ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ವರ್ಗಾವಣೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 20: 2009ನೇ ಬ್ಯಾಚ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಲಾಗಿದೆ. ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಅವರನ್ನು ನೇಮಕ ಮಾಡಲಾಗಿದೆ.

ರೋಹಿಣಿ ಸಿಂಧೂರಿಗೆ ಸ್ಥಳ ನಿಯೋಜನೆ: ಈಗ ಯಾವ ಇಲಾಖೆ?ರೋಹಿಣಿ ಸಿಂಧೂರಿಗೆ ಸ್ಥಳ ನಿಯೋಜನೆ: ಈಗ ಯಾವ ಇಲಾಖೆ?

IAS Officer Rohini Sindhuri Transferred

2010ನೇ ಬ್ಯಾಚ್ ಐಎಎಸ್ ಅಧಿಕಾರಿ ಸಿ. ಪಿ. ಶೈಲಜಾರನ್ನು ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಅವರು ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಐಎಎಸ್ ನಲ್ಲಿ ದೇಶಕ್ಕೆ 8ನೇ Rank ಬಂದ ಜಿಪಂ ಸಿಇಒನ ರೋಚಕ ಕಥೆ...ಐಎಎಸ್ ನಲ್ಲಿ ದೇಶಕ್ಕೆ 8ನೇ Rank ಬಂದ ಜಿಪಂ ಸಿಇಒನ ರೋಚಕ ಕಥೆ...

ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಹಾಗೂ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. 2019ರ ಸೆಪ್ಟೆಂಬರ್‌ನಲ್ಲಿ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿತ್ತು.

ಕಂಡಕ್ಟರ್ ಐಎಎಸ್ ಪಾಸ್; ಸುಳ್ಳು ಸುದ್ದಿ ಸ್ಫೂರ್ತಿ ತುಂಬಿದ ಕಥೆ ಕಂಡಕ್ಟರ್ ಐಎಎಸ್ ಪಾಸ್; ಸುಳ್ಳು ಸುದ್ದಿ ಸ್ಫೂರ್ತಿ ತುಂಬಿದ ಕಥೆ

ಕೆಲವು ದಿನಗಳ ಕಾಲ ಯಾವುದೇ ಹುದ್ದೆಯನ್ನು ಸರ್ಕಾರ ನೀಡಿರಲಿಲ್ಲ. ಕೊನೆಗೆ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿದ್ದ ನೇಮಿಸಲಾಗಿತ್ತು.

English summary
Karnataka government transferred IAS officer Rohini Sindhuri. Appointed as religious & charitable endowment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X