ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ವೈರಲ್ ಆಗಿದ್ದ ಗುಪ್ತಚರ ಇಲಾಖೆ ವರದಿ ಸುಳ್ಳು
ಬೆಂಗಳೂರು, ಏಪ್ರಿಲ್ 8: ಚಾಮುಂಡೇಶ್ವರಿ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆಗೆ ಸೂಕ್ತವಲ್ಲ ಎಂಬುದಾಗಿ ಗುಪ್ತಚರ ಇಲಾಖೆ ವರದಿ ನೀಡಿದೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ವರದಿಯ ಪ್ರತಿಯೂ ಎಲ್ಲೆಡೆ ಹರಿದಾಡಿತ್ತು. ಈ ಪತ್ರವೀಗ ಸುಳ್ಳು ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ತಾವು ಚಾಮುಂಡೇಶ್ವರಿಯಿಂದ ಸ್ಪರ್ಧಿಸುವುದಾಗಿ ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಹರಿದಾಡಿದ್ದ ವರದಿಯಲ್ಲಿ, ಚಾಮುಂಡೇಶ್ವರಿ ಸಿಎಂ ಸ್ಪರ್ಧೆಗೆ ಸೂಕ್ತವಲ್ಲ ಎಂದು ಹೇಳಲಾಗಿತ್ತು.
"ಸೂಚನೆ ಮೇರೆಗೆ ವಿಧಾನಸಭಾ ಕ್ಷೇತ್ರಗಳ ಪರಿಶೀಲನೆಯನ್ನು ನಾವು ನಡೆಸಿದ್ದೇವೆ. ಇದರ ಫಲಿತಾಂಶಗಳು ಈ ಕೆಳಗಿನಂತಿವೆ. ಜಾತ್ಯಾತೀತ ಜನತಾದಳದ ನಾಯಕ ಜಿಟಿ ದೇವೇಗೌಡ ಮತ್ತು ಸ್ಥಳೀಯ ಒಕ್ಕಲಿಗ ನಾಯಕರು ಒಕ್ಕಲಿಗ ಮತಗಳ ಧ್ರುವೀಕರಣ ನಡೆಸಿದ್ದಾರೆ. ಹಾಗಾಗಿ ಚಾಮುಂಡೇಶ್ವರಿ ಉತ್ತಮ ಆಯ್ಕೆಯಲ್ಲ," ಎಂದು ಈ ವರದಿಯಲ್ಲಿ ಹೇಳಲಾಗಿತ್ತು.

ವರುಣಾ, ಬಸವಕಲ್ಯಾಣ, ಗಂಗಾವತಿ ಮತ್ತು ಶಾಂತಿನಗರ ಮುಖ್ಯಮಂತ್ರಿ ಸ್ಪರ್ಧೆಗೆ ಉತ್ತಮ ಕ್ಷೇತ್ರಗಳು ಎಂದು ಇದರಲ್ಲಿ ಸಲಹೆ ನೀಡಲಾಗಿತ್ತು.
Fake document: why are BJP guys getting excited over fake news & fake documents?
— Siddaramaiah (@siddaramaiah) April 7, 2018
Fight on issues. What do you offer the voter? https://t.co/SNtXsogZ5L
ಆದರೆ ಈ ಕುರಿತು ಟ್ಟಿಟ್ಟರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಇದು ನಕಲಿ ದಾಖಲೆ. ಬಿಜೆಪಿ ನಾಯಕರು ಯಾಕೆ ನಕಲಿ ದಾಖಲೆಗಳನ್ನು ಮತ್ತು ಸುದ್ದಿಗಳನ್ನು ನೋಡಿದಾಗ ಉತ್ತೇಜಿತರಾಗುತ್ತಾರೆ. ವಿಷಯಗಳನ್ನು ಇಟ್ಟುಕೊಂಡು ಹೋರಾಡಿ. ನೀವು ಮತದಾರರಿಗೆ ಏನನ್ನು ನೀಡಲು ಹೊರಟಿದ್ದೀರಿ," ಎಂದು ಕಿಡಿಕಾರಿದ್ದಾರೆ.
-
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications