ನೋಟಿಸ್ಗೆ 10 ದಿನದೊಳಗೆ ಉತ್ತರ ನೀಡುತ್ತೇನೆ: ಬಿ.ಕೆ.ಹರಿಪ್ರಸಾದ್
ಬೆಂಗಳೂರು, ಸೆಪ್ಟೆಂಬರ್ 13: ಬೆಂಗಳೂರಿನಲ್ಲಿ ಸೆಪ್ಟೆಂಬರ್ 9 ರಂದು ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಎಂಎಲ್ ಸಿ ಬಿ ಕೆ ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದರಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಅವರ ವಿರುದ್ಧ ಶಿಸ್ತು ಕ್ರಮ ಏಕೆ ತೆಗೆದುಕೊಳ್ಳಬಾರದು ಎಂದು ಕೇಳಿ ಶೋಕಾಸ್ ನೋಟಿಸ್ ನೀಡಿದೆ.
ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಯ್ಯ ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳದ ಸಿಎಂ ವಿರುದ್ಧ ಹರಿಪ್ರಸಾದ್ ಅಸಮಾಧಾನಗೊಂಡಿದ್ದರು ಎನ್ನಲಾಗಿತ್ತು. ಅದ್ದರಿಂದ ಅವರು ಸಿಎಂ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು ಎಂದು ವರದಿಗಳು ಬಿತ್ತರಗೊಂಡಿದ್ದವು.

ಇದರಿಂದ ಬಿಕೆ ಹರಿಪ್ರಸಾದ್ ಕಾರ್ಯವೈಖರಿ ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಎಂದಿರುವ ಕಾಂಗ್ರೆಸ್, 10 ದಿನಗಳೊಳಗೆ ನೋಟಿಸ್ಗೆ ಉತ್ತರಿಸುವಂತೆ ಸೂಚಿಸಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹರಿಪ್ರಸಾದ್ ಅವರೊಂದಿಗೆ ಮಾತನಾಡಿ, ಪಕ್ಷದ ನಾಯಕರನ್ನು ಟೀಕಿಸುವುದರಿಂದ ದೂರವಿರಿ. ಅವರು ಪಕ್ಷದ ಅತ್ಯುನ್ನತ ಕಾರ್ಯಕಾರಿ ಸಮಿತಿಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಖಾಯಂ ಆಹ್ವಾನಿತರೂ ಆಗಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ನಿಮ್ಮ ಹೇಳಿಕೆಗಳು ಪಕ್ಷದ ಬೆಂಬಲದ ಆಧಾರವಾಗಿರುವ ಒಬಿಸಿ ಮತ್ತು ಎಸ್ಸಿಗಳ ಮನಸ್ಸಿನ ಮೇಲೆ ನಕಾರಾತ್ಮಕ ಪ್ರಭಾವ ಬೀರಿದೆ. ಪಕ್ಷಕ್ಕೆ ಹಾನಿಕರವಾದ ಇಂತಹ ಹೇಳಿಕೆಗಳನ್ನು ನೀಡಬಾರದು ಎಂಬುದು ಪಕ್ಷದ ಹಿರಿಯ ನಾಯಕರಾದ ನಿಮಗೆ ಸಂಪೂರ್ಣ ಅರಿವಿದೆ. ಇದು ಪಕ್ಷದ ಶಿಸ್ತಿನ ಸಂಪೂರ್ಣ ಉಲ್ಲಂಘನೆಯಾಗಿದೆ ಮತ್ತು ನೀವು ಉದ್ದೇಶಪೂರ್ವಕವಾಗಿ ಅದರಲ್ಲಿ ತೊಡಗಿಸಿಕೊಂಡಿದ್ದೀರಿ ಎಂದು ಹರಿಪ್ರಸಾದ್ ಅವರಿಗೆ ನೀಡಲಾದ ನೋಟಿಸ್ನಲ್ಲಿ ತಿಳಿಸಲಾಗಿದೆ.
ಹರಿಪ್ರಸಾದ್ ಅವರು ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ವೈಎಸ್ಆರ್ ಕಾಂಗ್ರೆಸ್ನ ಜೋಗಿ ರಮೇಶ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ. ನೋಟಿಸ್ಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, ನಿಗದಿತ ಸಮಯದೊಳಗೆ ಉತ್ತರ ನೀಡುವುದಾಗಿ ತಿಳಿಸಿದರು.
"ನಾನು ವಾಟ್ಸಾಪ್ನಲ್ಲಿ ನೋಟಿಸ್ ನೋಡಿದೆ. ಪ್ರತಿ ಇಂದು ನನಗೆ ತಲುಪಬಹುದು. ನಾನು ಅದನ್ನು ಸ್ವೀಕರಿಸಿದ ನಂತರ, ನಾನು ನಿರ್ದಿಷ್ಟ ಸಮಯದೊಳಗೆ ಉತ್ತರಿಸುತ್ತೇನೆ. ನೋಟಿಸ್ನಲ್ಲಿರುವ ಅಂಶಗಳು ನನ್ನ ಮತ್ತು ಪಕ್ಷದ ನಡುವೆ ಇದ್ದು, ಅದಕ್ಕೆ ಉತ್ತರ ನೀಡುತ್ತೇನೆ ಎಂದು ಹರಿಪ್ರಸಾದ್ ಹೇಳಿದ್ದಾರೆ.












Click it and Unblock the Notifications