KS Eshwarappa: ಸತ್ತರೂ ಕೂಡ ಬಿಜೆಪಿ ಧ್ವಜ ಹಾಕೊಂಡೆ ಸಾಯ್ತಿನಿ: ಈಶ್ವರಪ್ಪ ಬಿಜೆಪಿಗೆ...
ಬಾಗಲಕೋಟೆ, ಸೆಪ್ಟೆಂಬರ್ 21: ಸತ್ತರೂ ಕೂಡ ಬಿಜೆಪಿ ಧ್ವಜ ಹಾಕೊಂಡೆ ಸಾಯ್ತಿನಿ ವಿನಃ ಬಿಜೆಪಿಯಿಂದ ಹೊರಗಿರೋನಲ್ಲ. ಸಾಯೋ ತನಕ ರಾಜಕಾರಣ ಮಾಡಿಕೊಂಡೆ ಇರುತ್ತೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಹೇಳಿದರು.
ಈ ಕುರಿತು ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ರಾಜಕಾರಣ ಮಾಡಿಕೊಂಡೆ ಸಮಾಜ ಸೇವೆ ಮಾಡುತ್ತೇನೆ. ಸಾಯೋ ತನಕ ರಾಜಕಾರಣ ಮಾಡಿಕೊಂಡೆ ಇರ್ತೇನೆ. ರಾಜಕಾರಣ ಸಮಾಜದ ಒಂದು ಅಂಗ ಮಾಡುತ್ತಿರುತ್ತೇನೆ. ಸತ್ತರೂ ಕೂಡ ಬಿಜೆಪಿ ಧ್ವಜ ಹಾಕೊಂಡೆ ಸಾಯ್ತಿನಿ ವಿನಃ ಬಿಜೆಪಿಯಿಂದ ಹೊರಗಿರೋನಲ್ಲ ಎಂದು ಹೇಳಿದರು.

ಬಿಜೆಪಿಯಲ್ಲಿ ಶುದ್ಧೀಕರಣ ಅಗಬೇಕು ಅನ್ನೋದು ನನ್ನೊಬ್ಬನ ಆಸೆ ಅಲ್ಲ. ನಾನು ಆರಂಭದಿಂದಲೂ ಶುರು ಮಾಡಿದ್ದೇನೆ. ನಂತರ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಅರವಿಂದ್ ಲಿಂಬಾವಳಿ ಶುರು ಮಾಡಿದ್ದಾರೆ. ಇವರೆಲ್ಲರು ಸೇರಿ ದೊಡ್ಡ ಸಭೆ ಕರಿಬೇಕು ಅಂತಿದ್ರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೂಡ ಅಸಮಾಧಾನ ಅತೃಪ್ತಿ ಇದೆ. ಅದು ಶುದ್ಧಿಕರಣ ಆಗಬೇಕು ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಹೇಳಿದರು.
ಸಭೆಯಲ್ಲಿ 40 ಜನ ಸೇರಿದ್ರೂ ಅದ್ರಲ್ಲಿ 37 ಜನ ನಮ್ಮ ರಾಜ್ಯಾಧ್ಯಕ್ಷ ಸರಿ ಇಲ್ಲ ಅಂತಾ ಹೇಳಿದ್ರಂತೆ. ಹಿಂಗಿದ್ದಾಗ ಹೇಳಿ,ಶುದ್ದಿಕರಣ ಆಗಬೇಕೋ ಬೇಡ್ವೊ ? ನಾನು ಚುನಾವಣೆಯಲ್ಲಿ ಸೋತೆ. ಅದು ಯಡಿಯೂರಪ್ಪ ಅವರ ಮಗನ ವಿರುದ್ಧ ಅಲ್ಲ,ಮೋದಿಗೆ ಸೋತೆ. ಶಿವಮೊಗ್ಗದ ಜನ ಮೋದಿಗೆ ವೋಟ್ ಕೊಟ್ಟಿದ್ದಾರೆ, ರಾಘವೇಂದ್ರನಿಗಲ್ಲ, ಯಡಿಯೂರಪ್ಪ ಕುಟುಂಬ ಮೋದಿನಾ ಬಿಟ್ಟು ಹೊರಬಂದು ಗೆಲ್ಲಲಿ ನೋಡೋಣ ಎಂದು ಕೆ ಎಸ್ ಈಶ್ವರಪ್ಪ ಅವರು ಸವಾಲ್ ಹಾಕಿದರು.
ನಾನು ರಾಜಕಾರಣ ಮಾಡವ್ನೆ, ರಾಜಕಾರಣ ಬಿಡಲ್ಲ. ನಂಗೆ ಅಖಿಲೇಶ್ ಯಾದವ್ ಕಾಲ್ ಮಾಡಿದ್ರು,ಕಾಲ್ ಮಾಡಬೇಡಿ ಅಂತಾ ಹೇಳಿದೆ. ಕಾಂಗ್ರೆಸ್ ನಾಯಕರು ನಂಗೆ ಪೋನ್ ಮಾಡಿದ್ರು. ನನ್ನ ಕುತ್ತಿಗೆ ಕೊಯ್ದ್ರು ಕೂಡಾ ಬಿಜೆಪಿ ಬಿಟ್ಟು ಹೊರಗಡೆ ಹೋಗಲ್ಲ. ಇದೀಗ ನಾನು ಮೊದಲನೆ ಹೆಜ್ಜೆ ಇಟ್ಟಿರುವೆ,ಇದು ಯಶಸ್ವಿ ಆಗುತ್ತೆ ಅಂದುಕೊಂಡಿದ್ದೇನೆ. ನನ್ನಂಗೆ ಇದು ಬಹಳ ಜನರ ಆಸೆ ಇದೆ, ಬಿಜೆಪಿ ಶುದ್ದಿಕರಣ ಆಗಬೇಕು ಅಂತಾ. ಮೋದಿ ಹೇಳಿದ್ದೇನು, ಕುಟುಂಬದಿಂದ ಪಕ್ಷ ಮುಕ್ತವಾಗಬೇಕು ಅಂತಾ ಮೋದಿ ಅಪೇಕ್ಷೆ ಪಟ್ಟಂತೆ ಆಗಬೇಕು ಎಂದು ಹೇಳಿದರು.
ಯಡಿಯೂರಪ್ಪ, ಮಗ ಬಿವೈ ವಿಜಯೇಂದ್ರ, ಬಿವೈ ರಾಘವೇಂದ್ರ ಅರ್ಥ ಮಾಡಿಕೊಳ್ಳಬೇಕು ತಾನೆ. ಇವರೇ ಕೇಂದ್ರ ಚುನಾವಣೆ ಸದಸ್ಯರು,ಇವ್ರೆ ಎಂ.ಪಿ,ಇವ್ರೇ ರಾಜ್ಯಾಧ್ಯಕ್ಷರು. ಇದನ್ನ ಮೋದಿ ಒಪ್ಪುತ್ತಾರಾ?ಮೋದಿಗೆ ಸಮದಾನ ಇದಿಯಾ?. ಬಿಜೆಪಿ ಪಕ್ಷದ ಋಣ ತೀರಿಸಬೇಕು ಅನ್ನೋದಿದೆ. ಆದರೆ, ಅದಕ್ಕೆ ಪಕ್ಷ ಶುದ್ಧೀಕರಣ ಆಗಬೇಕು ಅಂತಾ ನಾನು ಹೊರಟಿರುವೆ ಎಂದು ಬಾಗಲಕೋಟೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications