DK Shivakumar: ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆ ಕುರಿತು ಮಹತ್ವ ಹೇಳಿಕೆ ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಆಗಸ್ಟ್‌ 05: ಸಾರಿಗೆ ನೌಕರರಿಗೆ ಸಹಾಯ ಮಾಡುವ ಅವಕಾಶ ಸಿಕ್ಕರೆ ಖಂಡಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದನ್ನು ಮಾಡುತ್ತಾರೆ. ಇಲ್ಲಿ ಹಠ ಮಾಡುವುದರಿಂದ ಪ್ರಯೋಜನವಿಲ್ಲ. ಸಾರ್ವಜನಿಕರ ಬದುಕು ಗಮನದಲ್ಲಿಟ್ಟುಕೊಂಡು ಸಹಕರಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾರಿಗೆ ನೌಕರರಿಗೆ ಮನವಿ ಮಾಡಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಸಾರಿಗೆ ನೌಕರರ ಬೇಡಿಕೆ ತಪ್ಪು ಎಂದು ಸರ್ಕಾರ ಹೇಳುತ್ತಿಲ್ಲ. ಅವರು ಕೂಡ ಸರ್ಕಾರದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಅವರಿಗೆ ನೆರವಾಗಲು ಪ್ರಯತ್ನಿಸುತ್ತಿದ್ದಾರೆ. ನಾಗರೀಕರನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಾಧ್ಯವಾಗದನ್ನು ಮಾಡಿ ಎಂದು ಒತ್ತಡ ಹಾಕಬಾರದು, ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ. ಇಂದು ಕರ್ತವ್ಯಕ್ಕೆ ಹಾಜರಾಗಿರುವ ಚಾಲಕರು ಹಾಗೂ ಕಂಡಕ್ಟರ್ ಗಳಿಗೆ ಅಭಿನಂದಿಸುತ್ತೇನೆ. ಸಾರ್ವಜನಿಕರ ಬದುಕು ಮುಖ್ಯ ಎಂದು ತಿಳಿಸಿದರು.

If Given The Opportunity The Demands Of Transport Employees Will Be Met DCM Dk Shivakumar

ಒಂದು ದಿನ ಮುಂದೂಡಿ ಎಂಬ ಕೋರ್ಟ್ ಆದೇಶಕ್ಕೂ ಬೆಲೆ ನೀಡದೆ ಕೆಲವರು ಮುಷ್ಕರ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಡಿ ಕೆ ಶಿವಕುಮಾರ್‌ ಅವರು, ಅನಗತ್ಯವಾಗಿ ಕಾನೂನಿಗೂ ಗೌರವ ನೀಡದೇ ಹಠ ಮಾಡುವುದು ಬೇಡ. ನೀವು ಸಮಾಜ ಸೇವೆ ಮಾಡುತ್ತಿದ್ದು, ನಮಗೆ ಸಹಕಾರ ನೀಡಿ ಎಂದು ಮನವಿ ಮಾಡಿದರು.

ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಆಗಸ್ಟ್ 10ರಂದು ಆಗಮಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ನಾನು ಉದ್ಘಾಟನೆಯಾಗಲಿರುವ ಮೆಟ್ರೋ ಮಾರ್ಗವನ್ನು ಪೂರ್ವಭಾವಿಯಾಗಿ ಪರಿಶೀಲನೆ ಮಾಡಿದ್ದೇನೆ. ಅಧಿಕೃತ ಕಾರ್ಯಕ್ರಮ ಪಟ್ಟಿ ಇನ್ನು ಬಂದಿಲ್ಲ. ಆದರೆ ರೈಲ್ವೇ ಯೋಜನೆ ಉದ್ಘಾಟನೆ, ಅವರ ಪಕ್ಷದ ಕಾರ್ಯಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳಿವೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+