ಉಪಚುನಾವಣೆ ಸ್ಪರ್ಧೆ: ಕಂಪ್ಲೀಟ್ ಉಲ್ಟಾ ಹೊಡೆದ ಎಂಟಿಬಿ ನಾಗರಾಜ್
Recommended Video
ಬೆಂಗಳೂರು, ಸೆ 11: "ಸಕ್ರಿಯ ರಾಜಕಾರಣದಿಂದ ದೂರ ಸರಿಯುತ್ತೇನೆ" ಎಂದಿದ್ದ ಹೊಸಕೋಟೆಯ ಮಾಜಿ ಶಾಸಕ ಎಂಟಿಬಿ ನಾಗರಾಜ್, ಈಗ ಉಲ್ಟಾ ಹೊಡೆದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಎಂಟಿಬಿ, "ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎನ್ನುವ ವಿಚಾರದಲ್ಲಿ ಇನ್ನೂ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಚುನಾವಣೆಗೆ ಸ್ಪರ್ಧಿಸುವಂದತೂ ನಿಶ್ಚಿತ" ಎಂದು ಹೇಳಿದ್ದಾರೆ.
ಉಪಚುನಾವಣೆ: ಹೊಸಕೋಟೆಯಲ್ಲಿ ಎಂಟಿಬಿಗೆ ಗೆಲುವು ಸುಲಭದ ತುತ್ತೇನಲ್ಲ!
"ನಾನೇ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಒಂದು ವೇಳೆ ಸುಪ್ರೀಂಕೋರ್ಟ್ ತೀರ್ಪು ಬರುವ ಮುನ್ನ ಚುನಾವಣೆ ನಡೆದರೆ ಮಾತ್ರ ನನ್ನ ಮಗನನ್ನು ಕಣಕ್ಕಿಳಿಸಲಿದ್ದೇನೆ" ಎಂದು ನಾಗರಾಜ್ ಸ್ಪಷ್ಟ ಪಡಿಸಿದ್ದಾರೆ.
" ಕ್ಷೇತ್ರದ ಅಭಿವೃದ್ದಿಗೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಲು, ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಲು ಹೋಗಿದ್ದೆ" ಎಂದಿರುವ ಎಂಟಿಬಿ, ನನ್ನ ಮುಂದಿನ ನಡೆ ನ್ಯಾಯಾಲಯದಿಂದ ತೀರ್ಪು ಬಂದ ಮೇಲೆ ಎಂದಿದ್ದಾರೆ.
" ನಮ್ಮ ಅರ್ಜಿ ಸರ್ವೋಚ್ಚ ನ್ಯಾಯಾಲಯದಲ್ಲಿ ಇರುವುದರಿಂದ, ಅದರ ತೀರ್ಪು ಬರುವ ತನಕ, ಯಾವುದೇ ತೀರ್ಮಾನ ತೆಗೆದುಕೊಳ್ಳಲು ಹೇಗೆ ಸಾಧ್ಯ" ಎಂದಿರುವ ಎಂಟಿಬಿ, " ಆದಷ್ಟು ಬೇಗ, ನಮ್ಮ ಅರ್ಜಿಯನ್ನು ಸುಪ್ರೀಂ ವಿಲೇವಾರಿ ಮಾಡಲಿದೆ ಎನ್ನುವ ವಿಶ್ವಾಸದಲ್ಲಿದ್ದೇವೆ" ಎಂದು ಹೇಳಿದ್ದಾರೆ.
ಎಂಟಿಬಿ ನಾಗರಾಜ್ ಸ್ವತಂತ್ರ ಸ್ಪರ್ಧೆ ಹೇಳಿಕೆ: ಇಕ್ಕಟ್ಟಿನಲ್ಲಿ ಬಿಜೆಪಿ
ಚುನಾವಣೆಯಲ್ಲಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಎಂಟಿಬಿ ನಾಗರಾಜ್ ಹೇಳುವ ಮೂಲಕ, ತಮ್ಮ ಹಿಂದಿನ ನಡೆಯಿಂದ ಹಿಂದಕ್ಕೆ ಸರಿದಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಕೆಲವು ದಿನಗಳ ಹಿಂದೆ, ಎಂಟಿಬಿ ಹೇಳಿದ್ದರು.