ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ: ಬಿಎಸ್ ಯಡಿಯೂರಪ್ಪ

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಈಗ 80 ವರ್ಷ ವಯಸ್ಸಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಬಿಎಸ್‌ವೈ ತಿಳಿಸಿದ್ದಾರೆ.

ಬೆಳಗಾವಿ, ಜನವರಿ 30: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಸ್ಪಷ್ಟಪಡಿಸಿದ್ದಾರೆ.

"ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಈಗ 80 ವರ್ಷ ವಯಸ್ಸಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಪಕ್ಷವನ್ನು ಬಲಪಡಿಸಲು ನಾನು ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಬಿಜೆಪಿಯ ಹಿರಿಯ ನಾಯಕ ಬೆಳಗಾವಿ ಸುದ್ದಿಗಾರರಿಗೆ ತಿಳಿಸಿದರು ಎಂದು ಡಿಎಚ್‌ ವರದಿ ಮಾಡಿದೆ.

"ನನ್ನ ಮಕ್ಕಳಾದ ರಾಘವೇಂದ್ರ ಮತ್ತು ವಿಜಯೇಂದ್ರ ಇಬ್ಬರೂ ಪಕ್ಷವನ್ನು ಬಲಪಡಿಸಲು ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ನಾನು ರಾಜಕೀಯದಿಂದ ನಿವೃತ್ತಿ ಹೊಂದಿಲ್ಲ. ದೇವರು ನನಗೆ ಶಕ್ತಿ ನೀಡಿದರೆ, ಮುಂದಿನ ಚುನಾವಣೆಯವರೆಗೆ ಪಕ್ಷಕ್ಕಾಗಿ ದುಡಿಯುತ್ತೇನೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಯಡಿಯೂರಪ್ಪ ಹೇಳಿದ್ದಾರೆ.

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ನನ್ನನ್ನು ಆಹ್ವಾನಿಸಿದ್ದರು ಮತ್ತು ಪಕ್ಷವು ನನಗೆ ಕರ್ನಾಟಕದಲ್ಲಿ ಸ್ಥಾನಮಾನ, ಅಧಿಕಾರ ಮತ್ತು ಗೌರವವನ್ನು ನೀಡಿದೆ. ಪಕ್ಷಕ್ಕೆ ಮರಳಿ ಕೊಡುವುದು ನನ್ನ ಜವಾಬ್ದಾರಿ ಹಾಗಾಗಿ ಚುನಾವಣೆಗೂ ಮುನ್ನ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ನಾವು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆ. ಎರಡು ಸುತ್ತಿನ ಸಮೀಕ್ಷೆಯ ನಂತರ ಟಿಕೆಟ್ ನೀಡಲಾಗುವುದು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಯಡಿಯೂರಪ್ಪ ಹೇಳಿದರು.

ನಾವು 140 ಸ್ಥಾನಗಳನ್ನು ಗೆಲ್ಲುತ್ತೇವೆ

ನಾವು 140 ಸ್ಥಾನಗಳನ್ನು ಗೆಲ್ಲುತ್ತೇವೆ

ಕರ್ನಾಟಕದಲ್ಲಿ ಮುಂದಿನ ಮೂರು ತಿಂಗಳಲ್ಲಿ ಚುನಾವಣೆ ಎದುರಿಸಲಿದ್ದೇವೆ. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾರ್ಗದರ್ಶನ ನೀಡಿದ್ದು, ಮುಂಬರುವ ಚುನಾವಣೆಯಲ್ಲಿ ನಾವು 140 ಸ್ಥಾನಗಳನ್ನು ಗೆಲ್ಲುತ್ತೇವೆ. ಹಲವು ಮಂದಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ ಹಗಲುಗನಸು ಕಾಣುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಎಸ್‌ವೈ ಹೇಳಿದರು.

ಸಂಪೂರ್ಣ ಬಹುಮತ ಗಳಿಸುವಂತೆ ನೋಡಿಕೊಳ್ಳಿ

ಸಂಪೂರ್ಣ ಬಹುಮತ ಗಳಿಸುವಂತೆ ನೋಡಿಕೊಳ್ಳಿ

ಇತ್ತೀಚೆಗೆ ಕರ್ನಾಟಕಕ್ಕೆ ಬಂದಿದ್ದ ಗೃಹ ಸಚಿವ ಅಮಿತ್‌ ಶಾ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬೆಳಗಾವಿಯ ಜಿಲ್ಲೆಯ ಬಿಜೆಪಿ ನಾಯಕರೊಂದಿಗೆ ಗುಪ್ತ ಸಭೆ ನಡೆಸಿ ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆ ಮತ್ತು ಪಕ್ಷದ ಸ್ಥಿತಿಗತಿಗಳನ್ನು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ನಾಯಕರಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಸಂಪೂರ್ಣ ಬಹುಮತ ಗಳಿಸುವಂತೆ ನೋಡಿಕೊಳ್ಳಿ ಎಂದು ಕೇಳಿಕೊಂಡರು ಎನ್ನಲಾಗಿದೆ.

18 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಗುರಿ

18 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಗುರಿ

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಎಲ್ಲ ಕಾರ್ಯಕ್ರಮಗಳಿಗೆ ನೀಡಿದ ಪ್ರತಿಕ್ರಿಯೆಯಿಂದ ಶಾ ಅವರು ತೃಪ್ತರಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆಯಲು ಎಲ್ಲಾ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಶಾ ಕೇಳಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಎಲ್ಲಾ 18 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದರು.

ಮೋದಿ ಮತ್ತು ಶಾ ಅವರ ಪ್ರಬಲ ನಾಯಕತ್ವ

ಮೋದಿ ಮತ್ತು ಶಾ ಅವರ ಪ್ರಬಲ ನಾಯಕತ್ವ

ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಅಧಿಕಾರಕ್ಕೆ ಬರುವ ಕಾಂಗ್ರೆಸ್ ನಾಯಕರ ಕನಸು ನನಸಾಗುವುದಿಲ್ಲ. ಬಿಜೆಪಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಅವರ ರೂಪದಲ್ಲಿ ಪ್ರಬಲ ನಾಯಕತ್ವವಿದೆ ಆದರೆ ಕಾಂಗ್ರೆಸ್‌ಗೆ ನಾಯಕತ್ವವಿಲ್ಲ. ರಾಜ್ಯ ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯವಿದೆ ಎಂಬುದನ್ನು ಯಡಿಯೂರಪ್ಪ ಅಲ್ಲಗಳೆದರು. ಚುನಾವಣೆಯಲ್ಲಿ ಗೆಲುವು ಸಾಧಿಸಲು ಮತ್ತು ಪಕ್ಷವನ್ನು ಬಲಪಡಿಸಲು ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+