ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ ಖಚಿತ; ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರ: ಆಯನೂರು ಮಂಜುನಾಥ್
ಶಿವಮೊಗ್ಗ,ಏಪ್ರಿಲ್6: ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರವನ್ನು ಮಾಡಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.
ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕುಟುಂಬ ರಾಜಕಾರಣವಿದೆ. ವಯಸ್ಸಿನ ಏರುಪೇರಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಮೋದಿಯವರು ತಮ್ಮ ಕುಟುಂಬವನ್ನೇ ಏಕೆ, ತಮ್ಮ ತಾಯಿಯವರನ್ನೇ ರಾಜಕೀಯದ ನೆರಳನ್ನೂ ಕಾಣದಂತೆ ಸಾಕಿದ್ದವರು. ಅಂತಹ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಇಲ್ಲಿ ಯಾರಿಗೂ ಇಲ್ಲ. ಹಾಗಾಗಿ ಗುಜರಾತ್ ಮಾದರಿಯ ಮೋದಿ ಮಾದರಿಯ ಚುನಾವಣೆ ಎಲ್ಲಿ ಸಾಧ್ಯ ಎಂದರು.

ಮೋದಿ ಹೆಸರು ಹೇಳುವ ಅರ್ಹತೆ ಅನೇಕರಿಗೆ ಇಲ್ಲ. ಬಿಜೆಪಿ ಎಂಬುದು ಒಳ್ಳೆಯ ಬಸ್ಸೇ ಇರಬಹುದು. ಆದರೆ ಅದನ್ನು ಓಡಿಸುವ ಡ್ರೈವರ್, ನಿರ್ವಹಣೆ ಮಾಡುವ ಕಂಡಕ್ಟರ್ ಮತ್ತು ಬಸ್ನಲ್ಲಿದ್ದ ಪ್ರಯಾಣಿಕರು ಕೆಟ್ಟವರಾದರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.
ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರವನ್ನು ಮಾಡಬೇಕಾಗುತ್ತದೆ ಆದರೆ ಅದೇ ಮುಖ್ಯವಲ್ಲ. ಮುಖ್ಯವಾಗಿ ಶಿವಮೊಗ್ಗದಲ್ಲಿ ಶಾಂತಿ ಬಯಸುವವನು ನಾನು. ಈಗಲೂ ಮತ್ತೆ ಮತ್ತೆ ಹೇಳುತ್ತೇನೆ. ಕೆ.ಎಸ್. ಈಶ್ವರಪ್ಪ ಅವರಾಗಲಿ, ಅಥವಾ ಅವರ ಮಗನೇ ಆಗಲಿ ಸ್ಪರ್ಧೆ ಮಾಡಬೇಕು. ಅವರ ವಿರುದ್ಧವೇ ನಾನು ಸ್ಪರ್ಧಿಸುತ್ತೇನೆ. ಹಾಗಂತ ಅವರ ಕೈಗೊಂಬೆಯಂತಿರುವವರು ಸ್ಪರ್ಧಿಸಿದರೂ ಕೂಡ ನಾನು ಅವರ ವಿರುದ್ಧ ಸ್ಪರ್ಧಿಸುತ್ತೇನೆ. ನನಗೆ ಶಾಂತಿ ಮುಖ್ಯ ಎಂದರು.

ಶಿವಮೊಗ್ಗ ಅಭ್ಯರ್ಥಿ ಈಶ್ವರಪ್ಪರನ್ನು ಬದಲಾಯಿಸಬೇಕು ಎಂದು ನಾನು ಬಲವಾಗಿ ಆಗ್ರಹಿಸಿದ್ದೇನೆ. ಈ ನಿಲುವು ಪ್ರಕಟ ಮಾಡಿದ ಮೇಲೆ ಬಿಜೆಪಿಯ ಅನೇಕರು ನನ್ನ ನಿಲುವನ್ನು ಬೆಂಬಲಿಸಿದ್ದಾರೆ. ನನ್ನ ನಡೆ ಬಿಜೆಪಿಯಲ್ಲಷ್ಟೇ ಅಲ್ಲ. ಕಾಂಗ್ರೆಸ್ ನಲ್ಲೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ನನಗೆ ಬಿಜೆಪಿಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂದು ಖಚಿತವಾಗಿದೆ. ಹಾಗಾಗಿ ಪಕ್ಷೇತರನಾಗಿ ಸ್ಪರ್ಧಿಸುವುದು ನಿಶ್ಚಿತ ಎಂದು ಮಂಜುನಾಥ್ ತಿಳಿಸಿದರು.
ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಕುರಿತು ಮಾತನಾಡಿ, ಅವರಿಗೆ ನಿರ್ದೇಶಕರ ಕೊರತೆ ಇದೆ. ಎಂದು ಮಾರ್ಮಿಕವಾಗಿ ಮಾತನಾಡಿದ ಅವರು ನೀವು ವಿಧಾನಸಭೆ ಪ್ರವೇಶ ಮಾಡಲೇಬೇಕು ಎಂದು ಹಲವು ಗೆಳೆಯರು, ಮತದಾರರು, ಬಿಜೆಪಿ ಕಾರ್ಯಕರ್ತರು ಅಭಿಲಾಷೆ ಪಡುತ್ತಿದ್ದಾರೆ. ಕಾರ್ಮಿಕರು, ಆಟೋ ಚಾಲಕರು ಒತ್ತಾಯ ಮಾಡುತ್ತಿದ್ದಾರೆ. ಅವರ ಪ್ರೀತಿಗೆ ಹೃದಯ ತುಂಬಿ ಬಂದಿದೆ. ನನ್ನ ಎಲ್ಲಾ ನಿರ್ಧಾರಗಳನ್ನು ಎಲ್ಲರ ಸಲಹೆ ಪಡೆದೇ ತೆಗೆದುಕೊಳ್ಳುತ್ತೇನೆ ಈ ಎಲ್ಲಾ ನಿರ್ಧಾರ ತೆಗೆದುಕೊಳ್ಳಲು ಮೂರು ನಾಲ್ಕು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದರು.
ಇನ್ನೂ ನೂತನ ಕಚೇರಿ ಓಪನ್ ಮಾಡಿರುವ ಕುರಿತು ಮಾತನಾಡಿ, ಸರ್ಕಾರಿ ಕಚೇರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ನನ್ನ ಅಧಿಕೃತ ಕಚೇರಿ ಬಂದ್ ಆಗಿದೆ. ಇದರಿಂದ ನನ್ನನ್ನು ಭೇಟಿ ಮಾಡಲು ಬರುವವರಿಗೆ ತೊಂದರೆ ಆಗುತ್ತಿತ್ತು. ಕಚೇರಿ ಸ್ಥಳಾಂತರಕ್ಕೆ ಬಹಳ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಚುನಾವಣೆಗೆ ಸ್ಪರ್ಧಿಸುವ ತಮ್ಮ ನಿಲುವು ಸರಿಯಿದೆ. ಶಿವಮೊಗ್ಗದಲ್ಲಿ ಶಾಂತಿ ಮಾತ್ರವಲ್ಲ. ನೆಮ್ಮದಿಯ ಅಗತ್ಯವಿದೆ ಎಂದು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications