Get Updates
Get notified of breaking news, exclusive insights, and must-see stories!

"ಬಿಜೆಪಿ ನಾಯಕರಿಗೆ ಪಾಕ್‌ ಹೆಸರು ಹೇಳದಿದ್ದರೆ ತಿಂದಿದ್ದು ಜೀರ್ಣ ಆಗಲ್ಲ!"

ಕರ್ನಾಟಕದಲ್ಲಿ ಮತ್ತೆ ಪಾಕಿಸ್ತಾನದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಪಾಕ್‌ ವಿಚಾರವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ನಡುವೆ ವಾಕ್ಸಮರ ಜೋರಾಗಿದೆ. ಇದೀಗ ಈ ವಿಚಾರವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿ ನಾಯಕರಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ತಿಂದಿದ್ದು ಜೀರ್ಣ ಆಗುವುದಿಲ್ಲ, ರಾತ್ರಿ ನಿದ್ದೆಯಲ್ಲೂ ಪಾಕಿಸ್ತಾನ ಪಾಕಿಸ್ತಾನ ಎಂದು ಕನವರಿಸುತ್ತಾರೋ ಏನೋ ಎಂದು ವ್ಯಂಗ್ಯವಾಡಿದ್ದಾರೆ.

ಕಲಬುರಗಿಯ ಜಿಲ್ಲಾಧಿಕಾರಿಗಳ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರ ಹೇಳಿಕೆ ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ. ಮುಂದುವರಿದು ಪಾಕಿಸ್ತಾನ ಪ್ರೇಮಿ ಬಿಜೆಪಿಗರು ಇಷ್ಟು ದಿನ ರಾಜಕೀಯ ನಾಯಕರ ವಿರುದ್ಧ ಪಾಕಿಸ್ತಾನದ ಹೆಸರು ಪ್ರಯೋಗಿಸುತ್ತಿದ್ದರು, ಈಗ ಅವರ ನಾಲಿಗೆ ಇನ್ನೂ ಉದ್ದವಾಗಿ ಅಧಿಕಾರಿಗಳನ್ನೂ ಪಾಕಿಸ್ತಾನದಿಂದ ಬಂದವರು ಎನ್ನುವ ಮಟ್ಟಿಗೆ ಬಂದಿದೆ.

If BJP leaders don t mention Pakistan s name they won t be able to digest what they ve eaten

ಸೇನಾಧಿಕಾರಿಗೆ ಭಯೋತ್ಪಾದಕರ ಸಹೋದರಿ ಎಂದರು, ಸೈನಿಕರು ಮೋದಿಯ ಕಾಲಿಗೆ ಬೀಳುತ್ತಾರೆ ಎಂದರು, ಇಲ್ಲಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದವರು ಎಂದರು. ಬಿಜೆಪಿಗರ ಜ್ಞಾನವು ಪಾಕಿಸ್ತಾನ, ಮುಸ್ಲಿಂ ವಿಚಾರಗಳನ್ನು ದಾಟಿ ಮುಂದೆ ಹೋಗುವುದೇ ಇಲ್ಲ.

ಅಧಿಕಾರಿಗಳ ನೈತಿಕ ಸ್ಥೈರ್ಯ ಕಸಿಯುವ ಪ್ರಯತ್ನದಲ್ಲಿರುವ ರವಿಕುಮಾರ್ ಅವರೇ, ಕಲಬುರಗಿಯ ಜಿಲ್ಲಾಧಿಕಾರಿ IAS (INDIAN Administrative Service) ಪಾಸ್ ಮಾಡಿ ದೇಶಸೇವೆಗೆ, ಜನಸೇವೆಗೆ ಬಂದವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರಣಮ್ ಅವರಿಗೆ ಅತ್ಯುತ್ತಮ ಚುನಾವಣಾ ಅಧಿಕಾರಿಯ ಪ್ರಶಸ್ತಿಯನ್ನು ಪ್ರದಾನ ಕೂಡ ಮಾಡಿದರು ಎಂದಿದ್ದಾರೆ.

ನಿಮ್ಮ ಹಾಗೆ ಯಾರಿಗೋ ಬಹುಪರಾಕ್ ಹೇಳಿಕೊಂಡು, RSSನವರ ಗುಲಾಮಗಿರಿ ಮಾಡಿಕೊಂಡು ಸ್ಥಾನ ಗಿಟ್ಟಿಸಿಕೊಂಡವರಲ್ಲ. ಅಧಿಕಾರಿಯ ಧರ್ಮ ಯಾವುದಾದರೂ ಅವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಜನಸೇವೆಗೆ ಬಂದಿರುತ್ತಾರೆ. ಸಂವಿಧಾನದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಯಾರಿಗೆ ಹೇಗೆ ಮಾತಾಡಬೇಕು ಎಂಬ ಮಿನಿಮಮ್ ಕಾಮನ್ ಸೆನ್ಸ್ ಇಲ್ಲದ ನಿಮ್ಮಂತವರು ಕರ್ನಾಟಕದ ರಾಜಕಾರಣಕ್ಕೆ ಕಳಂಕ ಎಂದಿದ್ದಾರೆ.

ದೇಶ ಸೇವೆಗಾಗಿ ಸಮರ್ಪಿಸಿಕೊಂಡಿರುವವರನ್ನು ಹಿಯಾಳಿಸುವುದು ಬಿಜೆಪಿಗರಿಗೆ ಚಟವಾಗಿ ಪರಿಣಮಿಸಿದೆ. ದೇಶಕ್ಕಾಗಿ ದುಡಿಯುವ ಸೇನಾಧಿಕಾರಿ ಸೋಫಿಯಾ ಖುರೇಷಿಯವರ ಧರ್ಮ ನೋಡಿ ಭಯೋತ್ಪಾದಕರ ಸಹೋದರಿ ಎಂದಿದ್ದ ಬಿಜೆಪಿಯ ವಿಜಯ್ ಶಾ ಹೇಳಿಕೆಗೂ ರವಿಕುಮಾರ್ ಅವರ ಹೇಳಿಕೆಗೂ ಯಾವುದೇ ವ್ಯತ್ಯಾಸವಿಲ್ಲ.ಹಗಲು ರಾತ್ರಿ ಜನರಿಗಾಗಿ ಕೆಲಸ ಮಾಡುವ ಅಧಿಕಾರಿಗಳು, ಸೈನಿಕರನ್ನು ಅವಮಾನಿಸುವುದನ್ನು ವ್ಯಸನ ಮಾಡಿಕೊಂಡಿರುವ ಬಿಜೆಪಿಗರ ದುರಹಂಕಾರಕ್ಕೆ ಜನತೆ ಪಾಠ ಕಲಿಸಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಈ ಮೂಲಕ ಪಾಕ್‌ನ ವಿಚಾರವಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ನಡುವೆ ಮತ್ತೊಂದು ಸುತ್ತಿನ ವಾಕ್ಸಮರ ಶುರುವಾಗಿದೆ.

ಪಾಕಿಸ್ತಾನದಿಂದ ಬಂದಿರುವಂತೆ ಕಾಣುತ್ತಿದೆ: ಕಲಬುರಗಿಯ ಜಿಲ್ಲಾಧಿಕಾರಿಯ ಬಗ್ಗೆ ಬಿಜೆಪಿ ಎಂಎಲ್‌ಸಿ ಹಾಗೂ ವಿಧಾನಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್‌. ರವಿಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇಲ್ಲಿನ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿರುವಂತಿದೆ ಎಂದು ಅವರು ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+