ಮಾ. 16ರಂದು ಡಿಕೆ ರವಿ ಅವರು ಯಾರನ್ನೂ ಭೇಟಿ ಮಾಡಿಲ್ಲ
ಬೆಂಗಳೂರು, ಜೂ. 10 : ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ರವಿ ಅವರ ಆಪ್ತ ಸಹಾಯಕ ಮತ್ತು ಗನ್ ಮ್ಯಾನ್ ವಿಚಾರಣೆ ನಡೆಸಿದ್ದಾರೆ. ಡಿಕೆ ರವಿ ಅವರು ಕಚೇರಿಯಿಂದ ಮನೆಗೆ ಬಂದ ಮೇಲೆ ಸಾವನ್ನಪ್ಪಿದ್ದರು. ಆದ್ದರಿಂದ ಇಬ್ಬರ ಹೇಳಿಕೆಗಳು ತನಿಖೆಗೆ ಮುಖ್ಯವಾಗಿವೆ.
ಸಿಬಿಐ ಅಧಿಕಾರಿಗಳು ಡಿಕೆ ರವಿ ಅವರ ಆಪ್ತ ಸಹಾಯಕನ ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆ. ರವಿ ಅವರು ಸಾವನ್ನಪ್ಪುವ ದಿನ ಕಚೇರಿಯಲ್ಲಿ ಏನಾಯ್ತು? ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಅಂದು ಕಚೇರಿಗೆ ಬಂದ ರವಿ ಅವರು ಕೆಲವು ಹೊತ್ತು ಇದ್ದು, ಅಲ್ಲಿಂದ ಮನಗೆ ಹೋದರು ಎಂದು ಆಪ್ತ ಸಹಾಯಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. [ಡಿಕೆ ರವಿ ಸಾವು: ಸಿಬಿಐ ತನಿಖೆಯ ಮೊದಲ ಪುಟ!]

ಯಾರನ್ನೂ ಭೇಟಿಯಾಗಿಲ್ಲ : 2015ರ ಮಾರ್ಚ್ 16ರಂದು ರವಿ ಅವರು ಕಚೇರಿಯಲ್ಲಿ ಯಾರನ್ನೂ ಭೇಟಿಯಾಗಿಲ್ಲ. ಅಂದು ಯಾರ ಭೇಟಿಗೂ ಸಮಯ ಸಹ ನಿಗದಿಯಾಗಿರಲಿಲ್ಲ. ಕಚೇರಿಗೆ ಬಂದ ಅವರು ಕೆಲವು ಕೆಲಸಗಳನ್ನು ಮುಗಿಸಿ ತಕ್ಷಣ ಮನೆಗೆ ಮರಳಿದರು ಎಂದು ಆಪ್ತ ಸಹಾಯಕ ಸಿಬಿಐ ಅಧಿಕಾರಿಗಳಿಗೆ ತಿಳಿಸಿದ್ದಾರೆ. [ಎಲ್ಲಿಯ ಅಕ್ರಮ ಲಾಟರಿ ದಂಧೆ, ಎಲ್ಲಿಯ ಡಿಕೆ ರವಿ ಸಾವು?]
ರವಿ ಅವರ ಗನ್ ಮ್ಯಾನ್ ಅವರು ರವಿ ಅವರು ಸಾವನ್ನಪ್ಪುವ ದಿನ ಯಾರನ್ನು ಭೇಟಿಯಾಗಿಲ್ಲ ಎಂದು ವಿಚಾರಣೆ ವೇಳೆ ತಿಳಿಸಿದ್ದಾರೆ. ರವಿ ಅವರು ಕಾರಿನಲ್ಲಿ ಮನೆಗೆ ಹೋಗುವಾಗ ಅವರನ್ನು ಯಾರೂ ಹಿಂಬಾಲಿಸಿಲ್ಲ ಎಂದು ಅವರು ವಿವರಣೆ ನೀಡಿದ್ದಾರೆ. [ಡಿಕೆ ರವಿ ಕಳಿಸಿದ ಕೊನೆ ವಾಟ್ಸಪ್ ಸಂದೇಶದಲ್ಲಿ ಏನಿದೆ?]
ಸಿಬಿಐ ಅಧಿಕಾರಿಗಳು ಎಲ್ಲಾ ದೃಷ್ಟಿಕೋನಗಳಲ್ಲಿಯೂ ರವಿ ಅವರ ಸಾವಿನ ತನಿಖೆಯನ್ನು ನಡೆಸುತ್ತಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಗೆ ಬರುವ ಮುನ್ನ ರವಿ ಅವರು 2013ರ ಆಗಸ್ಟ್ 10ರಿಂದ 2014ರ ಅಕ್ಟೋಬರ್ 29ರ ತನಕ ಕೋಲಾರದ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು.
ಸಿಬಿಐ ಅಧಿಕಾರಿಗಳು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರವಿ ಅವರೊಂದಿಗೆ ಕೆಲಸ ಮಾಡಿದ್ದ ಸಿಬ್ಬಂದಿಗಳನ್ನು ವಿಚಾರಣೆ ಮಾಡಿದ್ದಾರೆ. ಕೋಲಾರದಲ್ಲಿ ಮರಳು ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದ ರವಿ ಅವರಿಗೆ ಜೀವ ಬೆದರಿಕೆ ಇತ್ತೇ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ರವಿ ಅವರ ಸಾವಿಗೆ ವೈಯಕ್ತಿಕ ಕಾರಣವಿತ್ತೇ?, ಅವರಿಗೆ ಜೀವ ಬೆದರಿಕೆ ಇತ್ತೇ?, ಆಸ್ತಿ ವಿಚಾರದಲ್ಲಿ ಉಂಟಾದ ನಷ್ಟದಿಂದ ಅವರು ಆತ್ಮಹತ್ಯೆ ಮಾಡಿಕೊಂಡರೇ? ಎಂದು ಸಿಬಿಐ ಅಧಿಕಾರಿಗಳು ಮೂರು ಹಂತದಲ್ಲಿ ವಿಚಾರಣೆ ಮಾಡಿದ್ದಾರೆ. ಅಂದಹಾಗೆ ಇಂದು ಡಿಕೆ ರವಿ ಹುಟ್ಟು ಹಬ್ಬ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications