ಭಾರತ ಗೆಲ್ಲಲು ಹೋಮ, ಹವನ, ಪೂಜೆ, ಪ್ರಾರ್ಥನೆ
ಬೆಂಗಳೂರು, ಮಾ. 25: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಇಡೀ ಪ್ರಪಂಚವೇ ಎದುರುನೋಡುತ್ತಿದೆ. ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಭಾರತ ಗೆಲ್ಲಲಿ ಎಂದು ಹಾರೈಸಿ ಪೂಜೆ, ಹೋಮ-ಹವನ, ಪ್ರಾರ್ಥನೆಗಳು ನಡೆಯುತ್ತಿವೆ.
ಉಡುಪಿ ಶ್ರೀ ಕೃಷ್ಣನಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ವಿದ್ಯಾವಲ್ಲಭ ತೀರ್ಥರು ಭಾರತ ಜಯಶಾಲಿಯಾಗಲೆಂದು ಆಶಿಸಿ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಈ ಸಾರಿ ಭಾರತ ವಿಶ್ವಕಪ್ ಗೆಲ್ಲಲಿದೆ. ಉತ್ತಮ ಪ್ರದರ್ಶನ ನೀಡುತ್ತಿರುವ ತಂಡ 2015 ರ ವಿಶ್ವಕಪ್ ನ್ನು ಗೆದ್ದು ದೇಶಕ್ಕೆ ಹಿಂದಿರುಗಲಿದೆ ಎಂದು ಹೇಳಿದರು.[ಎಂಎಸ್ ಧೋನಿ ರಣ ತಂತ್ರ ಇಂದಿಗೂ ಎಂದೆಂದಿಗೂ]
ಬೆಂಗಳೂರು, ಶಿವಮೊಗ್ಗ, ಧಾರವಾಡ, ಬಳ್ಳಾರಿ, ರಾಯಚೂರು ಸೇರಿದಂತೆ ರಾಜ್ಯದೆಲ್ಲೆಡೆ ಹೋಮ ಹವನಗಳನ್ನು ನಡೆಸಲಾಗುತ್ತಿದೆ. ನಗರದ ಪ್ರಮುಖ ಭಾಗಗಳಲ್ಲಿ, ಮಾಲ್ ಗಳಲ್ಲಿ ಪಂದ್ಯ ವೀಕ್ಷಿಸಲು ಸ್ಕ್ರೀನ್ ಗಳನ್ನು ಅಳವಡಿಸಲಾಗಿದೆ.
ಎಲ್ಲೆಲ್ಲಿಯೂ ಕ್ರಿಕೆಟ್ ಕ್ರೇಜ್ ಮನೆ ಮಾಡಿದ್ದು, ಮುಖದ ಮೇಲೆ, ಮೈ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣ ಹಾಕಿಸಿಕೊಳ್ಳುತ್ತಿರುವವರಿಗೂ ಕಡಿಮೆಯಿಲ್ಲ. ಜಯ್ ಹೋ, ಗೆದ್ದು ಬಾ ಇಂಡಿಯಾ, ಟೀಮ್ ಇಂಡಿಯಾ... ಎನ್ನುವ ಘೊಷಣೆಗಳು ಈಗಾಗಲೇ ಕೇಳಿ ಬರುತ್ತಿವೆ.(ಪಿಟಿಐ ಚಿತ್ರಗಳು)

ಮುಖಕ್ಕೆ ತ್ರಿವರ್ಣ ರಂಗು
ಭಾರತ ಆಸ್ಟ್ರೇಲಿಯಾವನ್ನು ಬಗ್ಗುಬಡಿದೇ ಬಡಿಯುತ್ತೇ ಎಂಬ ಖಾತ್ರಿಯಲ್ಲಿ ವಿಜಯದ ಸಿಂಬಲ್ ತೋರಿಸುತ್ತಿರುವ ಫರಿದಾಬಾದ್ ಯುವತಿಯರು. ಯುವಜನತೆಗೆ ಕ್ರಿಕೆಟ್ ಜ್ವರ ಹಿಡಿದಿದ್ದು ರಾಷ್ಟ್ರದೆಲ್ಲೆಡೆ ಇಂಥದ್ದೇ ವಾತಾವರಣ ಕಂಡುಬರುತ್ತಿದೆ.

ಹೋಮ ಹವನಕ್ಕೆ ಕೊನೆಯಿಲ್ಲ
ತ್ರಿವರ್ಣ ಧ್ವಜದ ಎದುರು ಪ್ರಾರ್ಥನೆ ಸಲ್ಲಿಸಿ ಭಾರತದ ಗೆಲುವಿಗೆ ವಾರಣಾಸಿಯಲ್ಲಿ ಯಾಗ. ವಿದ್ಯಾರ್ಥಿಗಳು, ಶಿಕ್ಷಕರು ಯಾಗದಲ್ಲಿ ಪಾಲ್ಗೊಂಡಿದ್ದು ಎಲ್ಲರದ್ದು ಒಂದೇ ಪ್ರಾರ್ಥನೆ ಜೈ ಹೋ ಇಂಡಿಯಾ.

ನಾವು ಕೊಡಕ್ಕಿಲ್ಲ
ದೇಶದೆಲ್ಲಡೇ ಕೇಳಿ ಬರುತ್ತಿರುವ ಕೂಗು ಒಂದೇ 'ನಾವು ಕೊಡಕ್ಕಿಲ್ಲ'. ಹೌದು ಕಳೆದ ಸಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ನಮಗೆ ಈ ಬಾರಿ ಪಟ್ಟ ಬಿಟ್ಟುಕೊಡಲು ಮನಸ್ಸಿಲ್ಲ ಎಂಬುದನ್ನು ಸಾರಿ ಹೇಳಿದ ಅಭಿಮಾನಿಗಳು.

ಪ್ರಾರ್ಥನೆ ಫಲಿಸದೆ ಇದ್ದಿತೇ
ಕ್ರಿಕೆಟ್ ಮಹಾಯುದ್ಧದಲ್ಲಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಹಾರೈಸಿ ವಾರಣಾಸಿಯಲ್ಲಿ ಮುಸ್ಲಿಮರಿಂದ ಪ್ರಾರ್ಥನೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications