#ಮಿಟೂ: ಶೃತಿ ಹರಿಹರನ್ ಮೇಲೆ ಮೊಕದ್ದಮೆ ಹೂಡುತ್ತೇನೆಂದ ಅರ್ಜುನ್ ಸರ್ಜಾ
ಬೆಂಗಳೂರು, ಅಕ್ಟೋಬರ್ 20: ತಮ್ಮ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶೃತಿ ಹರಿಹರನ್ ಮೇಲೆ ಮಾನನಷ್ಟೆ ಮೊಕದ್ದಮೆ ಹೂಡುವುದಾಗಿ ನಟ ಅರ್ಜುನ್ ಸರ್ಜಾ ಹೇಳಿದ್ದಾರೆ.
'ವಿಸ್ಮಯ' ಕನ್ನಡ ಚಿತ್ರದ ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾ ಅವರು ನನ್ನ ಒಪ್ಪಿಗೆ ಇಲ್ಲದೆ ಅಸಭ್ಯವಾಗಿ ನನ್ನನ್ನು ತಬ್ಬಿಕೊಂಡಿದ್ದರು ಹಾಗೂ ಶೂಟಿಂಗ್ ಮುಗಿದ ನಂತರ ಖಾಸಗಿಯಾಗಿ ಭೇಟಿಯಾಗಲು ಕೇಳಿದ್ದರು ಎಂದು ನಟಿ ಶೃತಿ ಹರಿಹರನ್ ಅವರು ಆರೋಪ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಅರ್ಜುನ್ ಸರ್ಜಾ, ಶೃತಿ ಹರಿಹರನ್ ಅವರ ಆರೋಪಗಳೆಲ್ಲವೂ ಸುಳ್ಳು ಎಂದಿದ್ದಾರೆ. ಶೃತಿ ಅವರ ಆರೋಪಗಳನ್ನು ಕೇಳಿ ಆಘಾತವಾಗಿದೆ ಎಂದಿರುವ ಅವರು, ಇಷ್ಟು ವರ್ಷದ ಚಿತ್ರಜೀವನದಲ್ಲಿ ಈ ರೀತಿಯ ಕ್ಷಣ ನಾನು ಅನುಭವಿಸಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಶೃತಿ ಅವರು ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದಿರುವ ಅರ್ಜುನ್ ಸರ್ಜಾ. ಶೃತಿ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಂಡೇ ತೀರುವುದಾಗಿ ಹೇಳಿದ್ದಾರೆ.
ಶೃತಿ ಹೇಳಿದ ರೀತಿ ಯಾವುದೇ ಘಟನೆ ನಡೆದಿಲ್ಲ, 'ವಿಸ್ಮಯ' ಚಿತ್ರದಲ್ಲಿ ಗಂಡ-ಹೆಂಡತಿಯಾಗಿ ನಾವು ನಟಿಸಿದ್ದೆವು ಅದರಲ್ಲಿ ಬಹಳ ಉತ್ಕತೆಯ ದೃಶ್ಯಗಳಿದ್ದವು ಆದರೆ ನಾನೇ ಅದಕ್ಕೆ ಬೇಡ ಎಂದು ಹೇಳಿದೆ ಹಾಗಾಗಿ ನಿರ್ದೇಶಕರು ಅಂತಹಾ ದೃಶ್ಯಗಳನ್ನು ಚಿತ್ರೀಕರಿಸಲಿಲ್ಲ ಎಂದು ಅವರು ಹೇಳಿದ್ದಾರೆ.
#ಮಿಟೂ ಅಭಿಯಾನ ಉತ್ತಮವಾಗಿ ನಡೆಯುತ್ತಿದ್ದು, ಶೋಷಿತ ಮಹಿಳೆಯರಿಗೆ ಇದರಿಂದ ನ್ಯಾಯ ಸಿಗಬೇಕು ಆದರೆ ಈ ರೀತಿಯ ಸುಳ್ಳು ಆರೋಪಗಳಿಂದ ಅಭಿಯಾನ ಅರ್ಥ ಕಳೆದುಕೊಳ್ಳುತ್ತದೆ ಎಂದು ಅವರು ಹೇಳಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications