ಸ್ನೇಹಿತರೇ... ಯುಗಾದಿ ಶುಭಾಶಯ ಹಂಚಿಕೊಳ್ಳಬೇಡಿ
ಬೆಂಗಳೂರು, ಮಾ. 20: ಸ್ನೇಹಿತರೇ ಈ ಬಾರಿ ಸಾಮಾಜಿಕ ಜಾಲತಾಣ ಅಥವಾ ಮೊಬೈಲ್ ನಲ್ಲಿ ದಯವಿಟ್ಟು ಯುಗಾದಿ ಹಬ್ಬದ ಶುಭಾಶಯ ಹಂಚಿಕೊಳ್ಳಬೇಡಿ, ಫೇಸ್ ಬುಕ್ ವಾಲ್ ನಲ್ಲಿ ಹಬ್ಬದ ಸಂದೇಶ ಬರೆಯಬೇಡಿ..
ಹೌದು.. ಸಾಮಾಜಿಕ ಜಾಲತಾಣಗಳಲ್ಲಿ ಇಂಥ ಸಂದೇಶಗಳು ಹರಿದಾಡತೊಡಗಿವೆ. ಇದಕ್ಕೆಲ್ಲ ಒಂದೇ ಕಾರಣ ದಕ್ಷ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವು. ಸಿಬಿಐ ಗೆ ತನಿಖೆಯನ್ನು ಒಪ್ಪಿಸಿದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕತಪಡಿಸಿರುವ ಜಾಲತಾಣಿಗರು ವಿವಿಧ ಬಗೆಯ ಕಮೆಂಟ್ ಗಳ ಮೂಲಕ ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಯುಗಾದಿ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಡಿಕೆ ರವಿ ಯವರ ಪ್ರಾಣವನ್ನೇ 'ಕೊಡುಗೆ' ಯಾಗಿ ಸ್ವೀಕರಿಸಿದ್ದಾರೆ ಎಂಬ ಕಮೆಂಟ್ ಗಳು ಹರಿದಾಡುತ್ತಿವೆ.[ಸಿಬಿಐ ತನಿಖೆಗೆ ರಾಜ್ಯದ ಊರೂರಿನಿಂದ ತೇಲಿಬಂದ ಕೂಗು]

ಕವನಗಳು, ಸರ್ವಜ್ಞನ ವಚನಗಳ ಅನುಕರಣೆ ಡಿಕೆ ರವಿ ಸಾವಿನ ಕತೆಯನ್ನು, ರಾಜ್ಯ ಸರ್ಕಾರ ಸಿಬಿಐ ಗೆ ಒಪ್ಪಿಸದ ಕ್ರಮವನ್ನು ಸಾರಿ ಸಾರಿ ಹೇಳುತ್ತಿದೆ. ಮಾರುಕಟ್ಟೆಯಲ್ಲಿ ಬೇವಿನ ಎಲೆ, ಹೂವು, ಹೊಸ ಬಟ್ಟೆ ಕೊಳ್ಳುವಿಕೆ ಭರಾಟೆ ಕಳೆದ ವರ್ಷಕ್ಕೆ ಹೋಲಿಸಿದಂತಿಲ್ಲ. ವಾರ್ಷಿಕ ಹಬ್ಬ ಆಚರಣೆ ಮಾಡಬೇಕು, ಹಿಂದು ಪಂಚಾಗದ ಮೊದಲ ಹಬ್ಬ ಆಚರಿಸಬೇಕು ಎಂಬ ಕಾರಣಕ್ಕಷ್ಟೆ ಜನರು ಮಾರುಕಟ್ಟೆಗೆ ತೆರಳುತ್ತಿದ್ದಾರೆ.
ಜನರ ಮನಸ್ಥಿತಿಯ ಮೇಲೆ ಪ್ರಕರಣ ಯಾವ ಬಗೆಯಲ್ಲಿ ಪರಿಣಾಮ ಬೀರಿದೆ ಎಂಬುದಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕಿಲ್ಲ. ಹೌದು ಇಡೀ ರಾಜ್ಯದಲ್ಲಿ ಡಿ.ಕೆ.ರವಿ ಸಾವು ಸೂತಕದ ವಾತಾವರಣಕ್ಕೆ ಕಾರಣವಾಗಿದೆ. ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ಸೋದರತ್ತೆ ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ.[ಡಿಕೆ ರವಿ ಕೇಸ್: ಸಿಐಡಿ ತನಿಖೆ ಎತ್ತ ಸಾಗಿದೆ?ಯಾರು ಟಾರ್ಗೆಟ್]
ರವಿ ಕುಟುಂಬ ಮಾತ್ರವಲ್ಲ ಇಡೀ ರಾಜ್ಯ ದುಖಃದಲ್ಲಿ ಮುಳುಗಿದ್ದು ಎಲ್ಲೆರದ್ದೂ ಒಂದೇ ಆಗ್ರಹ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ. ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಶಿಫಾರಸು ಮಾಡುತ್ತದೆಯೋ, ಬಿಡುತ್ತದೆಯೋ ಗೊತ್ತಿಲ್ಲ. ಜನರ ಹಕ್ಕೋತ್ತಾಯ ಮಾತ್ರ ಜೋರಾಗುತ್ತಲೇ ಇದೆ. ಸಂಭ್ರಮದಿಂದ ಯುಗಾದಿ ಆಚರಿಸಬೇಕಿದ್ದ ಜನತೆ ಸಿಬಿಐ ತನಿಖೆಗೆ ಆಗ್ರಹಿಸಿ ಬೀದಿಗಿಳಿದು ಹೋರಾಟ ನಡೆಸುತ್ತಿದೆ.
-
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ












Click it and Unblock the Notifications