ಪಕ್ಷ ಬಯಸಿದರೆ ಮಾತ್ರ ಕ್ಷೇತ್ರ ಬದಲಾಯಿಸುವೆ : ಬಿ. ನಾಗೇಂದ್ರ
ಬಳ್ಳಾರಿ, ಫೆಬ್ರವರಿ 07: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೂಡ್ಲಿಗಿ ಕ್ಷೇತ್ರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ, ಇಲ್ಲವಾದಲ್ಲಿ ಪಕ್ಷ ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸುವೆ. ನಾನು ಎಂದಿಗೂ ಕೂಡ್ಲಿಗಿ ಕ್ಷೇತ್ರದ ಜನರನ್ನು ಮರೆಯಲು ಸಾಧ್ಯವಿಲ್ಲ ಎಂದು ಶಾಸಕ ಬಿ. ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ
ಬಳ್ಳಾರಿ ಜಿಲ್ಲೆಯ ಕಾನಾಹೊಸಹಳ್ಳಿ ಗ್ರಾಮದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿ, ನಾನು ಅನೇಕರನ್ನು, ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರನ್ನು ಮಾತನಾಡಿಸಿ ಅಭಿಪ್ರಾಯ ಸಂಗ್ರಹ ಮಾಡಿರುವೆ. ಫೆಬ್ರವರಿ 10ರ ಶನಿವಾರ ಹೊಸಪೇಟೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ್ದ ಕಾಂಗ್ರೆಸ್ ಪಕ್ಷದ ಜನ ಪರ ಕಾರ್ಯಗಳನ್ನು ಮೆಚ್ಚಿ ಅ ಪಕ್ಷ ಸೇರುತಿದ್ದೇನೆ. ನಮ್ಮ ಬೆಂಬಲಿಗರು ಯಾವುದೇ ಕಾರಣಕ್ಕೂ ಗೊಂದಲಕ್ಕೆ ಗುರಿ ಆಗಬಾರದು. ನನ್ನ ಮೇಲೆ ವಿಶ್ವಾಸ, ನಂಬಿಕೆ ಹೊಂದಿರುವವರು ನನ್ನೊಂದಿಗೆ ಹೆಜ್ಜೆ ಹಾಕಿ ಎಂದರು.
ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಂ.ಎಂ.ಜೆ. ಹರ್ಷವರ್ಧನ್, ಎಚ್. ರೇವಣ್ಣ, ತಾಲ್ಲೂಕು ಪಂಚಾಯ್ತಿ ಸದಸ್ಯ ಪಾಪನಾಯಕ, ಮುಖಂಡರಾದ ಜಿ. ಉಮೇಶ್, ಕಲ್ಲೇಶಪ್ಪ ಸೇರಿದಂತೆ ನೂರಾರು ಬೆಂಬಲಿಗರು ಸಭೆಯಲ್ಲಿ ಇದ್ದರು.
ಕಾನಹೊಸಹಳ್ಳಿಯಲ್ಲಿ ಮಂಗಳವಾರ ನಡೆದ ಬೆಂಬಲಿರ ಸಭೆಯಲ್ಲಿ ಕೂಡ್ಲಿಗಿ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಮಾತನಾಡಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications