DK Shivakumar: ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆ ಕುರಿತು ಮಹತ್ವ ಹೇಳಿಕೆ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್ 05: ಸಾರಿಗೆ ನೌಕರರಿಗೆ ಸಹಾಯ ಮಾಡುವ ಅವಕಾಶ ಸಿಕ್ಕರೆ ಖಂಡಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದನ್ನು ಮಾಡುತ್ತಾರೆ. ಇಲ್ಲಿ ಹಠ ಮಾಡುವುದರಿಂದ ಪ್ರಯೋಜನವಿಲ್ಲ. ಸಾರ್ವಜನಿಕರ ಬದುಕು ಗಮನದಲ್ಲಿಟ್ಟುಕೊಂಡು ಸಹಕರಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾರಿಗೆ ನೌಕರರಿಗೆ ಮನವಿ ಮಾಡಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಸಾರಿಗೆ ನೌಕರರ ಬೇಡಿಕೆ ತಪ್ಪು ಎಂದು ಸರ್ಕಾರ ಹೇಳುತ್ತಿಲ್ಲ. ಅವರು ಕೂಡ ಸರ್ಕಾರದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಅವರಿಗೆ ನೆರವಾಗಲು ಪ್ರಯತ್ನಿಸುತ್ತಿದ್ದಾರೆ. ನಾಗರೀಕರನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಾಧ್ಯವಾಗದನ್ನು ಮಾಡಿ ಎಂದು ಒತ್ತಡ ಹಾಕಬಾರದು, ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ. ಇಂದು ಕರ್ತವ್ಯಕ್ಕೆ ಹಾಜರಾಗಿರುವ ಚಾಲಕರು ಹಾಗೂ ಕಂಡಕ್ಟರ್ ಗಳಿಗೆ ಅಭಿನಂದಿಸುತ್ತೇನೆ. ಸಾರ್ವಜನಿಕರ ಬದುಕು ಮುಖ್ಯ ಎಂದು ತಿಳಿಸಿದರು.

ಒಂದು ದಿನ ಮುಂದೂಡಿ ಎಂಬ ಕೋರ್ಟ್ ಆದೇಶಕ್ಕೂ ಬೆಲೆ ನೀಡದೆ ಕೆಲವರು ಮುಷ್ಕರ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಡಿ ಕೆ ಶಿವಕುಮಾರ್ ಅವರು, ಅನಗತ್ಯವಾಗಿ ಕಾನೂನಿಗೂ ಗೌರವ ನೀಡದೇ ಹಠ ಮಾಡುವುದು ಬೇಡ. ನೀವು ಸಮಾಜ ಸೇವೆ ಮಾಡುತ್ತಿದ್ದು, ನಮಗೆ ಸಹಕಾರ ನೀಡಿ ಎಂದು ಮನವಿ ಮಾಡಿದರು.
ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಆಗಸ್ಟ್ 10ರಂದು ಆಗಮಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ನಾನು ಉದ್ಘಾಟನೆಯಾಗಲಿರುವ ಮೆಟ್ರೋ ಮಾರ್ಗವನ್ನು ಪೂರ್ವಭಾವಿಯಾಗಿ ಪರಿಶೀಲನೆ ಮಾಡಿದ್ದೇನೆ. ಅಧಿಕೃತ ಕಾರ್ಯಕ್ರಮ ಪಟ್ಟಿ ಇನ್ನು ಬಂದಿಲ್ಲ. ಆದರೆ ರೈಲ್ವೇ ಯೋಜನೆ ಉದ್ಘಾಟನೆ, ಅವರ ಪಕ್ಷದ ಕಾರ್ಯಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳಿವೆ ಎಂದು ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications