1 ವಾರದಲ್ಲಿ ಹೊಸ ಸರಕಾರ ರಚನೆಯಾಗದಿದ್ದಲ್ಲಿ ಭಾರೀ ಸಾಂವಿಧಾನಿಕ ಬಿಕ್ಕಟ್ಟು: ಸ್ಪೀಕರ್
Recommended Video
ಬೆಂಗಳೂರು, ಜುಲೈ 25: ಇನ್ನೊಂದು ವಾರದಲ್ಲಿ ಹೊಸ ಸರಕಾರ ರಚನೆಯಾಗದೇ ಇದ್ದಲ್ಲಿ ಸಾಂವಿಧಾನಕವಾಗಿ ತುಂಬಾ ಬಿಕ್ಕಟ್ಟನ್ನು ಎದುರಿಸಬೇಕಾಗಿ ಬರಬಹುದು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸ್ಪೀಕರ್, ಜುಲೈ 31ರೊಳಗೆ ಹೊಸ ಸರಕಾರ ರಚನೆಯಾಗಿ, ಹಣಕಾಸು ವಿಧೇಯಕಕ್ಕೆ ಅನುಮೋದನೆ ಪಡೆಯಬೇಕಾಗುತ್ತದೆ. ಇಲ್ಲದಿದ್ದಲ್ಲಿ, ಸರಕಾರೀ ಟ್ರೆಷರ್ ನಿಂದ ನಯಾಪೈಸೆ ತೆಗೆಯಲು ಸಾಧ್ಯವಾಗುವುದಿಲ್ಲ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಬಿಕ್ಕಟ್ಟು ಎದುರಾಗಿದೆ. ಬಿಲ್ ಪಾಸಾಗದಿದ್ದರೆ, ಸರಕಾರೀ ನೌಕರರಿಗೆ ಸಂಬಳ ಕೊಡಲೂ ಸಾಧ್ಯವಾಗುವುದಿಲ್ಲ ಎಂದು ರಮೇಶ್ ಕುಮಾರ್ ಹೇಳಿದರು.

ಒಂದು ವೇಳೆ ಈ ರೀತಿಯ ಪರಿಸ್ಥಿತಿ ಎದುರಾದರೆ, ರಾಷ್ಟ್ರಪತಿ ಆಡಳಿತ ಜಾರಿಯಾದರೆ ಆಶ್ಚರ್ಯ ಪಡಬೇಕಾಗಿಲ್ಲ ಎಂದು ರಮೇಶ್ ಕುಮಾರ್ ಅಭಿಪ್ರಾಯ ವ್ಯಕ್ತ ಪಡಿಸಿದರು. 2019-2020ರ ಸಾಲಿನ ರಾಜ್ಯ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿದ್ದ ಕುಮಾರಸ್ವಾಮಿ ಫೆಬ್ರವರಿ 08, 2019ರಂದು ಮಂಡಿಸಿದ್ದರು.
ಹಣಕಾಸು ವಿಧೇಯಕ ಪಾಸ್ ಆಗದಿದ್ದಲ್ಲಿ ಇರುವ ಆಯ್ಕೆಯೇನು? ಒಂದು ವೇಳೆ ಜುಲೈ 31ರೊಳಗೆ ಹೊಸ ಸರಕಾರ ರಚನೆಯಾಗದೇ ಇದ್ದ ಪಕ್ಷದಲ್ಲಿ ಎರಡು ಆಯ್ಕೆ ರಾಜ್ಯಪಾಲರಿಗೆ ಇರುತ್ತದೆ ಎನ್ನುವುದು ಕಾನೂನು ಪಂಡಿತರ ಅಭಿಪ್ರಾಯ.
1. ಲೋಕಸಭೆಯಲ್ಲಿ ಮಾನ್ಸೂನ್ ಅಧಿವೇಶನ ನಡೆಯುತ್ತಿರುವುದರಿಂದ, ಹಣಕಾಸು ಸಚಿವಾಲಯದ ಮೂಲಕ, ಅಲ್ಲಿ ವಿಧೇಯಕಕ್ಕೆ ಅನುಮೋದನೆ ಪಡೆಯಬಹುದು.
2. ರಾಷ್ಟ್ರಪತಿ ಬಳಿ ವಿಧೇಯಕಕ್ಕೆ ಅಂಕಿತ ಹಾಕಿಸಿಕೊಂಡು ಬಿಲ್ ಪಾಸ್ ಮಾಡಿಸಿಕೊಳ್ಳಬಹುದು.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications