸಿಕೊಳ್ಳೋದಿಲ್ಲ. 'ಕಾಲೇಜು, ಜಮೀನು ತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಆರೋಪ ಮಾಡಿದ್ದಾರೆ. ದುಡಿದ ಹಣದಲ್ಲಿ ಎಲ್ಲವನ್ನೂ ಖರೀದಿಸುತ್ತೇನೆ. ನಾನೇನು ಭ್ರಷ್ಟಾಚಾರ ಮಾಡಿಲ್ಲ ಎಂದು ಹೇಳಿದರು.
ನಮ್ಮ ತಂದೆ ಕಾಲದಿಂದಲೂ ನಾವು ವ್ಯಾಪಾರಸ್ಥರು.ನಾನು ಆಗಲೇ ಐಟಿ ಫೇರ್ ಆಗಿದ್ದೇ. ಎಲ್ಲವೂ ಲೆಕ್ಕ ಇದೆ. ಶಾಸಕ ಶಾಮನೂರು ಶಿವಶಂಕರಪ್ಪರಿಗೆ ನಾವು 90 ದಶಕದಲ್ಲಿ ಸಾಲ ನೀಡಿದ್ದೇ. ನಮ್ಮ ಬಿಜೆಪಿ ಸರಕಾರ ಅಧಿಕಾರ ಇದ್ದಾಗ ಯಾವುದೇ ಯೋಜನೆಯಡಿ ದುಡ್ಡೂ ಹೊಡೆದಿಲ್ಲ. ಸ್ಮಾರ್ಟ್ ಸಿಟಿ, ಆಶ್ರಯ ಮನೆ ಹಂಚಿಕೆ ಬಗ್ಗೆ ತನಿಖೆ ಮಾಡಿಸುವು ದಾದರೆ ಮಾಡಲಿ. ಅದರ ಜೊತೆಗೆ ಮಲ್ಲಿಕಾರ್ಜುನ್ ಈ ಹಿಂದೆ ಸಚಿವರಾಗಿದ್ದಾಗ ನಡೆದಿರುವ ಕಾಮಗಾರಿಗಳ ಕುರಿತೂ ತನಿಖೆ ನಡೆಸಲಿ. ನನಗೇನೂ ಭಯವಿಲ್ಲ ಎಂದು ತಿರುಗೇಟು ನೀಡಿದರು.
'ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ನನ್ನ ಆಸ್ತಿ ಬಗ್ಗೆ ಕೇಳುತ್ತಾರೆ. 1994ರಲ್ಲಿ ಮಲ್ಲಿಕಾರ್ಜುನ್ ಅವರ ತಂದೆ, ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸಾಲ ಕೊಟ್ಟಿದ್ದೆ. ಶಾಮನೂರು ಅವರು ನನ್ನ ಮಾವ. ಅವರೊಂದಿಗೆ ನನ್ನ ಬಾಂಧವ್ಯ ಚೆನ್ನಾಗಿಯೇ ಇತ್ತು. 1996ರಲ್ಲೂ ಶಿವಶಂಕರಪ್ಪ ಅವರು ನನ್ನ ಬಳಿ ಸಾಲ ಪಡೆದಿದ್ದರು ಎಂದು ಹೇಳಿದರು.
'1997ರಲ್ಲಿ ನಾನು ₹6 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡು ₹1.80 ಕೋಟಿ ತೆರಿಗೆ ಕಟ್ಟಿದ್ದೆ. ಆಗ ಶಾಮನೂರು ಶಿವಶಂಕರಪ್ಪ ತೆರಿಗೆ ಕಟ್ಟಲು ಸಾಲ ಪಡೆದಿದ್ದರು. ಚುನಾವಣೆ ಸಮಯಕ್ಕೆ ಸರಿಯಾಗಿ ಸಾಲ ವಾಪಸ್ ಕೊಡಲಿಲ್ಲ. ನಂತರ ಬಡ್ಡಿ ಸಮೇತ ವಸೂಲಿ ಮಾಡಿದ್ದೆ. ನಾನು ಮಾತ್ರವಲ್ಲ ನಮ್ಮ ಇಡೀ ವಂಶದಲ್ಲೇ ಯಾರೊಬ್ಬರೂ ಲಂಚ ತೆಗೆದುಕೊಂಡಿಲ್ಲ ಎಂದರು.
1993ಕ್ಕೂ ಇಂದಿಗೂ ನಮ್ಮ ಆಸ್ತಿ ಹೆಚ್ಚಳ ಆಗಿದೆ. ಹೌದು. ನಾವೇನು ಕಳ್ಳತನ ಮಾಡಿ, ಭ್ರಷ್ಟಾಚಾರ ಮಾಡಿ ಆಸ್ತಿ ಸಂಪಾದಿಸಿಲ್ಲ. ನಾನು ಭ್ರಷ್ಟಾಚಾರ ಮಾಡಿದ್ದೇನೆ ಎಂದು ಸಾಬೀತು ಮಾಡಿದರೆ ನನ್ನೆಲ್ಲ ಆಸ್ತಿಯನ್ನೂ ಅವರಿಗೆ ಬರೆದುಕೊಡುತ್ತೇನೆ. ಅವರ ಮನೆಯಲ್ಲಿ ದುಡಿಯುವುದು ಅವರೊಬ್ಬರೇ, ನನ್ನನ್ನೂ ಸೇರಿ ನಮ್ಮ ಮನೆಯಲ್ಲಿ ಆರು ಜನ ದುಡಿಯುತ್ತೇವೆ. ಒಬ್ಬ ದುಡಿಯುವುದಕ್ಕೂ ಆರು ಮಂದಿ ದುಡಿಯುವುದಕ್ಕೂ ವ್ಯತ್ಯಾಸವಿದೆ. ಹಿಂದೆ ಅವರ ಆಸ್ತಿ ಎಷ್ಟಿತ್ತು, ನಮ್ಮ ಆಸ್ತಿ ಎಷ್ಟಿತ್ತು ಎಂಬುದನ್ನು ಲೆಕ್ಕ ಹಾಕಲಿ, ಅವರದೇ ಸರಕಾರವಿದೆ. ಬೇಕಿದ್ದರೆ ತನಿಖೆ ಮಾಡಲಿ, ಭ್ರಷ್ಟಾಚಾರ ಸಾಬೀತಾದರೆ ಶಿಕ್ಷೆ ಅನುಭವಿಸಲು ನಾನು ಸಿದ್ಧ ಎಂದು ಸವಾಲು ಹಾಕಿದರು.
ಸಚಿವ ಮಲ್ಲಿಕಾರ್ಜುನ್ಗೆ ನನ್ನ ಮೇಲೆ ಬಹಳ ಪ್ರೀತಿ, ಹಾಗಾಗಿ ಅವರು ನನ್ನ ಬಗ್ಗೆ ಏಕ ವಚನದಲ್ಲಿ ಮಾತನಾಡುತ್ತಾರೆ. ಅದು ಅವರ ಸಂಸ್ಕಾರ ಹೇಗಿದೆ ಎಂದು ತೋರಿಸುತ್ತದೆ. ಮಾವನವರಾದ ಶಾಮನೂರು ಶಿವಶಂಕರಪ್ಪ ಅವರು ಎಲ್ಲೇ ಎದುರಾದರೂ ನಾನು ನಮಸ್ಕಾರ ಮಾಡುತ್ತೇನೆ. ಹಿರಿಯರು ಕಂಡಾಗ ನಮಸುಸುವುದು ನಮ್ಮ ಸಂಸ್ಕೃತಿ, ಹೆತ್ತವರು ನನಗೆ ಕಲಿಸಿರುವ ಸಂಸ್ಕಾರ, ಅಂತಹ ಸಂಸ್ಕೃತಿ, ಸಂಸ್ಕಾರ ಅವರಿಗೆ ಇಲ್ಲ ಎಂದು ಹೇಳಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications