Jagadish Shettar: 'ಡಿಕೆ ಶಿವಕುಮಾರ್ನ ಕಾಂಗ್ರೆಸ್ನಿಂದ ಸಸ್ಪೆಂಡ್ ಮಾಡಿ'
ಹುಬ್ಬಳ್ಳಿ, ಫೆಬ್ರವರಿ 27: ಡಿಕೆ ಶಿವಕುಮಾರ್ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸದ್ಗುರು ಅವರನ್ನು ಭೇಟಿ ಮಾಡಿರೋದು, ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಂಡಿರುವ ವಿಚಾರ, ಕುಂಭಮೇಳದಲ್ಲಿ ಭಾಗಿಯಾಗಿರುವ ವಿಚಾರ ಚರ್ಚೆಯಾಗುತ್ತಿದೆ. ಪಕ್ಷದಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಡಿಕೆ ಶಿವಕುಮಾರ್ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು.
ಇಂದು (ಗುರುವಾರ) ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರತಿನಿಧಿಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಮಾತನಾಡಿ, ಡಿ ಕೆ ಶಿವಕುಮಾರ್ ಅವರು ಕುಂಭಮೇಳಕ್ಕೆ ಹೋಗಿರೋದು,ಕೊಯಮತ್ತೂರಗೆ ಹೋಗಿರೋದು ಸಹಜ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ಸರಿ ಆಗಲ್ಲ ಅಂದ್ರೆ,ಡಿಕೆ ಶಿವಕುಮಾರ್ ಸಸ್ಪೆಂಡ್ ಮಾಡಿ. ಅವರು ನಿಮ್ಮ ಪಕ್ಷದ ತತ್ವ ಸಿದ್ದಾಂತಕ್ಕೆ ವಿರೋಧವಾಗಿದ್ರೆ ಅವರನ್ನು ಪಾರ್ಟಿಯಿಂದ ಹೊರಗೆ ಹಾಕಿ ಎಂದು ಜಗದೀಶ್ ಶೆಟ್ಟರ್ ಅವರು ಹೇಳಿದರು.

ಕಾಂಗ್ರೆಸ್ ಗೆ ಹಿಂದೂಗಳ ಬಗ್ಗೆ ದ್ವೇಷ ಇದೆ. ಇದರಿಂದ ಕಾಂಗ್ರೆಸ್ ಉದ್ದಾರ ಆಗಲ್ಲ, ಹಿಂದೂಗಳ ಇಲ್ಲದೆ ನೀವ ರಾಜಕಾರಣ ಮಾಡ್ತೀನಿ ಅಂದರೆ ಅದು ನಿಮ್ಮ ಹಣೆಬರಹ. ಹಿಂದೂಗಳನ್ನ ಕೀಳಾಗಿ ಕಾಣೋದೆ, ಅವರ ಅವನತಿಗೆ ಕಾರಣ ಎಂದ ಅವರು, ಮಲ್ಲಿಕಾರ್ಜುನ ಖರ್ಗೆ,ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಿಂದೂ ವಿರೋಧಿಯಾಗಿವೆ. ಈ ದೇಶ ಹಿಂದೂಗಳ ದೇಶ,ಹಿಂದೂ ರಾಷ್ಟ್ರ ಅನ್ನೋ ಪರಂಪರೆ ಇದೆ. ಇದಕ್ಕೆ ಎಲ್ಲಿ ಅಡ್ಡಿಯಾಗಬಾರದು. ಕಮ್ಯುನಿಸ್ಟರು ಕೂಡಾ ಹಿಂದೂ ದೇವಾಲಯಕ್ಕೆ ಹೋಗಿದ್ದಾರೆ. ಅವರು ಕೂಡಾ ದೇವಸ್ಥಾನಕ್ಕೆ ಹೋಗಿದ್ದಾರೆ. ಕಾಂಗ್ರೆಸ್ ನವರು ಎಷ್ಟು ಜನ ಕುಂಭಮೇಳ ಕ್ಕೆ ಹೋಗಿದ್ದಾರೆ. ರಾಜಕಾರಣ ಕ್ಕೆ ಧರ್ಮಕ್ಕೆ ತಳಕು ಹಾಕಬಾರದು ಎಂದು ಮಾಜಿ ಸಿಎಂ ಹಾಗೂ ಸಂಸದರಾದ ಜಗದೀಶ್ ಶೆಟ್ಟರ್ ಅವರು ಸಲಹೆ ನೀಡಿದರು.
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಬೆಳಗಾವಿ ಸಂಸದನಾಗಿ ಕೆಲಸ ಮಾಡತಿದೀನಿ. ಅಲ್ಲಿನ ಜನ ಎಲ್ಲರೂ ನಂಗೆ ಸಪೋರ್ಟ್ ಮಾಡಿದ್ದಾರೆ. ಹಿಂದೆ ಮರಾಠರು ಮತ್ತು ಕನ್ನಡಿಗರ ನಡುವೆ ಗ್ಯಾಪ್ ಇತ್ತು. ಎಲ್ಲರೂ ಅಣ್ಣ ತಮ್ಮಂದಿರ ತರಹ ಕೆಲಸ ಮಾಡತೀದಾರೆ ಆದರೆ, ಸಂಘರ್ಷ ಮಾಡಲಿಕ್ಕೆ ಹೋಗಬಾರದು. ಆ ಘಟನೆ ಆಗಬಾರದಿತ್ತು, ಹಲ್ಲೆ ಮಾಡಿದವರ ವಿರುದ್ದ ಕ್ರಮ ಆಗಬೇಕು. ಪೊಕ್ಸೋ ಕೇಸ್ ಹಾಕಿದ್ದು ಕೂಡಾ ತಪ್ಪು. ಪೊಲೀಸ್ ಅಧಿಕಾರಿ ಮಾಡಿರೋ ತಪ್ಪು ಎಂದ ಶೆಟ್ಟರ್ ಅವರು, ಪೊಕ್ಸೋ ಕೇಸ್ ಹಾಕಿರೋ ಕಾರಣಕ್ಕೆ ಅದು ಹೆಚ್ಚಿನ ಮಹತ್ವ ಬಂತು. ನಾವೆಲ್ಲರೂ ಭಾರತದಲ್ಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹೇಳಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications