ಭಾರತ ಗೆಲ್ಲಲು ಹೋಮ, ಹವನ, ಪೂಜೆ, ಪ್ರಾರ್ಥನೆ
ಬೆಂಗಳೂರು, ಮಾ. 25: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಇಡೀ ಪ್ರಪಂಚವೇ ಎದುರುನೋಡುತ್ತಿದೆ. ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಭಾರತ ಗೆಲ್ಲಲಿ ಎಂದು ಹಾರೈಸಿ ಪೂಜೆ, ಹೋಮ-ಹವನ, ಪ್ರಾರ್ಥನೆಗಳು ನಡೆಯುತ್ತಿವೆ.
ಉಡುಪಿ ಶ್ರೀ ಕೃಷ್ಣನಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ವಿದ್ಯಾವಲ್ಲಭ ತೀರ್ಥರು ಭಾರತ ಜಯಶಾಲಿಯಾಗಲೆಂದು ಆಶಿಸಿ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಈ ಸಾರಿ ಭಾರತ ವಿಶ್ವಕಪ್ ಗೆಲ್ಲಲಿದೆ. ಉತ್ತಮ ಪ್ರದರ್ಶನ ನೀಡುತ್ತಿರುವ ತಂಡ 2015 ರ ವಿಶ್ವಕಪ್ ನ್ನು ಗೆದ್ದು ದೇಶಕ್ಕೆ ಹಿಂದಿರುಗಲಿದೆ ಎಂದು ಹೇಳಿದರು.[ಎಂಎಸ್ ಧೋನಿ ರಣ ತಂತ್ರ ಇಂದಿಗೂ ಎಂದೆಂದಿಗೂ]
ಬೆಂಗಳೂರು, ಶಿವಮೊಗ್ಗ, ಧಾರವಾಡ, ಬಳ್ಳಾರಿ, ರಾಯಚೂರು ಸೇರಿದಂತೆ ರಾಜ್ಯದೆಲ್ಲೆಡೆ ಹೋಮ ಹವನಗಳನ್ನು ನಡೆಸಲಾಗುತ್ತಿದೆ. ನಗರದ ಪ್ರಮುಖ ಭಾಗಗಳಲ್ಲಿ, ಮಾಲ್ ಗಳಲ್ಲಿ ಪಂದ್ಯ ವೀಕ್ಷಿಸಲು ಸ್ಕ್ರೀನ್ ಗಳನ್ನು ಅಳವಡಿಸಲಾಗಿದೆ.
ಎಲ್ಲೆಲ್ಲಿಯೂ ಕ್ರಿಕೆಟ್ ಕ್ರೇಜ್ ಮನೆ ಮಾಡಿದ್ದು, ಮುಖದ ಮೇಲೆ, ಮೈ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣ ಹಾಕಿಸಿಕೊಳ್ಳುತ್ತಿರುವವರಿಗೂ ಕಡಿಮೆಯಿಲ್ಲ. ಜಯ್ ಹೋ, ಗೆದ್ದು ಬಾ ಇಂಡಿಯಾ, ಟೀಮ್ ಇಂಡಿಯಾ... ಎನ್ನುವ ಘೊಷಣೆಗಳು ಈಗಾಗಲೇ ಕೇಳಿ ಬರುತ್ತಿವೆ.(ಪಿಟಿಐ ಚಿತ್ರಗಳು)

ಮುಖಕ್ಕೆ ತ್ರಿವರ್ಣ ರಂಗು
ಭಾರತ ಆಸ್ಟ್ರೇಲಿಯಾವನ್ನು ಬಗ್ಗುಬಡಿದೇ ಬಡಿಯುತ್ತೇ ಎಂಬ ಖಾತ್ರಿಯಲ್ಲಿ ವಿಜಯದ ಸಿಂಬಲ್ ತೋರಿಸುತ್ತಿರುವ ಫರಿದಾಬಾದ್ ಯುವತಿಯರು. ಯುವಜನತೆಗೆ ಕ್ರಿಕೆಟ್ ಜ್ವರ ಹಿಡಿದಿದ್ದು ರಾಷ್ಟ್ರದೆಲ್ಲೆಡೆ ಇಂಥದ್ದೇ ವಾತಾವರಣ ಕಂಡುಬರುತ್ತಿದೆ.

ಹೋಮ ಹವನಕ್ಕೆ ಕೊನೆಯಿಲ್ಲ
ತ್ರಿವರ್ಣ ಧ್ವಜದ ಎದುರು ಪ್ರಾರ್ಥನೆ ಸಲ್ಲಿಸಿ ಭಾರತದ ಗೆಲುವಿಗೆ ವಾರಣಾಸಿಯಲ್ಲಿ ಯಾಗ. ವಿದ್ಯಾರ್ಥಿಗಳು, ಶಿಕ್ಷಕರು ಯಾಗದಲ್ಲಿ ಪಾಲ್ಗೊಂಡಿದ್ದು ಎಲ್ಲರದ್ದು ಒಂದೇ ಪ್ರಾರ್ಥನೆ ಜೈ ಹೋ ಇಂಡಿಯಾ.

ನಾವು ಕೊಡಕ್ಕಿಲ್ಲ
ದೇಶದೆಲ್ಲಡೇ ಕೇಳಿ ಬರುತ್ತಿರುವ ಕೂಗು ಒಂದೇ 'ನಾವು ಕೊಡಕ್ಕಿಲ್ಲ'. ಹೌದು ಕಳೆದ ಸಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ನಮಗೆ ಈ ಬಾರಿ ಪಟ್ಟ ಬಿಟ್ಟುಕೊಡಲು ಮನಸ್ಸಿಲ್ಲ ಎಂಬುದನ್ನು ಸಾರಿ ಹೇಳಿದ ಅಭಿಮಾನಿಗಳು.

ಪ್ರಾರ್ಥನೆ ಫಲಿಸದೆ ಇದ್ದಿತೇ
ಕ್ರಿಕೆಟ್ ಮಹಾಯುದ್ಧದಲ್ಲಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಹಾರೈಸಿ ವಾರಣಾಸಿಯಲ್ಲಿ ಮುಸ್ಲಿಮರಿಂದ ಪ್ರಾರ್ಥನೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications