ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ಕುಮಾರಸ್ವಾಮಿಯನ್ನು ಹೊರಗಟ್ಟುತ್ತೇನೆ: ದೇವೇಗೌಡ
ಬೆಂಗಳೂರು, ಏಪ್ರಿಲ್ 30: ಕುಮಾರಸ್ವಾಮಿ ಈ ಬಾರಿ ಏನಾದರೂ ಬಿಜೆಪಿ ಜೊತೆಗೆ ಸೇರಿ ಸರ್ಕಾರ ರಚಿಸಿದರೆ ಆತನಿಗೆ ನಮ್ಮ ಕುಟುಂಬದಿಂದಲೇ ಬಹಿಷ್ಕಾರ ಹಾಕುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಹೇಳಿದ್ದಾರೆ.
ಎನ್ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಈ ಮಾತು ಹೇಳಿರು ಅವರು, ಕುಮಾರಸ್ವಾಮಿ 2006 ರಲ್ಲಿ ಮಾಡಿದ್ದ ತಪ್ಪನ್ನು ಮತ್ತೆ ಮಾಡುವುದಿಲ್ಲ ಎಂಬ ಅಚಲ ವಿಶ್ವಾಸವಿದೆ ಎಂದ ಅವರು, ಅಕಸ್ಮಾತ್ ಮತ್ತೆ ಹಾಗೆ ಮಾಡಿದಲ್ಲಿ ನಾನು ಮತ್ತು ನಮ್ಮ ಕುಟುಂಬ ಅವನೊಂದಿಗೆ ಸಂಬಂಧ ಕಡಿದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಕುಮಾರಸ್ವಾಮಿ ಅವರು ಈಗಾಗಲೇ ತಮ್ಮ ಹಳೆಯ ತಪ್ಪಿನ ಪಾಠ ಕಲಿತಿದ್ದು, ಮತ್ತೆ ಆ ತಪ್ಪು ಮಾಡಲಾರರು ಎಂದ ದೇವೇಗೌಡ ಅವರು, ಕಾಂಗ್ರೆಸ್ ಪಕ್ಷದ ಜೊತೆಗೆ ಹೋಗಲೂ ಕೂಡ ಕುಮಾರಸ್ವಾಮಿ ನನ್ನ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿರು.

ಎಲ್ಲ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಬಳಸಿ ಬಿಸಾಡುತ್ತವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಶಿವಸೇನೆ, ಚಂದ್ರಬಾಬು ನಾಯ್ಡು ಇವರೆಲ್ಲಾ ಮೈತ್ರಿಯಿಂದ ಹೊರಗೆ ಬರಲು ಇದೇ ಕಾರಣ ಎಂದರು.
ಮೋದಿ ಅವರ ಅಲೆಯ ಬಗ್ಗೆ ಮಾತನಾಡಿದ ಅವರು, ಮೋದಿ ಆಡಳಿತದಲ್ಲಿ ಮುಸ್ಲಿಂರಿಗೆ ಕ್ಷೇಮವಲ್ಲದ ವಾತಾವರಣ ನಿರ್ಮಾಣವಾಗಿದೆ. ಗೋ ರಕ್ಷಣೆ ಹೆಸರಲ್ಲಿ ಕೊಲೆಗಳೇ ಆಗಿವೆ. ಇವೆಲ್ಲಾ ಮೋದಿ ಅವರ ವರ್ಚಸ್ಸನ್ನು ಕುಗ್ಗಿಸಿವೆ ಎಂದರು.
ವಿಧಾನಸಭೆ ಚುನಾವಣೆಗಳ ಬಗ್ಗೆ ಮಾತನಾಡಿದ ದೇವೇಗೌಡ ಅವರು, ಇದು ಎಲ್ಲ ಪಕ್ಷಗಳಿಗೂ 2019ರ ಚುನಾವಣೆಗೆ ಪರೀಕ್ಷಾ ಕಣವಾಗಿದೆ. ಇಲ್ಲಿನ ಗೆಲುವು ಮುಂದಿನ ವರ್ಷದ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications