ಜ್ಯೋತಿಷ್ಯ ನಂಬೋಲ್ಲ : ಎಚ್ಡಿಕೆ, ಭವಿಷ್ಯದಲ್ಲಿ ಇರುವುದೇನು?
ಬೆಂಗಳೂರು, ಜನವರಿ 03 : 'ಜ್ಯೋತಿಷ್ಯ, ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಜನರ ಮೇಲೆ ವಿಶ್ವಾಸವಿದೆ. 113 ಸ್ಥಾನ ಗೆಲ್ಲಲೇಬೇಕು ಎಂಬುದು ನನ್ನ ಗುರಿ' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಶ್ರೀ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್, ಬೆಂಗಳೂರು ನಗರ ಜೆಡಿಎಸ್ ಘಟಕದ ವತಿಯಿಂದ ಬುಧವಾರ 'ಬೆಂಗಳೂರು ನಗರದ ಹಿರಿಯ ನಾಗರಿಕರೊಂದಿಗೆ ಸಂವಾದ' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, 'ಸಮ್ಮಿಶ್ರ ಸರ್ಕಾರ ನನ್ನ ಕನಸಲ್ಲ. ಕಡಿಮೆ ಕ್ಷೇತ್ರಗಳಲ್ಲಿ ಗೆದ್ದರೆ ಕಾಂಗ್ರೆಸ್ ಅಥವ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಬೇಕು. ಆಗ ನಾನು ನೀಡಿದ ಭರವಸೆ ಈಡೇರಿಸಲು ಸಾಧ್ಯವಿಲ್ಲ' ಎಂದರು.
'113 ಸೀಟು ಗೆಲ್ಲಲೇಬೇಕು ಎಂಬ ಗುರಿ ಹೊಂದಿದ್ದೇನೆ. ಕೆಲವು ಮಾಧ್ಯಮದ ಸಮೀಕ್ಷೆಗಳು 40 ರಿಂದ 45 ಸೀಟು ನಮಗೆ ಬರುತ್ತದೆ ಎಂದು ಹೇಳಿವೆ. ಜ್ಯೋತಿಷಿಗಳು ಹಲವು ಲೆಕ್ಕಾಚಾರ ಹೇಳಿದ್ದಾರೆ. ನಾನು ಸಮೀಕ್ಷೆ, ಜ್ಯೋತಿಷ್ಯ ನಂಬುವುದಿಲ್ಲ' ಎಂದು ಹೇಳಿದರು.
'ನಾನು ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕ. ನಾನು ಹೆಚ್ಚು ಕಷ್ಟ ಪಡದೇ ಇದ್ದರೂ 40 ರಿಂದ 50 ಸ್ಥಾನಗಳಲ್ಲಿ ಜಯಗಳಿಸುತ್ತೇವೆ. ಅದು ನನಗೆ ಬೇಡ. 113 ಸ್ಥಾನ ಗೆದ್ದು ಜನರ ಜೊತೆ ಹೋಗುವ ಸರ್ಕಾರ ರಚನೆ ಮಾಡುವುದು ನನ್ನ ಕನಸು' ಎಂದರು ತಿಳಿಸಿದರು. ಯಾವ ಜ್ಯೋತಿಷಿ ಏನು ಹೇಳಿದ್ದರು?..

ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವರು
ಪ್ರಕಾಶ್ ಅಮ್ಮಣ್ಣಾಯ ಎಂಬ ಜ್ಯೋತಿಷಿಗಳು, 'ಕರ್ನಾಟಕದಲ್ಲಿ ಚುನಾವಣೆ ನಡೆದರೆ ಅತಂತ್ರ ಸರ್ಕಾರ ರಚನೆಯಾಗುತ್ತದೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೊಂಡು ಕುಮಾರಸ್ವಾಮಿ ಮುಖ್ಯಮಂತ್ರಿ, ದಿನೇಶ್ ಗುಂಡೂರಾವ್ ಉಪ ಮುಖ್ಯಮಂತ್ರಿಯಾಗುತ್ತಾರೆ' ಎಂದು ಭವಿಷ್ಯ ಹೇಳಿದ್ದಾರೆ.

ಕೋಡಿಮಠದ ಶ್ರೀಗಳ ಭವಿಷ್ಯ
ಕೋಡಿಮಠ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಹೇಳಿರುವ ಭವಿಷ್ಯದಂತೆ, 'ಪ್ರಮುಖ ಪಕ್ಷದ ರಾಜಕೀಯ ನಾಯಕ ಸಿಎಂ ಆಗುವುದಿಲ್ಲ, ಅನಿರೀಕ್ಷಿತ ವ್ಯಕ್ತಿ ರಾಜ್ಯದ ಅರಸನಾಗಲಿದ್ದಾನೆ'. ಪ್ರಮುಖ ಪಕ್ಷದ ರಾಜಕೀಯ ನಾಯಕ ಅಂದರೆ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಎಂದು ಅರ್ಥೈಸಿಕೊಂಡರೆ, ಅನಿರೀಕ್ಷಿತ ವ್ಯಕ್ತಿ ಸಿಎಂ ಆಗುತ್ತಾರೆಂದರೆ ಅದು ಎಚ್ ಡಿ ಕುಮಾರಸ್ವಾಮಿ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಸಮೀಕ್ಷೆ ಹೇಳುವುದೇನು?
ಪಬ್ಲಿಕ್ ಟಿವಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ 90-100, ಬಿಜೆಪಿ 85-95, ಜೆಡಿಎಸ್ 40-45 ಸ್ಥಾನಗಳಿಸಲಿದೆ ಎಂದು ಸಮೀಕ್ಷೆಯ ವರದಿ ಹೇಳಿದೆ.

‘ಹೊಸ ತೆನೆಗೆ ದಾರಿಯಾಗುವುದು'
ಕೈ ಮುಷ್ಟಿಕಟ್ಟಿ, ಕಮಲ ಮುದುಡುವುದು, ಹೊಸ ತೆನೆಗೆ ದಾರಿಯಾಗುವುದು ಎಂದು ಒಗಟಿನ ರೂಪದಲ್ಲಿ ನಾಗಸಾಧು ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಎಂದು ದೂರವಾಣಿ ಮೂಲಕ ಭವಿಷ್ಯ ನುಡಿದಿದ್ದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications