ರಾಜಕಾರಣಕ್ಕೆ ಬರುವ ಬಗ್ಗೆ ಶಿವಣ್ಣ ಹೇಳಿದ್ದೇನು?
ರಾಮನಗರ, ಅಕ್ಟೋಬರ್ 11 : 'ರಾಜಕಾರಣಕ್ಕೆ ಬರುವ ಬಗ್ಗೆ ಚಿಂತನೆ ನಡೆಸಿಲ್ಲ' ಎಂದು ನಟ ಶಿವರಾಜ್ ಕುಮಾರ್ ಹೇಳಿದರು. ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಅವರು ಶ್ಲಾಘಿಸಿದರು.
ಬುಧವಾರ ಕನಕಪುರ ರೂರಲ್ ಕಾಲೇಜಿನಲ್ಲಿ ಅಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಿವರಾಜ್ ಕುಮಾರ್ ಉದ್ಘಾಟಿಸಿದರು. 'ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ಶ್ರೀನಿವಾಸ್, ಮಳಗಾಳು ಕಾಂತರಾಜು ಸೇರಿದಂತೆ ಕನಕಪುರದಲ್ಲಿ ಅನೇಕ ಸ್ನೇಹಿತರಿದ್ದಾರೆ' ಎಂದರು.

ದಿ ವಿಲನ್ ಚಿತ್ರದ ಬಗ್ಗೆ ಮಾತನಾಡಿದ ಶಿವಣ್ಣ, 'ತಮ್ಮದೇ ಪಾತ್ರದ ಶೇ 50ರಷ್ಟು ಚಿತ್ರೀಕರಣ ಬಾಕಿ ಇದ್ದು, ಆದಷ್ಟು ಶೀಘ್ರವಾಗಿ ಚಿತ್ರೀಕರಣ ಪೂರ್ಣಗೊಳಿಸುವುದಾಗಿ' ಹೇಳಿದರು. 'ಈ ಹಿಂದೆ 1992 ರಲ್ಲಿ ಕಾರ್ಯಕ್ರಮ ನಿಮಿತ್ತ ಕನಕಪುರಕ್ಕೆ ಬಂದಿದ್ದೆ. ಆಗಾಗ ಇಲ್ಲಿಗೆ ಭೇಟಿ ನೀಡುತ್ತಿರುತ್ತಿದ್ದೇನೆ' ಎಂದು ತಿಳಿಸಿದರು.
ಕಾಲೇಜಿನ ಕಾರ್ಯಕ್ರದಲ್ಲಿ ಮುತ್ತಣ್ಣ ಪೀಪಿ ಊದುವ, ಮುತ್ತಣ್ಣ ಡೋಲು ಬಡಿಯುವ ಹಾಡು ಹಾಡುವುದರ ಜೊತೆ ಸಿಂಪಲ್ ಸ್ಟೆಪ್ ಹಾಕಿದರು. ರಾಜ ಶಿವರಾಜ ಯುವರಾಜ ಹಾಡಿಗೆ ಸಕತ್ ಸ್ಟೆಪ್ ಹಾಕಿದ ಶಿವರಾಜ್ ಕುಮಾರ್ ಅವರು ಕಾಲೇಜಿನ ವಿದ್ಯಾರ್ಥಿಗಳನ್ನು ರಂಜಿಸಿದರು.
ಕನಕಪುರ ಕ್ಷೇತ್ರದ ಶಾಸಕ, ಇಂಧನ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ಅವರು ಕನಕಪುರದಲ್ಲಿ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಶಿವರಾಜ್ ಕುಮಾರ್ ಶ್ಲಾಘಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications