ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಇಷ್ಟೆಲ್ಲಾ ಲಾಭಗಳು ಆಗುತ್ತವಂತೆ
Recommended Video

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಒತ್ತಾಯಿಸಿ ಆಗಸ್ಟ್ 2ರಂದು ಉತ್ತರ ಕರ್ನಾಟಕ ಜಿಲ್ಲೆಗಳ ಬಂದ್ಗೆ ಕರೆ ನೀಡಲಾಗಿದೆ.
ಕೆಲವು ವರ್ಷಗಳಿಂದ ಗುಪ್ತಗಾಮಿನಿಯಂತಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗು ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಹೊರ ಬಂದಿದ್ದು. ರಾಜಕಾರಣಿಗಳು ಹಾಗೂ ಸ್ವಾಮೀಜಿಗಳ ಬೆಂಬಲವೂ ದೊರೆತಿರುವುದು ಹೋರಾಟಕ್ಕೆ ಬಲ ಹೆಚ್ಚಿಸಿದೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಏನೇನು ಲಾಭಗಳಾಗುತ್ತವೆ ಎಂದು ಪತ್ಯೇಕ ರಾಜ್ಯ ಹೋರಾಟಗಾರರು ಕರಪತ್ರ ಹೊರ ತಂದಿದ್ದು, ಅವರು ನೀಡಿರುವ ಲಾಭಗಳ ಪಟ್ಟಿ ಈ ಕೆಳಕಂಡಂತಿದೆ ನೋಡಿ, ವಿಮರ್ಶಿಸಿ.

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್
ಈ ಬಾರಿ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಧ್ವನಿ ಕೇಳಿಬಂದಿದೆ. ಬಜೆಟ್ ನಂತರವೇ ಉತ್ತರ ಕರ್ನಾಟಕ ಪ್ರತ್ಯೇಕವಾಗಬೇಕೆಂಬ ಹೊರಾಟ ತೀವ್ರವಾಗಿದೆ. ಒಂದು ವೇಳೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಅದಕ್ಕೆ ಪ್ರತ್ಯೇಕ ಬಜೆಟ್ ದೊರಕಲಿದೆ. ಕೇಂದ್ರವು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಅನುದಾನ ಬಿಡುಗಡೆ ಮಾಡಲಿದೆ.

ರಾಜಧಾನಿ ಸಮೀಪ
ಉತ್ತರ ಕರ್ನಾಟಕದ ಜನರ ಪ್ರಮುಖ ದೂರೆಂದರೆ ರಾಜ್ಯ ರಾಜಧಾನಿಯಿಂದ ಬಹಳ ದೂರ ಉಳಿದಿರುವುದು. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಿ ವರ್ಷಕ್ಕೊಮ್ಮೆ ಆಡಳಿತವನ್ನು ಬೆಳಗಾವಿಗೆ ವರ್ಗಾಯಿಸಿದರೂ ಕೂಡ ಅದು ತಾತ್ಕಾಲಿಕವಷ್ಟೆ. ರಾಜಧಾನಿಗೆ ಹತ್ತಿರವಿರುವ ಜಿಲ್ಲೆಗಳು ಅಭಿವೃದ್ಧಿಯಲ್ಲಿ ನೇರವಾಗಿ ಪಾಲ್ಗೊಳ್ಳುತ್ತವೆ ಆದರೆ ದೂರ ಇರುವವ ಅಭಿವೃದ್ಧಿಯಲ್ಲಿ ಹಿಂದುಳಿಯುತ್ತವೆ. ಉ.ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ರಾಜಧಾನಿ ಹತ್ತಿರದಲ್ಲೇ ದೊರಕುತ್ತದೆ ಎಂಬುದು ಪ್ರತ್ಯೇಕತಾವಾದಿಗಳ ಕೂಗು.

ಚಿಕ್ಕ ರಾಜ್ಯ-ಚೊಕ್ಕ ಆಡಳಿತ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಚಿಕ್ಕದಾದ ರಾಜ್ಯ ನಿರ್ಮಾಣವಾಗುತ್ತದೆ. ಆಗ ಆಡಳಿತ ಸುಲಭವಾಗುತ್ತದೆ ಹಾಗೂ ಸುಗಮವಾಗುತ್ತದೆ. ಚಿಕ್ಕ ರಾಜ್ಯದ ಆಡಳಿತವನ್ನು ಚೊಕ್ಕವಾಗಿ ಮಾಡಬಹುದು ಎಂಬುದು ಅವರ ವಾದ. ಇದಕ್ಕೆ ಅಂಬೇಡ್ಕರ್ ಅವರು ಹೇಳಿದ್ದ ಚಿಕ್ಕ-ಚಿಕ್ಕ ರಾಜ್ಯಗಳ ನಿರ್ಮಾಣದ ಅವಶ್ಯಕತೆಯನ್ನು ಉದಾಹರಣೆಯಾಗಿ ನೀಡುತ್ತಾರೆ.

ನಮ್ಮ ತೆರಿಗೆ-ನಮ್ಮ ಅಭಿವೃದ್ಧಿ
ಉ.ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಆ ರಾಜ್ಯಕ್ಕೆ ಒಳಪಡುವ 13 ಜಿಲ್ಲೆಗಳಲ್ಲಿ ಕ್ರೂಡೀಕೃತವಾಗುವ ತೆರಿಗೆ ಹಣವನ್ನು ರಾಜ್ಯದ ಅಭಿವೃದ್ಧಿಗೆ ಬಳಸಬಹುದು ಎಂಬ ವಾದವನ್ನು ಪ್ರತ್ಯೇಕ ರಾಜ್ಯ ಕೂಗಿನ ನಾಯಕರು ಮುಂದಿಟ್ಟಿದ್ದಾರೆ. ನಮ್ಮ ತೆರಿಗೆ ಹಣದಲ್ಲಿ ಬೆಂಗಳೂರು, ಮೈಸೂರು ಅಭಿವೃದ್ಧಿ ಆಗುವುದು ಬೇಡ ಎಂಬುದು ಅವರ ವಾದ.

ಪ್ರಾದೇಶಿಕ ಸ್ವಾತಂತ್ರ್ಯತೆ
ಪ್ರತ್ಯೇಕ ರಾಜ್ಯವಾದರೆ ಪ್ರಾದೇಶಿಕ ಸ್ವಾತಂತ್ರ್ಯತೆ ದೊರಕುತ್ತದೆ. ಅಭಿವೃದ್ಧಿ ಬಗ್ಗೆ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ದಕ್ಷಿಣದಿಂದ ಉತ್ತರಕ್ಕೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟಬಹುದು. ಅಲ್ಲದೆ ಒಂದೇ ಭಾಷೆಯ ಎರಡು ರಾಜ್ಯಗಳ ಉಗಮ ಸಹ ಆಗುತ್ತದೆ ಎನ್ನುತ್ತಾರೆ ಹೊರಾಟಗಾರರು.

ರಾಜಕೀಯ ಬಲವರ್ಧನೆ
ಉತ್ತರ ಕರ್ನಾಟಕದ ರಾಜಕಾರಣಿಗಳು ದಕ್ಷಿಣ ಕರ್ನಾಟಕ ಪ್ರಬಲ ರಾಜಕಾರಣಿಗಳ ಪ್ರಭಾವದಿಂದ ಹೊರಬಂದು ತಮ್ಮದೇ ಅಸ್ಥಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ತಮ್ಮ ಭಾಗದ ಬೇಕು ಬೇಡಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ಮತ್ತೊಬ್ಬರ ಮರ್ಜಿ ಕೇಳುವ ಅವಶ್ಯಕತೆ ಇರುವುದಿಲ್ಲ.

ಉದ್ಯೋಗ ಸೃಷ್ಠಿ
ಉತ್ತರ ಕರ್ನಾಟಕ ಭಾಗದಲ್ಲಿಯೂ ಸಹ ಐಐಟಿಗಳ ಸ್ಥಾಪನೆ ಮಾಡಬಹುದು, ಐಟಿ, ಬಿಟಿ ಸಂಸ್ಥೆಗಳನ್ನು ಸ್ಥಾಪನೆ ಮಾಡಿ ನಮ್ಮ ಯುವಕರು ದಕ್ಷಿಣಕ್ಕೆ ವಲಸೆ ಹೋಗುವುದನ್ನು ತಡೆಯಬಹುದು. ನಮ್ಮ ಯುವಕರಿಗೆ ಇಲ್ಲಿಯೇ ಉದ್ಯೋಗ ಒದಗಿಸಬಹುದು ಎಂದು ಹೇಳುತ್ತಾರೆ ಪ್ರತ್ಯೇಕ ರಾಜ್ಯ ಹೋರಾಟಗಾರರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications