ನಾನು ಬೇಕಾದ್ರೆ ಸಚಿವ ಸ್ಥಾನ ಬಿಟ್ಟು ಕೊಡ್ತೀನಿ; ನನಗೇನು ಅಭ್ಯಂತರ ಇಲ್ಲ: ಕೆ.ಹೆಚ್ ಮುನಿಯಪ್ಪ ಹೀಗೆ ಹೇಳಿದ್ಯಾಕೆ?
ಬೆಂಗಳೂರು, ಆಗಸ್ಟ್ 16: ಸರ್ಕಾರ ರಚನೆಯಾಗಿ ಮೂರು ತಿಂಗಳು ಮಾತ್ರ ಕಳೆದಿದ್ದು, ಇದೀಗ ಎರಡುವರೆ ವರ್ಷದ ಬಳಿಕ ಹಿರಿಯರು ಮಂತ್ರಿ ಸ್ಥಾನವನ್ನ ಬಿಡಬೇಕು ಎಂದು ಸಚಿವ ಕೆ ಹೆಚ್ ಮುನಿಯಪ್ಪ ಪುನರುಚ್ಚರಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ಪಕ್ಷ ಬಲಪಡಿಸಬೇಕಾದ್ರೆ ಎಲ್ಲರಿಗೂ ಅವಕಾಶ ಕೊಡಬೇಕು. ನಾನು ಬೇಕಾದ್ರೆ ಸಚಿವ ಸ್ಥಾನ ಬಿಟ್ಟು ಕೊಡ್ತೀನಿ. ನನಗೇನು ಅಭ್ಯಂತರ ಇಲ್ಲ, ಇದು ನಮ್ಮ ಮನೆಯಲ್ಲಿ ವಿಚಾರ ನಾವು ಮಾತಾಡಿದ್ದೇವೆ. ಇದು ನನ್ನ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ.

4-5 ಬಾರಿ ಶಾಸಕರಾಗಿರುವವರಿಗೂ ಇನ್ನು ಸಚಿವ ಸ್ಥಾನ ಸಿಕ್ಕಿಲ್ಲ. ಅಂತಹವರಿಗೂ ಅವಕಾಶ ಕೊಡಬೇಕು, ನಾನು ಕೇಂದ್ರದಲ್ಲಿ ಎರಡು ಬಾರಿ ಮಂತ್ರಿ ಆಗಿದ್ದೆ. ಹೀಗಾಗಿ ಮೊನ್ನೆ ಸಭೆಯಲ್ಲಿ ನನ್ನ ಅಭಿಪ್ರಾಯ ಹೇಳಿದ್ದೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಮುಂದಿನ ತೀರ್ಮಾನ ಹೈಕಮಾಂಡ್ ಮಾಡುತ್ತದೆ. ಮುಖ್ಯಮಂತ್ರಿ ಹಾಗೂ ಡಿಸಿಎಂ ವಿಚಾರವನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಸಚಿವರು ಸ್ಥಾನ ಬಿಡಬೇಕು ಅನ್ನೋದು ನನ್ನ ಅಭಿಪ್ರಾಯ ಎಂದು ಹೇಳಿದರು.
ಲೋಕಸಭಾ ಚುನಾವಣೆ ಕುರಿತು ಮಾತನಾಡಿ, ಯುವಕರಿಗೆ ಆದ್ಯತೆ ಕೊಡಬೇಕು. ಯುವಕರು ರಾಜಕೀಯದಲ್ಲಿ ಬೆಳೆಯಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ನೋಡಬೇಕು ಎಂದು ಹೇಳಿದರು.
ಉಪೇಂದ್ರ ಹಾಗೂ ಎಸ್.ಎಸ್ ಮಲ್ಲಿಕಾರ್ಜುನ್ ದಲಿತ ನಿಂದನೆ ಪದ ಪ್ರಯೋಗ ವಿಚಾರವಾಗಿ ಮಾತನಾಡಿ, ವ್ಯಕ್ತಿಗತವಾಗಿ ಏನು ಮಾತಾಡಿದ್ರೋ ಗೊತ್ತಿಲ್ಲ. ದಲಿತರ ಜೊತೆಯಲ್ಲೇ ಇದ್ದು, ಅವರನ್ನ ರಾಜಕೀಯವಾಗಿ ಬೆಳೆಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಜೊತೆಯಲ್ಲೇ ಇಟ್ಟುಕೊಂಡು ಬೆಳೆಸಿದ್ದಾರೆ. ಆದರೆ, ಮಲ್ಲಿಕಾರ್ಜುನ್ ಯಾವ ವಿಚಾರದಲ್ಲಿ ಹೇಗೆ ಪದ ಬಳಕೆ ಮಾಡಿದ್ದಾರೆ ನನಗೆ ಗೊತ್ತಿಲ್ಲ.ಆದರೆ, ಅವರು ದಲಿತರ ಜೊತೆ ಊಟ ಮಾಡಿ, ಜೊತೆಯಲ್ಲೇ ಇದ್ದುಕೊಂಡೇ ಬೆಳೆಸಿದ್ದಾರೆ ಎಂದು ಹೇಳಿದರು.
ಅನ್ನ ಭಾಗ್ಯ ವಿಚಾರವಾಗಿ ಆಂಧ್ರಕ್ಕೆ ಹೋಗಿ ಬಂದಿದ್ದೇನೆ. ಒಂದು ವಾರದಲ್ಲಿ ವಿಚಾರ ಮಾಡಿ ಹೇಳುವುದಾಗಿ ಹೇಳಿದ್ದಾರೆ, ತೆಲಂಗಾಣದಲ್ಲೂ ಭೇಟಿಯಾಗಿ ಬಂದಿದ್ದೇನೆ. ಪ್ರತಿ ತಿಂಗಳು ಎರಡುವರೆ ಟನ್ ಬೇಕಿದೆ. ಆಂಧ್ರದಲ್ಲಿ ಮತ್ತು ತೆಲಂಗಾಣದಲ್ಲಿ ಲಭ್ಯತೆ ಇದೆ. FCI ರೇಟ್ 34ರೂ ಸಬ್ಸಿಡಿ ಅಡಿ ಕೊಡ್ತಿದೆ. ಇದೆಲ್ಲಾ ಸೇರಿ 40 ರೂ ವರೆಗೂ ಬರಲಿದೆ, ಉಳಿದಿದ್ದು ಸಬ್ಸಿಡಿ ಅಡಿ ಬರಲಿದೆ.
ನಮಗೆ ಅವರು ಕೊಡುತ್ತಿರುವುದು 40 ರೂ.ನಮಗೆ ಕೇಂದ್ರ ಸರ್ಕಾರ ಕೊಡುತ್ತಿರುವುದು 34ರೂ, ಅವರು ಸಬ್ಸಿಡಿ ಕೊಟ್ಟಂಗೆ ಆಗ್ತಿತ್ತು. ಅಂತಿಮವಾಗಿ ಎಷ್ಟು ಹಣಕ್ಕೆ ಗೋಡೌನ್ ಡೆಲಿವರಿ ಕೊಡ್ತೀರಿ ಅಂತ ಕೇಳಿದ್ದೇವೆ. ಅವರು ಇನ್ನೂ ಅಂತಿಮ ದರ ಹೇಳಿಲ್ಲ. ಆದರೆ, ಆಂಧ್ರ, ತೆಲಂಗಾಣ ಸಬ್ಸಿಡಿ ಇಲ್ಲದೆ 39/40 ರೂ ಹಣಕ್ಕೆ ಕೊಡುವ ಸಾಧ್ಯತೆ ಇದೆ ಎಂದು ಹೇಳಿದರು.
ನಮ್ಮ ರಾಜ್ಯದಲ್ಲಿ 5 ಲಕ್ಷ ಜನ ರೇಷನ್ ಕಾರ್ಡ್ ಇದೆ. ಹೊಸ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಹಾಕಿದ್ರೆ ಪ್ರಿಯಾರಿಟಿ ಮೇಲೆ ಕೊಡಲಾಗುವುದು. ಆರೋಗ್ಯ, ವೈದ್ಯಕೀಯ ವೆಚ್ಚ ಬರಿಸುವ ವಿಚಾರವಾಗಿ ಹೆಚ್ಚು ಅರ್ಜಿ ಬರ್ತಿದೆ ಎಂದು ಹೇಳಿದ ಅವರು, ಪಡಿತರ ತಿದ್ದುಪಡಿ ವಿಚಾರವಾಗಿ ಮಾತನಾಡಿ, ಹೊಸದಾಗಿ ಪಡಿತರಕ್ಕಾಗಿ 3ಲಕ್ಷ ಕಾರ್ಡ್ ಅರ್ಜಿ ಬಂದಿದೆ. ಅದನ್ನ ಪರಿಶೀಲನೆ ಮಾಡಲಾಗ್ತಿದೆ, ಮನೆ ಯಜಮಾನಿ ಬದಲಾವಣೆ ಮಾಡಲು ಅಥವಾ ತಿದ್ದುಪಡಿ ಮಾಡಲು ಇಂದಿನಿಂದ ಅವಕಾಶ ನೀಡಲಾಗಿದೆ ಎಂದು ಹೇಳಿದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications