ಕಾಂಗ್ರೆಸ್ ಸೇರುವ ಕುರಿತು ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದೇನು?
ಮಂಡ್ಯ, ಮಾರ್ಚ್ 07 : 'ನಾನು ಕಾಂಗ್ರೆಸ್ ಬೆಂಬಲಿಸುವ ಗಾಳಿ ಸುದ್ದಿ ಹಬ್ಬಿದೆ. ಇದು ಸತ್ಯಕ್ಕೆ ದೂರವಾದ ಮಾತು. ನಮ್ಮನ್ನು ಯಾವ ಪಕ್ಷದವರೂ ಸಂಪರ್ಕಿಸಿಲ್ಲ' ಎಂದು ದರ್ಶನ್ ಪುಟ್ಟಣ್ಣಯ್ಯ ಸ್ಪಷ್ಟಪಡಿಸಿದರು.
ಮೇಲುಕೋಟೆ ಶಾಸಕರಾಗಿದ್ದ ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. 'ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಸ್ವರಾಜ್ ಇಂಡಿಯ ಪಕ್ಷದಿಂದಲೇ ಸ್ಪರ್ಧಿಸಲಿದ್ದೇನೆ' ಎಂದು ಹೇಳಿದರು.
'ನಾನು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಸುದ್ದಿಗಳು ಹಬ್ಬಿವೆ. ಇದು ಸತ್ಯಕ್ಕೆ ದೂರವಾದ ಸುದ್ದಿಯಾಗಿದೆ. ಯಾವ ಪಕ್ಷದವರೂ ನಮ್ಮನ್ನು ಸಂಪರ್ಕಿಸಿಲ್ಲ. ನಾವು ಯಾರಿಗೂ ಬೆಂಬಲ ನೀಡುವುದಿಲ್ಲ' ಎಂದು ಸ್ಪಷ್ಟಪಡಿಸಿದರು.
2013ರ ಚುನಾವಣೆಯಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಅವರು ಸರ್ವೋದಯ ಕರ್ನಾಟಕ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. 2018ರ ಫೆಬ್ರವರಿ 18ರಂದು ಅವರು ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.
ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರು ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಹಬ್ಬಿದೆ. ಕೆಲವು ಕಾಂಗ್ರೆಸ್ ನಾಯಕರು ಅವರನ್ನು ಭೇಟಿಯಾಗಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಅವರು ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು...

ಸ್ಪಷ್ಟನೆ ನೀಡಿದ್ದು ಏಕೆ?
ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದಾರೆ. ಮಾರ್ಚ್ ಅಂತ್ಯದ ವೇಳೆಗೆ ಅವರು ಪಕ್ಷ ಸೇರಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದ್ದರಿಂದ, ದರ್ಶನ್ ಪುಟ್ಟಣ್ಣಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

2013ರ ಚುನಾವಣೆಯಲ್ಲಿ ಗೆಲುವು
ಕೆ.ಎಸ್.ಪುಟ್ಟಣ್ಣಯ್ಯ ಅವರು 2013ರ ಚುನಾವಣೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 80,041 ಮತಗಳನ್ನು ಪಡೆದು ಜಯಗಳಿಸಿದ್ದರು.

ಸ್ವರಾಜ್ ಇಂಡಿಯಾದಿಂದ ಸ್ಪರ್ಧೆ
ಈ ಬಾರಿಯ ಚುನಾವಣೆಯಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಅವರು ಸ್ವರಾಜ್ ಇಂಡಿಯಾ ಪಕ್ಷದಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ, 2018ರ ಫೆಬ್ರವರಿ 18ರಂದು ಅವರು ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಅಂತಿಮ
ಮೇಲುಕೋಟೆ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ತಂತ್ರ ರೂಪಿಸುತ್ತಿದದ್ದವು. ಜೆಡಿಎಸ್ ಮಂಡ್ಯ ಸಂಸದ ಸಿ.ಎಸ್.ಪುಟ್ಟರಾಜು ಅವರನ್ನು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

ಕಾಂಗ್ರೆಸ್ ಟಿಕೆಟ್ ಯಾರಿಗೆ?
ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗೆ ಭಾರೀ ಪೈಪೋಟಿ ನಡೆಯುತ್ತಿದೆ. ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ ಆಪ್ತರಾದ ರೇವಣ್ಣ, ಅಂಬರೀಶ್ ಬೆಂಬಲಿಗರಾದ ಎಲ್.ಡಿ.ರವಿ, ಎಲ್.ಸಿ.ಮಂಜುನಾಥ ಅವರು ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications