ರೂಪಾಗೆ ಶಾಕ್ ನೀಡಿದ ರೋಹಿಣಿ ಸಿಂಧೂರಿ! 1 ಕೋಟಿ ರೂ. ಮಾನನಷ್ಟ ಕೇಸ್ ದಾಖಲು
ರೋಹಿಣಿ ಸಿಂಧೂರಿ ಹಾಗೂ ಡಿ ರೂಪಾ ನಡುವಿನ ಜಟಾಪಟಿಗೆ ಸರ್ಕಾರ ಬ್ರೇಕ್ ಹಾಕಿದ್ದು, ಪದೇ ಪದೇ ನನ್ನ ವಿರುದ್ದ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿ ರೂಪಾ ವಿರುದ್ದ ರೋಹಿಣಿ 1 ಕೋಟಿ ರೂ ಮಾನನಷ್ಟ ಕೇಸ್ ದಾಖಲಿಸಿದ್ದಾರೆ.
ಬೆಂಗಳೂರು,ಮಾರ್ಚ್1: ಕಳೆದ ಕೆಲ ದಿನಗಳಿಂದ ಐಪಿಎಸ್ ರೂಪಾ ಮತ್ತು ಐಎಎಸ್ ರೋಹಿಣಿ ಸಿಂಧೂರಿ ನಡುವೆ ಜಟಾಪಟಿ ಜೋರಾಗಿದ್ದು, ಸರ್ಕಾರ ಕೊಟ್ಟ ನೋಟೀಸ್ ನಿಂದ ಇಬ್ಬರ ನಡುವಿನ ಜಗಳ ಕೊಚ್ಚ ಕಡಿಮೆಯಾಗಿದ್ದು, ಇದೀಗ ಡಿ.ರೂಪಾ ಮೌದ್ಗಿಲ್ ಗೆ ರೋಹಿಣಿ ಸಿಂಧೂರಿ ಶಾಕ್ ನೀಡಿದ್ದಾರೆ.
ಹೌದು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನನ್ನ ವಿರುದ್ದ ಫೇಸ್ ಬುಕ್,ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಸುಳ್ಳು ಆರೋಪ ಮಾಡಿವ ಮೂಲ ಮಾನಹಾನಿ ಮಾಡಿದ್ದಾರೆ ಎಂದು ರೋಹಿಣಿ ಸಿಂಧೂರಿ ನಗರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.

ಅನಗತ್ಯವಾಗಿ ನನ್ನ ವಿರುದ್ದ ಈ ರೀತಿ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಎಂದು ರೋಹಿಣಿ ಸಿಂಧೂರಿ ಒಂದು ಕೋಟಿ ಹಣವನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನಗರದ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಇನ್ನೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಪರವಾಗಿ ಹಾಜರಾದ ವಕೀಲ ಸಿ.ವಿ.ನಾಗೇಶ್ ಅವರು, ದೂರುದಾರರು ಈ ಹಿಂದೆ ಚಾಮರಾಜನಗರ ಹಾಗೂ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ಆರೋಪಿ ಡಿ.ರೂಪಾ, ದೂರುದಾರರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನ ಮಾಡಿದ್ದಾರೆ. ಆದ್ದರಿಂದ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕು. ಆರೋಪಿಯಾಗಿರುವ ಡಿ.ರೂಪಾ ಮೌದ್ಗಿಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.
ರೋಹಿಣಿ ಸಿಂಧೂರಿ ಅವರ ಪರವಾಗಿ ಹಾಜರಾದ ವಕೀಲ ಸಿ.ವಿ.ನಾಗೇಶ್ ಅವರ ವಾದವನ್ನ ಪರಿಗಣಿಸಿದ ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಅವರು ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿದರು.
ಕಳೆದ ಕೆಲ ದಿನಗಳಿಂದ ಡಿ.ರೂಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ.ಅವರ ಹೇಳಿಕೆಯಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ನನ್ನ ವಿರುದ್ದ ಡಿ ರೂಪಾ ಅವರು ಇಲ್ಲಸಲ್ಲದ ಆರೋಪದಿಂದಾಗಿ ನನ್ನ ಖಾಸಗಿ ಹಾಗೂ ವೃತ್ತಿ ಬದುಕಿನ ಮೇಲೆ ಸಾಕಷ್ಟು ಪರಿಣಾಯ ಬೀರಿದೆ ಎಂದು ರೋಹಿಣಿ ಸಿಂಧೂರಿ ದೂರಿನಲ್ಲಿ ಹೇಳಿದ್ದಾರೆ.
ಇನ್ನೂ ಐಎಎಸ್ ನಿಯಮಗಳಿಗೆ ವಿರುದ್ಧವಾಗಿ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಟೀಕೆ ಮಾಡಿದಾರೆ. ಇದು ನನಗೆ ಮಾತ್ರವಲ್ಲದೆ ಸರ್ಕಾರಕ್ಕೂ ಮುಜುಗುರ ಉಂಟು ಮಾಡಿದೆ. ಆದ್ದರಿಂದ, ನನಗಾಗಿರುವ ಮಾನನಷ್ಟಕ್ಕೆ ಒಂದು ಕೋಟಿ ರು. ಪರಿಹಾರವಾಗಿ ಕೊಡಿಸಿಕೊಡಬೇಕು ಹಾಗೂ ಡಿ ರೂಪಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಸಿಂಧೂರಿ ಕೋರಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications