"ಬಿಜೆಪಿ ನಾಯಕರಿಗೆ ಪಾಕ್ ಹೆಸರು ಹೇಳದಿದ್ದರೆ ತಿಂದಿದ್ದು ಜೀರ್ಣ ಆಗಲ್ಲ!"
ಕರ್ನಾಟಕದಲ್ಲಿ ಮತ್ತೆ ಪಾಕಿಸ್ತಾನದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಪಾಕ್ ವಿಚಾರವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ವಾಕ್ಸಮರ ಜೋರಾಗಿದೆ. ಇದೀಗ ಈ ವಿಚಾರವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿ ನಾಯಕರಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ತಿಂದಿದ್ದು ಜೀರ್ಣ ಆಗುವುದಿಲ್ಲ, ರಾತ್ರಿ ನಿದ್ದೆಯಲ್ಲೂ ಪಾಕಿಸ್ತಾನ ಪಾಕಿಸ್ತಾನ ಎಂದು ಕನವರಿಸುತ್ತಾರೋ ಏನೋ ಎಂದು ವ್ಯಂಗ್ಯವಾಡಿದ್ದಾರೆ.
ಕಲಬುರಗಿಯ ಜಿಲ್ಲಾಧಿಕಾರಿಗಳ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರ ಹೇಳಿಕೆ ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ. ಮುಂದುವರಿದು ಪಾಕಿಸ್ತಾನ ಪ್ರೇಮಿ ಬಿಜೆಪಿಗರು ಇಷ್ಟು ದಿನ ರಾಜಕೀಯ ನಾಯಕರ ವಿರುದ್ಧ ಪಾಕಿಸ್ತಾನದ ಹೆಸರು ಪ್ರಯೋಗಿಸುತ್ತಿದ್ದರು, ಈಗ ಅವರ ನಾಲಿಗೆ ಇನ್ನೂ ಉದ್ದವಾಗಿ ಅಧಿಕಾರಿಗಳನ್ನೂ ಪಾಕಿಸ್ತಾನದಿಂದ ಬಂದವರು ಎನ್ನುವ ಮಟ್ಟಿಗೆ ಬಂದಿದೆ.

ಸೇನಾಧಿಕಾರಿಗೆ ಭಯೋತ್ಪಾದಕರ ಸಹೋದರಿ ಎಂದರು, ಸೈನಿಕರು ಮೋದಿಯ ಕಾಲಿಗೆ ಬೀಳುತ್ತಾರೆ ಎಂದರು, ಇಲ್ಲಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದವರು ಎಂದರು. ಬಿಜೆಪಿಗರ ಜ್ಞಾನವು ಪಾಕಿಸ್ತಾನ, ಮುಸ್ಲಿಂ ವಿಚಾರಗಳನ್ನು ದಾಟಿ ಮುಂದೆ ಹೋಗುವುದೇ ಇಲ್ಲ.
ಅಧಿಕಾರಿಗಳ ನೈತಿಕ ಸ್ಥೈರ್ಯ ಕಸಿಯುವ ಪ್ರಯತ್ನದಲ್ಲಿರುವ ರವಿಕುಮಾರ್ ಅವರೇ, ಕಲಬುರಗಿಯ ಜಿಲ್ಲಾಧಿಕಾರಿ IAS (INDIAN Administrative Service) ಪಾಸ್ ಮಾಡಿ ದೇಶಸೇವೆಗೆ, ಜನಸೇವೆಗೆ ಬಂದವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರಣಮ್ ಅವರಿಗೆ ಅತ್ಯುತ್ತಮ ಚುನಾವಣಾ ಅಧಿಕಾರಿಯ ಪ್ರಶಸ್ತಿಯನ್ನು ಪ್ರದಾನ ಕೂಡ ಮಾಡಿದರು ಎಂದಿದ್ದಾರೆ.
ನಿಮ್ಮ ಹಾಗೆ ಯಾರಿಗೋ ಬಹುಪರಾಕ್ ಹೇಳಿಕೊಂಡು, RSSನವರ ಗುಲಾಮಗಿರಿ ಮಾಡಿಕೊಂಡು ಸ್ಥಾನ ಗಿಟ್ಟಿಸಿಕೊಂಡವರಲ್ಲ. ಅಧಿಕಾರಿಯ ಧರ್ಮ ಯಾವುದಾದರೂ ಅವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಜನಸೇವೆಗೆ ಬಂದಿರುತ್ತಾರೆ. ಸಂವಿಧಾನದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಯಾರಿಗೆ ಹೇಗೆ ಮಾತಾಡಬೇಕು ಎಂಬ ಮಿನಿಮಮ್ ಕಾಮನ್ ಸೆನ್ಸ್ ಇಲ್ಲದ ನಿಮ್ಮಂತವರು ಕರ್ನಾಟಕದ ರಾಜಕಾರಣಕ್ಕೆ ಕಳಂಕ ಎಂದಿದ್ದಾರೆ.
ದೇಶ ಸೇವೆಗಾಗಿ ಸಮರ್ಪಿಸಿಕೊಂಡಿರುವವರನ್ನು ಹಿಯಾಳಿಸುವುದು ಬಿಜೆಪಿಗರಿಗೆ ಚಟವಾಗಿ ಪರಿಣಮಿಸಿದೆ. ದೇಶಕ್ಕಾಗಿ ದುಡಿಯುವ ಸೇನಾಧಿಕಾರಿ ಸೋಫಿಯಾ ಖುರೇಷಿಯವರ ಧರ್ಮ ನೋಡಿ ಭಯೋತ್ಪಾದಕರ ಸಹೋದರಿ ಎಂದಿದ್ದ ಬಿಜೆಪಿಯ ವಿಜಯ್ ಶಾ ಹೇಳಿಕೆಗೂ ರವಿಕುಮಾರ್ ಅವರ ಹೇಳಿಕೆಗೂ ಯಾವುದೇ ವ್ಯತ್ಯಾಸವಿಲ್ಲ.ಹಗಲು ರಾತ್ರಿ ಜನರಿಗಾಗಿ ಕೆಲಸ ಮಾಡುವ ಅಧಿಕಾರಿಗಳು, ಸೈನಿಕರನ್ನು ಅವಮಾನಿಸುವುದನ್ನು ವ್ಯಸನ ಮಾಡಿಕೊಂಡಿರುವ ಬಿಜೆಪಿಗರ ದುರಹಂಕಾರಕ್ಕೆ ಜನತೆ ಪಾಠ ಕಲಿಸಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಈ ಮೂಲಕ ಪಾಕ್ನ ವಿಚಾರವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಮತ್ತೊಂದು ಸುತ್ತಿನ ವಾಕ್ಸಮರ ಶುರುವಾಗಿದೆ.
ಪಾಕಿಸ್ತಾನದಿಂದ ಬಂದಿರುವಂತೆ ಕಾಣುತ್ತಿದೆ: ಕಲಬುರಗಿಯ ಜಿಲ್ಲಾಧಿಕಾರಿಯ ಬಗ್ಗೆ ಬಿಜೆಪಿ ಎಂಎಲ್ಸಿ ಹಾಗೂ ವಿಧಾನಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇಲ್ಲಿನ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿರುವಂತಿದೆ ಎಂದು ಅವರು ಹೇಳಿದ್ದರು.
-
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications